AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
TV9 Web
| Edited By: ಶ್ರೀದೇವಿ ಕಳಸದ|

Updated on:Oct 11, 2022 | 1:26 PM

Share

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್