AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಭಾರತದ ಆರ್ಥಿಕ ರಾಜಧಾನಿಯನ್ನು ತಲುಪಲು ನೀವು ಈ ಮಾರ್ಗವಾಗಿ ಸಾಗಬೇಕು!

Mumbai: ''ನಾವು ಶ್ರೀಮಂತರು ಪ್ಲಾಸ್ಟಿಕ್​ ತುಂಬಾ ಬಳಸುತ್ತೇವೆ ಎಂದು ಒಬ್ಬರು. ಸ್ಥಳೀಯ ಉದ್ಯಮಿ ಮತ್ತು ರಾಜಕಾರಣಿಗಳಿಂದ ತಕ್ಷಣವೇ ಸ್ವಚ್ಚತಾ ಕಾರ್ಯಕ್ರಮ ಕೈಗೊಳ್ಳಿ ಎಂದು ಮತ್ತೊಬ್ಬರು.'' ಬೆಂಗಳೂರಿನಲ್ಲಿ ಏನು ಮಾಡೋದು?

Viral: ಭಾರತದ ಆರ್ಥಿಕ ರಾಜಧಾನಿಯನ್ನು ತಲುಪಲು ನೀವು ಈ ಮಾರ್ಗವಾಗಿ ಸಾಗಬೇಕು!
ಮುಂಬೈನ ಬಾಂದ್ರಾ ಪೂರ್ವ ರೈಲು ನಿಲ್ದಾಣ
ಶ್ರೀದೇವಿ ಕಳಸದ
|

Updated on: Jun 30, 2023 | 5:14 PM

Share

Mumbai: ಮುಂಬೈ ಎಂಬ ಮಾಯಾನಗರಿ ಏನೆಲ್ಲ ಮೊದಲುಗಳಿಗೆ ಮೈಲುಗಲ್ಲಾಗಿದೆ. ಸಾಕಷ್ಟು ಮೇಲುಗೈಗಳಿಂದ ಬೀಗುತ್ತ ಬಂದಿದೆ. ಏನೇ ಆದರೂ ಅಲ್ಲಿಯ ಕೇರಿಗಳು ಮತ್ತು ರೈಲುನಿಲ್ದಾಣಗಳಿಗೆ ಕೊಳೆಯಿಂದ ಮುಕ್ತಿಯೇ ಇಲ್ಲವೇ ಎಂಬಂತಾಗಿದೆ. ಇದೀಗ ಬಾಂದ್ರಾ ಪೂರ್ವ ನಿಲ್ದಾಣದ ಫೋಟೋ ವೈರಲ್ ಆಗುತ್ತಿದೆ. ಭಾರತದ ಆರ್ಥಿಕ ರಾಜಧಾನಿಯನ್ನು (BKC)  ತಲುಪಲು ಈ ನಿಲ್ದಾಣದಲ್ಲಿಯೇ ಇಳಿದು ಸಾಗುತ್ತೀರಿ ಎಂಬ ಒಕ್ಕಣೆ ಈ ಟ್ವೀಟ್​ಗಿದೆ. ಈಗಂತೂ ಮಳೆಗಾಲ, ಇಂಥ ಸಂದರ್ಭದಲ್ಲಿ ಅಲ್ಲಿಯ ಪರಿಸ್ಥಿತಿ ಕೇಳಬೇಕೆ? ನೆಟ್ಟಿಗರು ಶ್ರೀಮಂತವರ್ಗವನ್ನು ಈ ಟ್ವೀಟಿನಡಿ ಕಟುವಾಡುತ್ತ ಟೀಕಿಸುತ್ತಿದ್ದಾರೆ.

ನಾವು ಶ್ರೀಮಂತರು ಪ್ಲಾಸ್ಟಿಕ್​ ಅನ್ನು ತುಂಬಾ ಬಳಸುತ್ತೇವೆ ಎಂದು ಒಬ್ಬರು. ಬಹುಮಹಡಿಗಳನ್ನು ಆಟೋ ರಿಕ್ಷಾಗಳು ಕೊಳೆಗೇರಿಗಳು ಆವರಿಸಿವೆ ಎಂದು ನನ್ನ ಭಾವನೆ ಎಂದು ಮತ್ತೊಬ್ಬರು. ರೈಲ್ವೆ ಇಲಾಖೆ ಮತ್ತು ಪುರಸಭೆಗಳು ಎಂದೂ ತಾರತಮ್ಯ ಮಾಡುವುದಿಲ್ಲ, ಎಲ್ಲಾ ಸ್ಥಳಗಳನ್ನು ಅವುಗಳು ಸಮಾನ ಭಾವದಿಂದ ಕಾಣುತ್ತವೆ ಎಂದು ಇನ್ನೂ ಒಬ್ಬರು. ಮುಂಬೈನಲ್ಲಿ ಅತ್ಯಂತ ತುಟ್ಟಿಸಂಗತಿ ಎಂದರೆ ಸ್ವಚ್ಛತೆ… ಹೀಗೆ ಪರಸ್ಪರ ಸಂಭಾಷಣೆಯನ್ನೇ ಸೃಷ್ಟಿಸಿದ್ಧಾರೆ ನೆಟ್ಟಿಗರು.

ಇದನ್ನೂ ಓದಿ : Viral Video: ಅಮೆರಿಕದ ಶಾಲೆಗಳಿಗಾಗಿ ಬುಲೆಟ್​ ಪ್ರೂಫ್​ ಕೊಠಡಿ; ನೆಟ್ಟಿಗರ ವಿಷಾದ

ಮಳೆಗಾಲ ಬಂದರೆ ಅತ್ಯಂತ ಕೊಳಕಿನಿಂದ ಕೂಡಿದ ನಗರಗಳಲ್ಲಿ ಇದು ಮೊದಲನೇ ಸ್ಥಾನದಲ್ಲಿ ನಿಲ್ಲುತ್ತದೆ ಎಂದು ಒಬ್ಬರು. ಹಾಗೇನಿಲ್ಲ ದೆಹಲಿ, ಕೊಲ್ಕತ್ತೆಯ ಪರಿಸ್ಥಿತಿ ಕೂಡ ಇದೇ ರೀತಿ ಎಂದು ಮತ್ತೊಬ್ಬರು. ಅಲ್ಲಿರುವ ರಾಜಕಾರಣಿಗಳು ಮತ್ತು ಉದ್ಯಮಿಗಳಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಕೂಡಲೇ ಹಮ್ಮಿಕೊಳ್ಳಿ ಎಂದು ಮಗದೊಬ್ಬರು. ನನಗೆ ಕಣ್ಣೀನ ದೋಷ ಇರುವುದರಿಂದ ಬಹಳ ಒಳ್ಳೆಯದೇ ಆಯಿತು ಎಂದು ಇನ್ನೂ ಒಬ್ಬರು. ಆರ್ಥಿಕ ವಿಷಯವಾಗಿ ನಾವು ಹತ್ತು ವರ್ಷಗಳಲ್ಲಿ 3 ಅಥವಾ 2ನೇ ಸ್ಥಾನ ಗಳಿಸೇವು. ಆದರೆ ಸ್ವಚ್ಛತೆ ವಿಷಯದಲ್ಲಿ 100 ವರ್ಷ ಕಳೆದರೂ ಸುಧಾರಣೆ ಸಾಧ್ಯವಿಲ್ಲ ಎಂದು ಒಬ್ಬರು ಹೇಳಿದ್ದಕ್ಕೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ನೀವೇನಂತೀರಿ ಈ ವಿಷಯವಾಗಿ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​