Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗವಂತನೇ ನನ್ನ ಪತಿ, ಕೃಷ್ಣನ ಮೂರ್ತಿಯನ್ನು ಮದುವೆಯಾದ ಯುವತಿ

ನನ್ನ ಜೀವನವನ್ನೇ ಶ್ರೀಕೃಷ್ಣನಿಗೆ ಅರ್ಪಿಸುತ್ತಿರುವೇ ಎಂದು ಹಸೆಮನೆ ಏರಿ, ವಿಗ್ರಹದೊಂದಿಗೆ ವಿವಾಹವಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಭಗವಂತನೇ ನನ್ನ ಪತಿ, ಕೃಷ್ಣನ ಮೂರ್ತಿಯನ್ನು ಮದುವೆಯಾದ ಯುವತಿ
ಶ್ರೀಕೃಷ್ಣನ ಮೂರ್ತಿಯನ್ನು ಮದುವೆಯಾದ ಯುವತಿImage Credit source: Zee News
Follow us
ಅಕ್ಷತಾ ವರ್ಕಾಡಿ
|

Updated on:Mar 14, 2023 | 1:11 PM

ತನ್ನ ಸರ್ವಸ್ವವನ್ನೂ ಶ್ರೀಕೃಷ್ಣನಿಗೆ ಮುಡಿಪಾಗಿಟ್ಟ ಮೀರಾಬಾಯಿಯ ಕಥೆಗಳನ್ನು ನೀವೂ ಕೇಳಿರುತ್ತೀರಿ. ಆದರೆ ಇಂತದ್ದೇ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಾನು ಮದುವೆಯಾದರೇ ಶ್ರೀಕೃಷ್ಣನನ್ನೇ, ನನ್ನ ಜೀವನವನ್ನೇ ಶ್ರೀಕೃಷ್ಣನಿಗೆ ಅರ್ಪಿಸುತ್ತಿರುವೇ ಎಂದು ಶ್ರೀಕೃಷ್ಣನ ವಿಗ್ರಹದೊಂದಿಗೆ ಹಣೆಮನೆ ಏರಿದ್ದಾಳೆ. ಭಗವಂತನನ್ನೇ ನಾನು ಪತಿಯಾಗಿ ಸ್ವೀಕರಿಸಿಕೊಂಡಿದ್ದೇನೆ ಎಂದು ತನ್ನ ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ಇದರಂತೆಯೇ ಪೋಷಕರ ಒಪ್ಪಿಗೆಯ ಮೇರೆಗೆ ಉತ್ತರ ಪ್ರದೇಶದ ಔರೈಯಾದಲ್ಲಿ ಅದ್ದೂರಿಯಾಗಿ ವಿವಾಹ ನಡೆದಿದೆ.

ಈಕೆಯ ಹೆಸರು ರಕ್ಷಾ (30) ಸ್ನಾತಕೋತ್ತರ ಪದವಿ ಮುಗಿಸಿ ಎಲ್ ಎಲ್ ಬಿ ವ್ಯಾಸಂಗ ಮಾಡುತ್ತಿದ್ದಾರೆ. ನಿವೃತ್ತ ಶಿಕ್ಷಕ ರಂಜಿತ್ ಸಿಂಗ್ ಸೋಲಂಕಿ ಅವರ ಪುತ್ರಿ. ಮಗಳ ಅಪಾರವಾದ ಕೃಷ್ಣ ಭಕ್ತಿಯನ್ನು ಕಂಡ ತಂದೆ ರಂಜಿತ್ ಸಿಂಗ್ ಮಗಳ ಇಷ್ಟದಂತೆ ಅದ್ದೂರಿಯಾಗಿ ನಡೆಸಿಕೊಟ್ಟಿದ್ದಾರೆ. ಮದುವೆ ಮಂಟಪವನ್ನು ವೈಭವದಿಂದ ಅಲಂಕರಿಸಲಾಗಿದೆ. ಶ್ರೀಕೃಷ್ಣನ ಮೂರ್ತಿಯನ್ನು ಮೆರವಣಿಗೆಯ ಮೂಲಕ ಮಂಟಪಕ್ಕೆ ತೆಗೆದುಕೊಂಡು ಬರಲಾಗಿದೆ. ಸಾಕಷ್ಟು ಅತಿಥಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಶ್ರೀಕೃಷ್ಣನಿಗೆ ಪ್ರಿಯವಾದ ಭಕ್ಷ್ಯ ಭೋಜನಗಳನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿ: ತಾಳಿ ಕಟ್ಟುವ ಶುಭ ವೇಳೆ, ಹಸೆಮಣೆ ಮೇಲೆ ಕುಳಿತ ವಧು ಮದುವೆ ಮಂಟಪದಲ್ಲಿ ಏನು ಮಾಡಿದಳು ನೋಡಿ! ವೈರಲ್ ವಿಡಿಯೋ ಇಲ್ಲಿದೆ

ವಿವಾಹ ಸಂಭ್ರಮದ ನಂತರ ವಧು ಕೃಷ್ಣನ ಮೂರ್ತಿಯೊಂದಿಗೆ ಸುಖಚೈನ್‌ಪುರ ಪ್ರದೇಶದಲ್ಲಿನ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಡಲಾಗಿದೆ. ನಂತರ, ವಧು ತನ್ನ ಮಡಿಲಲ್ಲಿ ಕೃಷ್ಣನ ವಿಗ್ರಹವನ್ನು ಹೊತ್ತು ತನ್ನ ತಾಯಿಯ ಮನೆಗೆ ಮರಳಿದ್ದಾಳೆ. ಒಟ್ಟಾರೆಯಾಗಿ ಆಕೆಯ ಆಸೆಯಂತೆ ಮದುವೆ ಕಾರ್ಯ ನೆರವೇರಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:10 pm, Tue, 14 March 23

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು