AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
TV9 Web
| Edited By: |

Updated on:Oct 11, 2022 | 1:26 PM

Share

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್