AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು

ಕೊವಿಡ್​ ಸೋಂಕಿನ ತೀವ್ರತೆಯಿಂದ ಸಾಯುತ್ತಿರುವ ರೋಗಿಯ ಮಗ ತನ್ನ ಅಮ್ಮನೊಂದಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮನಕಲಕುವ ಘಟನೆಯೊಂದು ನಡೆದಿದೆ.

ಕೊರೊನಾ ಸೋಂಕಿನಿಂದ ಸಾಯುತ್ತಿದ್ದ ತನ್ನ ತಾಯಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮಗ; ಮನಕಲಕುವ ಕಥೆ ಹಂಚಿಕೊಂಡ ವೈದ್ಯರು
ಸಾಂದರ್ಭಿಕ ಚಿತ್ರ
shruti hegde
|

Updated on: May 13, 2021 | 5:05 PM

Share

ಕೊವಿಡ್​ ಸೋಂಕಿನ ತೀವ್ರತೆಯಿಂದ ಸಾಯುತ್ತಿರುವ ರೋಗಿಯ ಮಗ ತನ್ನ ಅಮ್ಮನೊಂದಿಗೆ ವಿಡಿಯೋ ಕರೆಯಲ್ಲಿ ಹಾಡು ಹೇಳಿ ವಿದಾಯ ಹೇಳಿದ ಮನಕಲಕುವ ಘಟನೆಯೊಂದು ನಡೆದಿದೆ. ಈ ಕುರಿತಂತೆ ವೈದ್ಯರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಳ್ಳುತ್ತಿದ್ದಂತೆಯೇ  ವಿಷಯ ತಿಳಿದ ಅನೇಕರು ಮನನೊಂದು ಕಣ್ಣೀರು ಹಾಕಿದ್ದಾರೆ.

ತಾಯಿ ಮಗನ ಕೊನೆಯ ಭೇಟಿ ಎಂದು ಇಬ್ಬರಿಗೂ ತಿಳಿದಿತ್ತು. ಅಮ್ಮನೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮಗನ ಮನ ನೊಂದಿತ್ತು. ಅಮ್ಮನನ್ನು ಇನ್ನು ನೋಡಲು ಸಾಧ್ಯವಿಲ್ಲ ಎಂಬ ಕೊರಗು ಕಣ್ಣಿನ ನೀರಿನ ಮೂಲಕ ಹರಿ ಬರುತ್ತಿತ್ತು. ವಿಧಿಯಾಟಕ್ಕೆ ಹೊಣೆ ಯಾರು ಎಂಬಂತೆ ಕಷ್ಟವಾದರೂ ಸತ್ಯವನ್ನು ಅರಗಿಸಿಕೊಳ್ಳಲೇ ಬೇಕಿತ್ತು. ಕೊನೇ ಕ್ಷಣದಲ್ಲಿ ಅಮ್ಮನಿಗಾಗಿ ಹಾಡೊಂದು ಹೇಳಿ ವಿದಾಯ ಹೇಳಿದ ಘಟನೆಯೊಂದು ಎಲ್ಲರ ಮನಕಲಕುಂತಿದೆ.

ಮಗ ಸೋಹಮ್​ ಚಟರ್ಜಿ ಅವರು ವೈದ್ಯರಾದ ದೀಪ್ಶಿಕಾ ಘೋಷ್​ ಅವರ ಬಳಿ ಅಮ್ಮನೊಂದಿಗೆ ಮಾತನಾಡಲು ನಿಮ್ಮ ಕೆಲ ಸಮಯವನ್ನು ಕೊಡಿ ಎಂದು ಕೇಳಿ ವಿಡಿಯೋ ಕಾಲ್​ ಮಾಡುತ್ತಾರೆ. ಇನ್ನೂ ಕೆಲ ಸಮಯ ಅಮ್ಮನೊಂದಿಗೆ ಕಳೆಯುವುದಾಗಿ ಹೇಳಿ, ಅಮ್ಮನಿಗಾಗಿ ಹಾಡೊಂದನ್ನು ಹಾಡುತ್ತಾರೆ. ಜನಪ್ರಿಯ ಹಿಂದಿ ಹಾಡಾದ ‘ತೇರಾ ಮುಜ್ಸೆ ಹೈ ಪೆಹ್ಲೆ ಕಾ ನತಾ ಕೊಯಿ’ಎಂಬ ಹಾಡನ್ನು ತನ್ನ ತಾಯಿಗಾಗಿ ಹಾಡುತ್ತಾರೆ. ಈ ಹಾಡು ಸಿನಿಮಾದಲ್ಲಿ ಹಲವು ವರ್ಷಗಳ ಬಳಿಕ ತಾಯಿ ಮತ್ತು ಮಗ ಒಂದಾಗುವ ಕ್ಷಣದಲ್ಲಿ ಹಾಡುವ ಚಿತ್ರಗೀತೆಯಾಗಿದೆ’  ಈ ಕುರಿತಾಗಿ ವೈದ್ಯರು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇಂದು ಆಸ್ಪತ್ರೆಯಲ್ಲಿ ನನ್ನ ಶಿಫ್ಟ್​ನ ಕೊನೆಯಲ್ಲಿ ನಡೆದ ಘಟನೆ. ವಿಡಿಯೋ ಕರೆಯ ಕೊನೆಯ ಭೇಟಿಯಲ್ಲಿ ತಾಯಿ ಮತ್ತು ಮಗನ ಸಂಭಾಷಣೆಯನ್ನು ಕೇಳುತ್ತಾ ಅಲ್ಲಿಯೇ ನಿಂತಿದ್ದೆ. ಸೋಹಮ್​ ಚಟರ್ಜಿ ಅವರು ತನ್ನ ತಾಯಿಗೆ ಹಾಡುತ್ತಿರುವುದನ್ನು ನೋಡುತ್ತಿದ್ದಂತೆಯೇ, ದಾದಿಯರು ಸಹ ಬಂದು ಮೌನವಾಗಿ ನಿಂತಿದ್ದರು. ಎಲ್ಲರ ಕಣ್ಣುಗಳು ತೇವವಾಗಿತ್ತು. ಮನಕಲಕುವ ದೃಶ್ಯಕ್ಕೆ ಎದೆ ಭಾರವಾಗಿತ್ತು ಎಂದು ವೈದ್ಯರು ಬರೆದುಕೊಂಡಿದ್ದಾರೆ.

ಇದನ್ನು ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ನೆಟ್ಟಿಗರಿಂದ ಅಗಾಧ ಪ್ರತಿಕ್ರಿಯೆಗಳು ಬಂದಿವೆ. ಇಂತಹ ಮನಮಿಡಿಯುವ ಕಥೆ ಕೇಳಿದ ನೆಟ್ಟಿಗರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸೋಂಕಿತ ತಾಯಿ ಸಾವಿನ ಸುದ್ದಿ ತಿಳಿದು ಕೊನೆಯುಸಿರೆಳೆದ ಮಗ

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು