Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ

ಕೊಳೆತ ವಾಸನೆ ತಾಳಲಾರದೇ ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು, ಈ ವೇಳೆ ಪಕ್ಕದ ಮನೆಯಲ್ಲೇ ಮಹಿಳೆಯೊಬ್ಬರು 4 ದಿನಗಳ ಹಿಂದೆ ಸತ್ತಿರುವುದು ಬೆಳಕಿಗೆ ಬಂದಿದೆ. ಸ್ವಂತ ಅಮ್ಮ ಸತ್ತಿದ್ದರೂ ಮಗ ಯಾರಿಗೂ ಏನನ್ನೂ ಹೇಳದೆ ಕಳೆದ ನಾಲ್ಕು ದಿನಗಳಿಂದ ತಾಯಿಯ ಶವದ ಬಳಿಯೇ ಕುಳಿತಿದ್ದುದನ್ನು ಕಂಡು ನೆರೆಹೊರೆಯವರು ಶಾಕ್​​ ಆಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ
Follow us
ಅಕ್ಷತಾ ವರ್ಕಾಡಿ
|

Updated on:Aug 02, 2024 | 6:41 PM

ಮಹಾರಾಷ್ಟ್ರ: ತಾಯಿ ಸಾವನ್ನಪ್ಪಿದರೂ ಯಾರಿಗೂ ಹೇಳದೆ ತಾಯಿಯ ಮೃತದೇಹದೊಂದಿಗೆ ನಾಲ್ಕು ದಿನಗಳ ವರೆಗೆ 14 ವರ್ಷದ ಬಾಲಕ ಕಾಲ ಕಳೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ನೆರೆಹೊರೆಯಲ್ಲಿ ವಾಸಿಸುವ ಜನರಿಗೆ ದುರ್ವಾಸನೆ ಬರಲು ಪ್ರಾರಂಭವಾಗಿದ್ದು, ಹುಡುಕಾಟ ನಡೆಸಿದಾಗ ಪಕ್ಕದ ಮನೆಯಲ್ಲಿ 4ದಿನಗಳಿಂದ ಶವವೊಂದು ಕೊಳೆಯುತ್ತಿರುವುದು ಬೆಳಕಿಗೆ ಬಂದಿದೆ. ಬಾಗಿಲು ತೆರೆದಾಗ ಒಳಗಿನ ದೃಶ್ಯ ಕಂಡು ಸ್ಥಳೀಯರು ಶಾಕ್​​ ಆಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

44 ವರ್ಷದ ಮಹಿಳೆ ಸಿಲ್ವಿಯಾ ಡೇನಿಯಲ್ ಮತ್ತು ಆಕೆಯ 14 ವರ್ಷದ ಮಗ ಓಲ್ವಿನ್ ಡೇನಿಯಲ್ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಹಿಳೆ ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿದ್ದಳು. ಇದಾದ ನಂತರ ಮಹಿಳೆಯ ಮಗ ಯಾರಿಗೂ ಏನನ್ನೂ ಹೇಳದೆ ಕಳೆದ ನಾಲ್ಕು ದಿನಗಳಿಂದ ತಾಯಿಯ ಶವದ ಬಳಿಯೇ ಕುಳಿತಿದ್ದ. ಇದಾದ ಬಳಿಕ ಕಟ್ಟಡದ ಕಾವಲುಗಾರ ಹಾಗೂ ನೆರೆಹೊರೆಯವರು ಗೇಟ್ ತೆರೆದಾಗ ಫ್ಲಾಟ್ ಒಳಗಿನಿಂದ ಭಯಾನಕ ವಾಸನೆ ಬಂದಿದೆ. ಮಹಿಳೆಯ ಶವವನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಬಳಿಕ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: 25 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು UPSC ಗೆ ತಯಾರಿ ನಡೆಸುತ್ತಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ

ತಾಯಿ ಯಾವುದೋ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯ ಪುತ್ರ ಓಲ್ವಿನ್ ಡೇನಿಯಲ್ ಪೊಲೀಸರಿಗೆ ತಿಳಿಸಿದ್ದಾರೆ. ಮಗನ ಹೇಳಿಕೆ ಆಧರಿಸಿ ಪೊಲೀಸರು ಮಹಿಳೆ ಸಾವಿನ ವರದಿ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಮಹಿಳೆಯ ಪತಿಯ ಬಗ್ಗೆ ಯಾವುದೇ ಮಾಹಿತಿಯಾಗಲಿ ಅಥವಾ ಇನ್ನಾವುದೇ ಅಕ್ರಮಗಳು ಬಹಿರಂಗವಾಗಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Fri, 2 August 24

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ