AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು

ವೇದಿಕೆ ಮೇಲೆಯೇ ವಧು-ವರ ಲಡ್ಡು ತಿನ್ನುವ ವಿಚಾರದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ ಆ ವಿಡಿಯೋ...

Viral Video: ಬಲವಂತವಾಗಿ ಲಡ್ಡು ತಿನ್ನಿಸಿದ ವರ, ಬಿತ್ತು ನೋಡಿ ವಧುವಿನಿಂದ ಒಂದೇಟು
ವಧುವಿನಿಂದ ವರನಿಗೆ ಕಪಾಳಮೋಕ್ಷ
TV9 Web
| Edited By: |

Updated on:Aug 15, 2022 | 12:30 PM

Share

ಮದುವೆಯ ಸೀಸನ್ ನಡೆಯುತ್ತಿರುವುದರಿಂದ ಮದುವೆಗೆ ಸಂಬಂಧಿಸಿದ ಎಲ್ಲಾ ರೀತಿಯ ತಮಾಷೆ ಮತ್ತು ಆಸಕ್ತಿದಾಯಕ ವಿಡಿಯೋಗಳು ವೈರಲ್ ಆಗುತ್ತವೆ. ಆದಾಗ್ಯೂ ಎಲ್ಲಾ ವಿವಾಹಗಳು ವಿಶೇಷವಾಗಿ ವಧು ಮತ್ತು ವರರು ಪರಸ್ಪರ ವಿನೋದಮಯವಾಗಿರುವುದಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದಾಗ ನೀವು ಅಯ್ಯೋ ದೇವಾ ಎನ್ನುವಿರಿ. ವೇದಿಕೆ ಮೇಲೆ ವರ ವಧುವಿಗೆ ಬಲವಂತವಾಗಿ ಲಡ್ಡು ಸೇವಿಸಿದ್ದಕ್ಕೆ ಕೋಪಗೊಂಡ ವಧು ವರನಿಗೆ ಥಳಿಸುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಮದುವೆ ಸಮಾರಂಭದ ಹಾಲ್​ನಲ್ಲಿ ಜನರು ಸಂಭ್ರಮದಿಂದ ತೊಡಗಿದ್ದಾರೆ. ಇತ್ತ ವೇದಿಕೆಯಲ್ಲಿ ವಧು-ವರ ಮಾತ್ರ ಲಡ್ಡು ತಿನ್ನಿಸುವ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ವಧು ವರನ ಬಾಯಿಗೆ ಬಲವಂತವಾಗಿ ಲಡ್ಡನ್ನು ತೂರಿಸಿದ್ದಾಳೆ. ಈ ವೇಳೆ ಕೋಪಗೊಂಡ ವರ ವಧುವಿನ ಕೈಯನ್ನು ತೆಗೆದಿದ್ದಾನೆ. ಇಷ್ಟೆಲ್ಲಾ ಮಾಡಿದ ವಧುವನ್ನು ವರ ಸುಮ್ಮನೆ ಬಿಡುತ್ತಾನಾ? ತನ್ನ ಸರದಿ ಬಂದಾಗ ವರ ವಧುವಿಗೆ ಲಡ್ಡು ತಿನ್ನಿಸು ಮುಂದಾಗುತ್ತಾನೆ. ಈ ವೇಳೆ ಆಕೆ ತಿನ್ನಲು ಹಿಂದೇಟು ಹಾಕುತ್ತಾಳೆ. ಹೀಗಾಗಿ ಬಲವಂತವಾಗಿ ಲಡ್ಡನ್ನು ತಿನ್ನಿಸುತ್ತಾನೆ. ಈ ವೇಳೆ ಕುಪಿತಗೊಂಡ ವಧು ವರನ ಕಪಾಳಕ್ಕೆ ಬಾರಿಸಿದ್ದಾಳೆ. ಈ ವೇಳೆ ವೇದಿಕೆಯಲ್ಲಿದ್ದವರು ಆಘಾತಕ್ಕೆ ಒಳಗಾಗುತ್ತಾರೆ.

ಈ ವಿಡಿಯೋವನ್ನು official_viralclips ಎಂಬ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರಿಗೆ ಈ ವಿಡಿಯೋ ಮನರಂಜನೆಯನ್ನು ನೀಡುತ್ತಿದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Mon, 15 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ