AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wedding tragedy: ಮದುವೆ ಮಂಟಪದಿಂದಲೇ ನವದಂಪತಿಗಳು ಸೇರಿ 37 ಅತಿಥಿಗಳು ಆಸ್ಪತ್ರೆಗೆ ದಾಖಲು

ವರದಿಗಳ ಪ್ರಕಾರ, ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಇಟಲಿಯ ಪಿಸ್ಟೋಯಾದಲ್ಲಿರುವ ಸ್ಯಾನ್ ಜಾಕೋಪೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Wedding tragedy: ಮದುವೆ ಮಂಟಪದಿಂದಲೇ ನವದಂಪತಿಗಳು ಸೇರಿ 37 ಅತಿಥಿಗಳು ಆಸ್ಪತ್ರೆಗೆ ದಾಖಲು
Wedding tragedy
Follow us
ಅಕ್ಷತಾ ವರ್ಕಾಡಿ
|

Updated on:Jan 24, 2024 | 1:07 PM

ಇತ್ತೀಚೆಗೆ ಆಘಾತಕಾರಿ ಘಟನೆಯೊಂದು ಇಟಲಿಯಲ್ಲಿ ನಡೆದಿದೆ. ಮದುವೆ ಮನೆಯಲ್ಲಿ ಡ್ಯಾನ್ಸ್ ಫ್ಲೋರ್ ಕುಸಿದ ಪರಿಣಾಮ ವಧು, ವರ ಸೇರಿ 37 ಮಂದಿ ಅತಿಥಿಗಳು 25 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ನವವಿವಾಹಿತರಾದ ಪಾವೊಲೊ ಮುಗ್ನೈನಿ ಮತ್ತು ವಲೇರಿಯಾ ಯಬಾರಾ ಇಬ್ಬರು ಇಟಲಿಯ ಪಿಸ್ಟೋಯಾದಲ್ಲಿನ ಕಾನ್ವೆಂಟ್‌ನಲ್ಲಿ ಸುಮಾರು 150 ಜನರನ್ನು ತಮ್ಮ ಮದುವೆಗೆ ಆಹ್ವಾನಿಸಿದರು. ಮದುವೆಯ ರಾತ್ರಿ ಡ್ಯಾನ್ಸ್ ಮಾಡುತ್ತಿರುವಾಗ ಈ ಘಟನೆ ಸಂಭವಿಸಿದ್ದು, ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿಗಳ ಪ್ರಕಾರ, ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಇಟಲಿಯ ಪಿಸ್ಟೋಯಾದಲ್ಲಿರುವ ಸ್ಯಾನ್ ಜಾಕೋಪೋ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಪ್ರಸ್ತುತ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ನವವಿವಾಹಿತರ ಚಿತ್ರವು ಅಂತರ್ಜಾಲದಲ್ಲಿ ವೈರಲ್​​ ಆಗುತ್ತಿದ್ದು, ಇದರಲ್ಲಿ ಪಾವೊಲೊ ಮತ್ತು ವಲೇರಿಯಾ ಪ್ರತ್ಯೇಕ ಆಸ್ಪತ್ರೆಯ ಬೆಡ್‌ಗಳಲ್ಲಿ ಅಕ್ಕಪಕ್ಕದಲ್ಲಿ ಡ್ರಿಪ್ಸ್​​​ ಹಾಕಿ ಮಲಗಿರುವುದನ್ನು ಕಾಣಬಹುದು. ದುರಂತ ಘಟನೆಯ ಬಗ್ಗೆ ತ್ವರಿತ ಕ್ರಮ ಕೈಗೊಂಡು, ದಂಪತಿಗಳು ಮದುವೆ ಹಾಲ್​​​ನ ಸಂಬಂಧಪಟ್ಟವರ ವಿರುದ್ಧ ದೂರು ದಾಖಲಿಸಿದ್ದಾರೆ ಮತ್ತು ಪ್ರಕರಣವನ್ನು ಪರಿಶೀಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:06 pm, Wed, 24 January 24

ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ