AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
TV9 Web
| Edited By: ಶ್ರೀದೇವಿ ಕಳಸದ|

Updated on:Oct 11, 2022 | 1:26 PM

Share

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!