AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ

ಕೊಳೆತ ವಾಸನೆ ತಾಳಲಾರದೇ ಸ್ಥಳೀಯರು ಹುಡುಕಾಟ ಪ್ರಾರಂಭಿಸಿದ್ದು, ಈ ವೇಳೆ ಪಕ್ಕದ ಮನೆಯಲ್ಲೇ ಮಹಿಳೆಯೊಬ್ಬರು 4 ದಿನಗಳ ಹಿಂದೆ ಸತ್ತಿರುವುದು ಬೆಳಕಿಗೆ ಬಂದಿದೆ. ಸ್ವಂತ ಅಮ್ಮ ಸತ್ತಿದ್ದರೂ ಮಗ ಯಾರಿಗೂ ಏನನ್ನೂ ಹೇಳದೆ ಕಳೆದ ನಾಲ್ಕು ದಿನಗಳಿಂದ ತಾಯಿಯ ಶವದ ಬಳಿಯೇ ಕುಳಿತಿದ್ದುದನ್ನು ಕಂಡು ನೆರೆಹೊರೆಯವರು ಶಾಕ್​​ ಆಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ
ಅಕ್ಷತಾ ವರ್ಕಾಡಿ
|

Updated on:Aug 02, 2024 | 6:41 PM

Share

ಮಹಾರಾಷ್ಟ್ರ: ತಾಯಿ ಸಾವನ್ನಪ್ಪಿದರೂ ಯಾರಿಗೂ ಹೇಳದೆ ತಾಯಿಯ ಮೃತದೇಹದೊಂದಿಗೆ ನಾಲ್ಕು ದಿನಗಳ ವರೆಗೆ 14 ವರ್ಷದ ಬಾಲಕ ಕಾಲ ಕಳೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ನೆರೆಹೊರೆಯಲ್ಲಿ ವಾಸಿಸುವ ಜನರಿಗೆ ದುರ್ವಾಸನೆ ಬರಲು ಪ್ರಾರಂಭವಾಗಿದ್ದು, ಹುಡುಕಾಟ ನಡೆಸಿದಾಗ ಪಕ್ಕದ ಮನೆಯಲ್ಲಿ 4ದಿನಗಳಿಂದ ಶವವೊಂದು ಕೊಳೆಯುತ್ತಿರುವುದು ಬೆಳಕಿಗೆ ಬಂದಿದೆ. ಬಾಗಿಲು ತೆರೆದಾಗ ಒಳಗಿನ ದೃಶ್ಯ ಕಂಡು ಸ್ಥಳೀಯರು ಶಾಕ್​​ ಆಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

44 ವರ್ಷದ ಮಹಿಳೆ ಸಿಲ್ವಿಯಾ ಡೇನಿಯಲ್ ಮತ್ತು ಆಕೆಯ 14 ವರ್ಷದ ಮಗ ಓಲ್ವಿನ್ ಡೇನಿಯಲ್ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಮಹಿಳೆ ಯಾವುದೋ ಕಾಯಿಲೆಯಿಂದ ಸಾವನ್ನಪ್ಪಿದ್ದಳು. ಇದಾದ ನಂತರ ಮಹಿಳೆಯ ಮಗ ಯಾರಿಗೂ ಏನನ್ನೂ ಹೇಳದೆ ಕಳೆದ ನಾಲ್ಕು ದಿನಗಳಿಂದ ತಾಯಿಯ ಶವದ ಬಳಿಯೇ ಕುಳಿತಿದ್ದ. ಇದಾದ ಬಳಿಕ ಕಟ್ಟಡದ ಕಾವಲುಗಾರ ಹಾಗೂ ನೆರೆಹೊರೆಯವರು ಗೇಟ್ ತೆರೆದಾಗ ಫ್ಲಾಟ್ ಒಳಗಿನಿಂದ ಭಯಾನಕ ವಾಸನೆ ಬಂದಿದೆ. ಮಹಿಳೆಯ ಶವವನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದು ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಬಳಿಕ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: 25 ಲಕ್ಷ ರೂ. ಸಂಬಳದ ಕೆಲಸ ಬಿಟ್ಟು UPSC ಗೆ ತಯಾರಿ ನಡೆಸುತ್ತಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆ

ತಾಯಿ ಯಾವುದೋ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯ ಪುತ್ರ ಓಲ್ವಿನ್ ಡೇನಿಯಲ್ ಪೊಲೀಸರಿಗೆ ತಿಳಿಸಿದ್ದಾರೆ. ಮಗನ ಹೇಳಿಕೆ ಆಧರಿಸಿ ಪೊಲೀಸರು ಮಹಿಳೆ ಸಾವಿನ ವರದಿ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಮಹಿಳೆಯ ಪತಿಯ ಬಗ್ಗೆ ಯಾವುದೇ ಮಾಹಿತಿಯಾಗಲಿ ಅಥವಾ ಇನ್ನಾವುದೇ ಅಕ್ರಮಗಳು ಬಹಿರಂಗವಾಗಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Fri, 2 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ