AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ

Accident : ಎಷ್ಟು ಎಚ್ಚರವಾಗಿದ್ದರೂ ಅಪಘಾತ ಎನ್ನುವುದು ಸಂಭವಿಸಿಯೇ ಬಿಡುತ್ತದೆ. ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಈ ಅಪಘಾತದ ವಿಡಿಯೋ ಇದೀಗ ವೈರಲ್ ಆಗಿದೆ. ಮಹಿಳೆಯ ಪರಿಸ್ಥಿತಿ ಏನಾಯಿತೆಂದು ತಿಳಿದುಬಂದಿಲ್ಲ.

ಕಾರಿನ ಬಾಗಿಲು ತೆಗೆಯುವುದಕ್ಕೂ ದ್ವಿಚಕ್ರವಾಹನಲ್ಲಿ ಈ ಮಹಿಳೆ ಬರುವುದುಕ್ಕೂ
ಕಾರಿನ ಬಾಗಿಲಿಗೆ ದ್ವಿಚಕ್ರವಾಹನದಲ್ಲಿ ಬಂದ ಮಹಿಳೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದ ಕ್ಷಣ
TV9 Web
| Updated By: ಶ್ರೀದೇವಿ ಕಳಸದ|

Updated on:Oct 11, 2022 | 1:26 PM

Share

Viral Video : ನಿಂತಿರುವ ಕಾರಿನ ಬಾಗಿಲು ತೆರೆಯುವುದಕ್ಕೂ ದ್ವಿಚಕ್ರವಾಹನದಲ್ಲಿ ಮಹಿಳೆಯೊಬ್ಬಳು ಬರುವುದಕ್ಕೂ ಚಾಟಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನ ಬಾಗಿಲಿಗೆ ಢಿಕ್ಕಿ ಹೊಡೆದಾಗ ಮಹಿಳೆ ರಸ್ತೆಗೆ ಬೀಳುತ್ತಾಳೆ. ಆಗ ಹಿಂದಿನಿಂದ ಬಂದ ಕಾರು ಆಕೆಯ ಮೇಲೆ ಹಾಯುತ್ತದೆ. ಆಕೆಯ ಪರಿಸ್ಥಿತಿ ಏನಾಯಿತು ಎನ್ನುವುದು ಈತನಕ ತಿಳಿದು ಬಂದಿಲ್ಲ. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರವು ಟ್ವಿಟರ್​ನಲ್ಲಿ ಹಂಚಿಕೊಂಡ ನಂತರ 48,500ರಷ್ಟು ಜನ ಈ ವಿಡಿಯೋ ವೀಕ್ಷಿಸಿದ್ದಾರೆ. ಸಂಚಾರಿ ಪೊಲೀಸರ ನಿರ್ಲಕ್ಷ್ಯ ಮತ್ತು ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣ ಎಂದು ಬಹುಪಾಲು ನೆಟ್ಟಿಗರು ಆರೋಪಿಸಲಾರಂಭಿಸಿದ್ದಾರೆ.

ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ಸಾರ್ವಜನಿಕ ರಸ್ತೆಗಳಲ್ಲಿ ನಿಮ್ಮ ಕಾರಿನ ಬಾಗಿಲನ್ನು ತೆರೆಯುವ ಮೊದಲು ಪಕ್ಕದಲ್ಲಿರುವ ಕನ್ನಡಿಯನ್ನು ಗಮನಿಸಿ. ಹಿಂದಿನಿಂದ ಯಾವುದಾದರೂ ವಾಹನ ಬರುತ್ತಿದೆಯೇ ಎಂಬುದನ್ನು ಪರೀಕ್ಷಿಸಿ ಅಪಘಾತ ಸಂಭವಿಸದಂತೆ ಕಾಳಜಿ ವಹಿಸಿ’ ಎಂಬ ನೋಟ್​ ಈ ವಿಡಿಯೋಗಿದೆ.

ಅಪಘಾತಕ್ಕೊಳಗಾದ ಮಹಿಳೆಯ ಪರಿಸ್ಥಿತಿ ಏನಾಗಿದೆ ಮತ್ತು ಕಾರ್ ಪಾರ್ಕ್ ಮಾಡಿದ ಮಾಲೀಕರ ವಿರುದ್ಧ ಪೊಲೀಸ್​ ಕ್ರಮ ಕೈಗೊಂಡಿದ್ದಾರೆಯೇ ಎನ್ನುವುದು ಈತನಕ ತಿಳಿದುಬಂದಿಲ್ಲ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:25 pm, Tue, 11 October 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ