AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆಂದು ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯನ ಬಂಧನ

ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳ ಆಧಾರ ಮೇಲೆ ದೂರು ದಾಖಲಾಗುತ್ತಿದ್ದಂತೆ ಡಾ. ಅಹ್ಮದ್ ತಲೆ ಮರೆಸಿಕೊಂಡಿದ್ದ. ಕೊನೆಗೂ ಮಹಬೂಬ್‌ನಗರ ಜಿಲ್ಲೆಯ ಉದ್ದಾನಪುರದಲ್ಲಿ ಶುಕ್ರವಾರ(ಮಾರ್ಚ್​​​ 29) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಚಿಕಿತ್ಸೆಗೆಂದು ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯನ ಬಂಧನ
Doctor Arrested
ಅಕ್ಷತಾ ವರ್ಕಾಡಿ
|

Updated on: Mar 30, 2024 | 1:04 PM

Share

ತೆಲಂಗಾಣ: ಚಿಕಿತ್ಸೆಗೆಂದು ಬರುವ ಮಹಿಳಾ ರೋಗಿಗಳ ನಗ್ನ ಫೋಟೋಗಳನ್ನು ತೆಗೆದು, ಅವರೊಂದಿಗೆ ಅಸಭ್ಯವಾಗಿ ವರ್ತಿಸುವ ಆರೋಪದ ಮೇಲೆ ವಿಕಾರಾಬಾದ್ ಜಿಲ್ಲೆಯ ತಾಂಡೂರ್ ಪಟ್ಟಣದ ಡಾ. ಅಹ್ಮದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ತಾಂಡೂರಿನ ಅಹ್ಮದ್ ಆರ್‌ಎಂಪಿ ವೈದ್ಯರಾಗಿ ಸ್ಥಳೀಯ ಕ್ಲಿನಿಕ್ ನಡೆಸುತ್ತಿದ್ದು, ಅಲ್ಲಿಗೆ ಬರುವ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ಚಿಕಿತ್ಸೆಗೆಂದು ಆತನ ಬಳಿಗೆ ಹೋದಾಗ ಆಕೆಯನ್ನು ಪರೀಕ್ಷೆಯ ಹೆಸರಿನಲ್ಲಿ ಬೆತ್ತಲೆಯಾಗಿಟ್ಟು ವಿಡಿಯೋ ಮಾಡಿದ್ದಾನೆ. ಇದಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ. ಇದರಿಂದ ಸಂತ್ರಸ್ತೆ ತೀವ್ರ ನೊಂದಿದ್ದು, ಮಾರ್ಚ್​​​ 11ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳ ಆಧಾರ ಮೇಲೆ ದೂರು ದಾಖಲಾಗುತ್ತಿದ್ದಂತೆ ಡಾ. ಅಹ್ಮದ್ ತಲೆ ಮರೆಸಿಕೊಂಡಿದ್ದ. ಕೊನೆಗೂ ಮಹಬೂಬ್‌ನಗರ ಜಿಲ್ಲೆಯ ಉದ್ದಾನಪುರದಲ್ಲಿ ಶುಕ್ರವಾರ(ಮಾರ್ಚ್​​​ 29) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ತನಿಖೆ ನಡೆಸಿದಾಗ, ಆತನನ್ನು ಆರ್‌ಎಂಪಿ ಎಂದು ಗುರುತಿಸುವ ಯಾವುದೇ ಗುರುತಿನ ದಾಖಲೆಗಳಿಲ್ಲ. ಇಷ್ಟು ದಿನಗಳ ವರೆಗೆ ಸ್ಥಳೀಯರನ್ನು ಮೋಸಗೊಳಿಸಿದ್ದ ಎಂದು ತಿಳಿದುಬಂದಿದೆ.

​​​ಇದನ್ನೂ ಓದಿ: ಯುವತಿಯ ಕಿಡ್ನಿ ವೈಫಲ್ಯಕ್ಕೆ ಕಾರಣವಾದ ಹೇರ್ ಸ್ಟ್ರೈಟ್ನಿಂಗ್ ಟ್ರೀಟ್​​ಮೆಂಟ್​​​​​​

ಇದೀಗಾ ಈ ನಕಲಿ ವೈದ್ಯನ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ, ವಂಚನೆ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ಬೇರೆ ಯಾರಾದರೂ ಸಂತ್ರಸ್ತರಾಗಿದ್ದರೆ ಅವರ ವಿವರ ನೀಡಿ.ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ