Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಥಟ್​ ಅಂತ ಹೇಳಿ! ಇವರನ್ನು ಹೀಗೆ ಬೇಸರಗೊಳಿಸಿದ್ದು ಯಾರು?

Na Someshwar: ಈ ಕಾರ್ಯಕ್ರಮದಲ್ಲಿ ಸ್ಪರ್ಧಾಳುಗಳು ನಕಾರಾತ್ಮಕ ತಂತ್ರ ಬಳಸುವುದನ್ನು ತೀವ್ರವಾಗಿ ಖಂಡಿಸಿದ್ದಾರೆ ಸೋಮೇಶ್ವರ. ಹಾಗೆಂದು ಈ ಕಾರ್ಯಕ್ರಮದಿಂದ ಅವರೇನು ಹಿಂದೆ ಸರಿದಿಲ್ಲ. ತಂತ್ರಕ್ಕೆ ಪ್ರತಿತಂತ್ರ ಹೂಡಿದ್ದಾರೆ. ಏನದು?

Viral Video: ಥಟ್​ ಅಂತ ಹೇಳಿ! ಇವರನ್ನು ಹೀಗೆ ಬೇಸರಗೊಳಿಸಿದ್ದು ಯಾರು?
ಡಾ. ನಾ. ಸೋಮೇಶ್ವರ
Follow us
ಶ್ರೀದೇವಿ ಕಳಸದ
|

Updated on:Jul 17, 2023 | 3:46 PM

Quiz Program : ಡಾ. ನಾ ಸೋಮೇಶ್ವರ! (Na Someshwar) ಹೆಸರು ಕೇಳಿದ ತಕ್ಷಣ ಥಟ್​ ಅಂತ ನೆನಪಾಗೋದು ಚಂದನವಾಹಿನಿಯ (Chandana) ಕನ್ನಡ ರಸಪ್ರಶ್ನೆ ಕಾರ್ಯಕ್ರಮ. ಕಳೆದ ಇಪ್ಪತ್ತು ವರ್ಷಗಳಿಂದ ಸಾಮಾನ್ಯ ಜ್ಞಾನ, ವಿಚಾರ ವೈವಿಧ್ಯತೆ ಮತ್ತು ಸರಳ ಪ್ರಸ್ತುತಿಯಿಂದಾಗಿ ಕೋಟ್ಯಂತರ ಜನರನ್ನು ಇದು ಹಿಡಿದಿಟ್ಟುಕೊಂಡಿದೆ. ಸೋಮೇಶ್ವರರು ಅಂದಿನಿಂದ ಇಂದಿನವರೆಗೂ ಒಂದೇ ಲಯದಲ್ಲಿ ಒಂದೇ ಹದದಲ್ಲಿ ನಿರೂಪಿಸುತ್ತಾ ತಮ್ಮ ಶೈಲಿಯನ್ನು ಕಾಯ್ದುಕೊಂಡಿದ್ದಾರೆ. ಆದರೆ ಇದೀಗ ಈ ಕಾರ್ಯಕ್ರಮದ ಶೀರ್ಷಿಕೆಯನ್ನೇ ಬದಲಾಯಿಸುವಷ್ಟು ಕೋಪ ಅವರಿಗೆ ಬಂದಿದೆ! ಹಾಗಾಗಿ ಇದೀಗ ‘ಥಟ್​​ ಅಂತ ಹಚ್ಚಿ’! ಅರೆ ಹೀಗೇಕೆ ಮಾಡಿದರು? ಎಂದಾದರೂ ಸೋಮೇಶ್ವರರು ಹೀಗೆ ಕೋಪಗೊಂಡಿದ್ದನ್ನು ನೀವು ನೋಡಿದ್ದಿದೆಯೇ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by ULLAS Agarbathi (@ullasagarbathi)

ನೋಡಿದಿರಲ್ಲ ‘ಥಟ್​ ಅಂತ ಹಚ್ಚಿ’ ಸೋಮೇಶ್ವರರನ್ನು? ಈಗಾಗಲೇ ಇದರ ಹೂರಣ ನಿಮ್ಮ ಅರಿವಿಗೆ ಬಂದಿರಲು ಸಾಕು. ಅಗರಬತ್ತಿ ಕಂಪೆನಿಯ ಪ್ರಾಯೋಜಕತ್ವದಲ್ಲಿ ಈ ಎಪಿಸೋಡ್​ ಮೂಡಿಬರುತ್ತಿರುವುದರಿಂದ ಪ್ರೋಮೋದ ಪರಿಕಲ್ಪನೆಯನ್ನು ಹೀಗೆ ಕಟ್ಟಿಕೊಡಲಾಗಿದ್ದು, ಜತೆಗೆ ತಾತ್ಕಾಲಿಕವಾಗಿ ಶೀರ್ಷಿಕೆಯಲ್ಲಿ ಮಾರ್ಪಾಡು ಮಾಡಲಾಗಿದೆ. ಅನುಭಾ ಎನ್ನುವವರು ತಮ್ಮ ಟ್ವಿಟರ್​ ಖಾತೆಯಲ್ಲಿಯೂ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಪ್ರೋಮೋ ನಿರ್ಮಿಸಿದ ತಂಡಕ್ಕೆ ಅಭಿನಂದನೆ ಎಂದಿದ್ದಾರೆ. ಅನೇಕರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ.

ನನ್ನ ಅಮ್ಮ ಬೇಸಿಗೆ ರಜೆಯಲ್ಲಿ ಈ ಕಾರ್ಯಕ್ರಮದಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಉತ್ತರಗಳನ್ನು ಬರೆಯಲು ಹೇಳುತ್ತಿದ್ದದ್ದು ನನಗಿನ್ನೂ ನೆನಪಿದೆ ಎಂದಿದ್ದಾರೆ ಒಬ್ಬರು. ಇದು ತುಂಬಾ ಸುಂದರವಾಗಿ ಮೂಡಿಬಂದಿದೆ ಎಂದಿದ್ದಾರೆ ಅನೇಕರು. ಇವರು ನನ್ನ ನೆಚ್ಚಿನ ಕ್ವಿಝ್​ ಮಾಸ್ಟರ್​. ಇವರಿಗೆ ನಟನೆಯೂ ಗೊತ್ತಿದೆ! ಎಂದಿದ್ದಾರೆ ಕೆಲವರು. ಸುಮಾರು 2,000ಕ್ಕಿಂತಲೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. ಸುಮಾರು 50 ಜನರು ರೀಟ್ವೀಟ್ ಮಾಡಿದ್ದಾರೆ.

ನಕಾರಾತ್ಮಕ ತಂತ್ರಗಳಿಂದ ತಪ್ಪಿಸಿಕೊಂಡು ಹೊರಬರಲು ಗಂಧದ ಕಡ್ಡಿ ಹಚ್ಚಿದರೆ ಸಾಕೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 3:42 pm, Mon, 17 July 23

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್