AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ

Elephant : ವನ್ಯಪ್ರಾಣಿಗಳ ತಂಟೆಗೆ ಹೋದರೆ ನಿಮ್ಮನ್ನು ಸುಮ್ಮನೇ ಬಿಡಲಾರವು. ಈ ಆನೆಗಳ ಹಿಂಡನ್ನು ಗಮನಿಸಿ. ಇಲ್ಲಿರುವ ಹುಡುಗ ಆನೆಗೆ ಕೋಲಿನಿಂದ ಹೊಡೆದಿದ್ದಾನೆ. ಹೇಗೆ ಆನೆ ಬೆನ್ನಟ್ಟಿದೆ ನೋಡಿ.

ಆನೆಗೆ ಕೋಲಿನಿಂದ ಹೊಡೆದ ಹುಡುಗರು, ತಿರುಗಿ ಬೆನ್ನಟ್ಟಿದ ಆನೆ
ಬೆನ್ನಟ್ಟಿದ ಆನೆ
TV9 Web
| Edited By: |

Updated on:Dec 05, 2022 | 1:32 PM

Share

Viral Video : ಕಾಡುಪ್ರಾಣಿಗಳನ್ನು ತಡವಿದರೆ ಅವು ನಮ್ಮನ್ನು ಸುಮ್ಮನೇ ಬಿಡುವುದಿಲ್ಲ. ಈಗಾಗಲೇ ವೈರಲ್ ಆದ ವಿಡಿಯೋದಲ್ಲಿ ಅವುಗಳ ಸ್ವಭಾವವನ್ನು ಗಮನಿಸಿದ್ದೀರಿ. ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಆನೆಗಳ ಹಿಂಡೊಂದು ಈ ಹುಡುಗರ ಬೆನ್ನ ಹಿಂದೆ ಇದೆ. ಕೋಲಿನಿಂದ ಆನೆಯನ್ನು ಹೊಡೆದಿದ್ದಾನೆ. ಆನೆ ಅವನನ್ನು ಬೆನ್ನಟ್ಟಿದೆ. ನೆಟ್ಟಿಗರು ಇವನ ನಡೆವಳಿಕೆಯಿಂದ ಆಕ್ರೋಶಗೊಂಡಿದ್ದಾರೆ. ಈ ಹುಡುಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಅರಣ್ಯ ಸೇವಾ ಅಧಿಕಾರಿ ಸುರೇಂದರ್ ಮೆಹ್ರಾ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಭಾನುವಾರದಂದು ಹಂಚಿಕೊಂಡ ಈ ವಿಡಿಯೋ 14,000ಕ್ಕೂ ಹೆಚ್ಚು ಜನರನ್ನು ತಲುಪಿದೆ. ಇದು ಯಾವಾಗ ಎಲ್ಲಿ ವಿಡಿಯೋ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ. ಎಂಥ ಹುಚ್ಚು ಈ ಹುಡುಗರಿಗೆ ಎಂದಿದ್ದಾರೆ ಒಬ್ಬರು. ಅರಣ್ಯ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇನ್ನೂ ಒಬ್ಬರು. ಈ ಆನೆಗಳು ಸುಮ್ಮಸುಮ್ಮನೆ ಮನುಷ್ಯರ ಮೇಲೆ ಆಕ್ರಮಣ ಮಾಡುವುದಿಲ್ಲ, ಈ ವಿಡಿಯೋನೇ ಸಾಕ್ಷಿ ಎಂದಿದ್ದಾರೆ ಮಗದೊಬ್ಬರು. ಆಸ್ತಿ, ಬೆಳೆಹಾನಿ ವಿಷಯವಾಗಿ ಅರಣ್ಯ ಇಲಾಖೆ ಗಮನಹರಿಸಬೇಕು, ಇದಕ್ಕಾಗಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದಿದ್ದಾರೆ ಕೆಲವರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 1:32 pm, Mon, 5 December 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು