AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು

ಕೊವಿಡ್​ ಸೋಂಕಿನ ತೀವ್ರತೆಯಿಂದ ಸಾಯುತ್ತಿರುವ ರೋಗಿಯ ಮಗ ತನ್ನ ಅಮ್ಮನೊಂದಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮನಕಲಕುವ ಘಟನೆಯೊಂದು ನಡೆದಿದೆ.

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು
ಸಾಂದರ್ಭಿಕ ಚಿತ್ರ
shruti hegde
|

Updated on: May 13, 2021 | 5:05 PM

Share

ಕೊವಿಡ್​ ಸೋಂಕಿನ ತೀವ್ರತೆಯಿಂದ ಸಾಯುತ್ತಿರುವ ರೋಗಿಯ ಮಗ ತನ್ನ ಅಮ್ಮನೊಂದಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮನಕಲಕುವ ಘಟನೆಯೊಂದು ನಡೆದಿದೆ. ಈ ಕುರಿತಂತೆ ವೈದ್ಯರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಳ್ಳುತ್ತಿದ್ದಂತೆಯೇ  ವಿಷಯ ತಿಳಿದ ಅನೇಕರು ಮನನೊಂದು ಕಣ್ಣೀರು ಹಾಕಿದ್ದಾರೆ.

ತಾಯಿ ಮಗನ ಕೊನೆಯ ಭೇಟಿ ಎಂದು ಇಬ್ಬರಿಗೂ ತಿಳಿದಿತ್ತು. ಅಮ್ಮನೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮಗನ ಮನ ನೊಂದಿತ್ತು. ಅಮ್ಮನನ್ನು ಇನ್ನು ನೋಡಲು ಸಾಧ್ಯವಿಲ್ಲ ಎಂಬ ಕೊರಗು ಕಣ್ಣಿನ ನೀರಿನ ಮೂಲಕ ಹರಿ ಬರುತ್ತಿತ್ತು. ವಿಧಿಯಾಟಕ್ಕೆ ಹೊಣೆ ಯಾರು ಎಂಬಂತೆ ಕಷ್ಟವಾದರೂ ಸತ್ಯವನ್ನು ಅರಗಿಸಿಕೊಳ್ಳಲೇ ಬೇಕಿತ್ತು. ಕೊನೇ ಕ್ಷಣದಲ್ಲಿ ಅಮ್ಮನಿಗಾಗಿ ಹಾಡೊಂದು ಹೇಳಿ ವಿದಾಯ ಹೇಳಿದ ಘಟನೆಯೊಂದು ಎಲ್ಲರ ಮನಕಲಕುಂತಿದೆ.

ಮಗ ಸೋಹಮ್​ ಚಟರ್ಜಿ ಅವರು ವೈದ್ಯರಾದ ದೀಪ್ಶಿಕಾ ಘೋಷ್​ ಅವರ ಬಳಿ ಅಮ್ಮನೊಂದಿಗೆ ಮಾತನಾಡಲು ನಿಮ್ಮ ಕೆಲ ಸಮಯವನ್ನು ಕೊಡಿ ಎಂದು ಕೇಳಿ ವಿಡಿಯೋ ಕಾಲ್​ ಮಾಡುತ್ತಾರೆ. ಇನ್ನೂ ಕೆಲ ಸಮಯ ಅಮ್ಮನೊಂದಿಗೆ ಕಳೆಯುವುದಾಗಿ ಹೇಳಿ, ಅಮ್ಮನಿಗಾಗಿ ಹಾಡೊಂದನ್ನು ಹಾಡುತ್ತಾರೆ. ಜನಪ್ರಿಯ ಹಿಂದಿ ಹಾಡಾದ ‘ತೇರಾ ಮುಜ್ಸೆ ಹೈ ಪೆಹ್ಲೆ ಕಾ ನತಾ ಕೊಯಿ’ಎಂಬ ಹಾಡನ್ನು ತನ್ನ ತಾಯಿಗಾಗಿ ಹಾಡುತ್ತಾರೆ. ಈ ಹಾಡು ಸಿನಿಮಾದಲ್ಲಿ ಹಲವು ವರ್ಷಗಳ ಬಳಿಕ ತಾಯಿ ಮತ್ತು ಮಗ ಒಂದಾಗುವ ಕ್ಷಣದಲ್ಲಿ ಹಾಡುವ ಚಿತ್ರಗೀತೆಯಾಗಿದೆ’  ಈ ಕುರಿತಾಗಿ ವೈದ್ಯರು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇಂದು ಆಸ್ಪತ್ರೆಯಲ್ಲಿ ನನ್ನ ಶಿಫ್ಟ್​ನ ಕೊನೆಯಲ್ಲಿ ನಡೆದ ಘಟನೆ. ವಿಡಿಯೋ ಕರೆಯ ಕೊನೆಯ ಭೇಟಿಯಲ್ಲಿ ತಾಯಿ ಮತ್ತು ಮಗನ ಸಂಭಾಷಣೆಯನ್ನು ಕೇಳುತ್ತಾ ಅಲ್ಲಿಯೇ ನಿಂತಿದ್ದೆ. ಸೋಹಮ್​ ಚಟರ್ಜಿ ಅವರು ತನ್ನ ತಾಯಿಗೆ ಹಾಡುತ್ತಿರುವುದನ್ನು ನೋಡುತ್ತಿದ್ದಂತೆಯೇ, ದಾದಿಯರು ಸಹ ಬಂದು ಮೌನವಾಗಿ ನಿಂತಿದ್ದರು. ಎಲ್ಲರ ಕಣ್ಣುಗಳು ತೇವವಾಗಿತ್ತು. ಮನಕಲಕುವ ದೃಶ್ಯಕ್ಕೆ ಎದೆ ಭಾರವಾಗಿತ್ತು ಎಂದು ವೈದ್ಯರು ಬರೆದುಕೊಂಡಿದ್ದಾರೆ.

ಇದನ್ನು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ನೆಟ್ಟಿಗರಿಂದ ಅಗಾಧ ಪ್ರತಿಕ್ರಿಯೆಗಳು ಬಂದಿವೆ. ಇಂತಹ ಮನಮಿಡಿಯುವ ಕಥೆ ಕೇಳಿದ ನೆಟ್ಟಿಗರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಕೊನೆಯುಸಿರೆಳೆದ ಮಗ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ