AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು

ಕೊವಿಡ್​ ಸೋಂಕಿನ ತೀವ್ರತೆಯಿಂದ ಸಾಯುತ್ತಿರುವ ರೋಗಿಯ ಮಗ ತನ್ನ ಅಮ್ಮನೊಂದಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮನಕಲಕುವ ಘಟನೆಯೊಂದು ನಡೆದಿದೆ.

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 13, 2021 | 5:05 PM

ಕೊವಿಡ್​ ಸೋಂಕಿನ ತೀವ್ರತೆಯಿಂದ ಸಾಯುತ್ತಿರುವ ರೋಗಿಯ ಮಗ ತನ್ನ ಅಮ್ಮನೊಂದಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮನಕಲಕುವ ಘಟನೆಯೊಂದು ನಡೆದಿದೆ. ಈ ಕುರಿತಂತೆ ವೈದ್ಯರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಳ್ಳುತ್ತಿದ್ದಂತೆಯೇ  ವಿಷಯ ತಿಳಿದ ಅನೇಕರು ಮನನೊಂದು ಕಣ್ಣೀರು ಹಾಕಿದ್ದಾರೆ.

ತಾಯಿ ಮಗನ ಕೊನೆಯ ಭೇಟಿ ಎಂದು ಇಬ್ಬರಿಗೂ ತಿಳಿದಿತ್ತು. ಅಮ್ಮನೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮಗನ ಮನ ನೊಂದಿತ್ತು. ಅಮ್ಮನನ್ನು ಇನ್ನು ನೋಡಲು ಸಾಧ್ಯವಿಲ್ಲ ಎಂಬ ಕೊರಗು ಕಣ್ಣಿನ ನೀರಿನ ಮೂಲಕ ಹರಿ ಬರುತ್ತಿತ್ತು. ವಿಧಿಯಾಟಕ್ಕೆ ಹೊಣೆ ಯಾರು ಎಂಬಂತೆ ಕಷ್ಟವಾದರೂ ಸತ್ಯವನ್ನು ಅರಗಿಸಿಕೊಳ್ಳಲೇ ಬೇಕಿತ್ತು. ಕೊನೇ ಕ್ಷಣದಲ್ಲಿ ಅಮ್ಮನಿಗಾಗಿ ಹಾಡೊಂದು ಹೇಳಿ ವಿದಾಯ ಹೇಳಿದ ಘಟನೆಯೊಂದು ಎಲ್ಲರ ಮನಕಲಕುಂತಿದೆ.

ಮಗ ಸೋಹಮ್​ ಚಟರ್ಜಿ ಅವರು ವೈದ್ಯರಾದ ದೀಪ್ಶಿಕಾ ಘೋಷ್​ ಅವರ ಬಳಿ ಅಮ್ಮನೊಂದಿಗೆ ಮಾತನಾಡಲು ನಿಮ್ಮ ಕೆಲ ಸಮಯವನ್ನು ಕೊಡಿ ಎಂದು ಕೇಳಿ ವಿಡಿಯೋ ಕಾಲ್​ ಮಾಡುತ್ತಾರೆ. ಇನ್ನೂ ಕೆಲ ಸಮಯ ಅಮ್ಮನೊಂದಿಗೆ ಕಳೆಯುವುದಾಗಿ ಹೇಳಿ, ಅಮ್ಮನಿಗಾಗಿ ಹಾಡೊಂದನ್ನು ಹಾಡುತ್ತಾರೆ. ಜನಪ್ರಿಯ ಹಿಂದಿ ಹಾಡಾದ ‘ತೇರಾ ಮುಜ್ಸೆ ಹೈ ಪೆಹ್ಲೆ ಕಾ ನತಾ ಕೊಯಿ’ಎಂಬ ಹಾಡನ್ನು ತನ್ನ ತಾಯಿಗಾಗಿ ಹಾಡುತ್ತಾರೆ. ಈ ಹಾಡು ಸಿನಿಮಾದಲ್ಲಿ ಹಲವು ವರ್ಷಗಳ ಬಳಿಕ ತಾಯಿ ಮತ್ತು ಮಗ ಒಂದಾಗುವ ಕ್ಷಣದಲ್ಲಿ ಹಾಡುವ ಚಿತ್ರಗೀತೆಯಾಗಿದೆ’  ಈ ಕುರಿತಾಗಿ ವೈದ್ಯರು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇಂದು ಆಸ್ಪತ್ರೆಯಲ್ಲಿ ನನ್ನ ಶಿಫ್ಟ್​ನ ಕೊನೆಯಲ್ಲಿ ನಡೆದ ಘಟನೆ. ವಿಡಿಯೋ ಕರೆಯ ಕೊನೆಯ ಭೇಟಿಯಲ್ಲಿ ತಾಯಿ ಮತ್ತು ಮಗನ ಸಂಭಾಷಣೆಯನ್ನು ಕೇಳುತ್ತಾ ಅಲ್ಲಿಯೇ ನಿಂತಿದ್ದೆ. ಸೋಹಮ್​ ಚಟರ್ಜಿ ಅವರು ತನ್ನ ತಾಯಿಗೆ ಹಾಡುತ್ತಿರುವುದನ್ನು ನೋಡುತ್ತಿದ್ದಂತೆಯೇ, ದಾದಿಯರು ಸಹ ಬಂದು ಮೌನವಾಗಿ ನಿಂತಿದ್ದರು. ಎಲ್ಲರ ಕಣ್ಣುಗಳು ತೇವವಾಗಿತ್ತು. ಮನಕಲಕುವ ದೃಶ್ಯಕ್ಕೆ ಎದೆ ಭಾರವಾಗಿತ್ತು ಎಂದು ವೈದ್ಯರು ಬರೆದುಕೊಂಡಿದ್ದಾರೆ.

ಇದನ್ನು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ನೆಟ್ಟಿಗರಿಂದ ಅಗಾಧ ಪ್ರತಿಕ್ರಿಯೆಗಳು ಬಂದಿವೆ. ಇಂತಹ ಮನಮಿಡಿಯುವ ಕಥೆ ಕೇಳಿದ ನೆಟ್ಟಿಗರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಕೊನೆಯುಸಿರೆಳೆದ ಮಗ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ