AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
TV9 Web
| Edited By: |

Updated on:Oct 11, 2022 | 1:26 PM

Share

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!