AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ನನಗ ಬರ್ಯಾಕ ಬರಲ್ಲಲೇಪಾ, ನಮ್ ಅಜ್ಜನ್ ಕೂಡೇ ಎಬಿಸಿಡಿ ಬರ್ಸೆಕೆಂಬರ್ತೇನಿ’

Innocence : 'ನಾನು ಯಾವಾಗಿಂದ ಶಾಣ್ಯಾ ಆಕ್ತೇನು. ಎಲ್ಲಿ ಬರ್ಸೆಕಂಬರ್ಲಿ ಯೇಳ' ಜಬರ್​ದಸ್ತಾಗಿ ಶಿಕ್ಷಕರನ್ನೇ ಮರುಪ್ರಶ್ನಿಸುತ್ತಾನೆ ಉತ್ತರ ಕರ್ನಾಟಕದ ಈ ಪೋರ. ಒಂದಲ್ಲ ಐದು ಸಲ ನೋಡುತ್ತೀರಿ ಈ ವಿಡಿಯೋ!

Viral Video: 'ನನಗ ಬರ್ಯಾಕ ಬರಲ್ಲಲೇಪಾ, ನಮ್ ಅಜ್ಜನ್ ಕೂಡೇ ಎಬಿಸಿಡಿ ಬರ್ಸೆಕೆಂಬರ್ತೇನಿ'
ಉತ್ತರ ಕರ್ನಾಟಕದ ಸರ್ಕಾರಿ ಶಾಲೆಯ ಮಗುವಿನೊಂದಿಗೆ ಶಿಕ್ಷಕರ ಸಂಭಾಷಣೆ
ಶ್ರೀದೇವಿ ಕಳಸದ
|

Updated on:Jun 27, 2023 | 3:11 PM

Share

Karnataka Government Schools: ಐತಲಾ… ನಮ್ಮಜ್ಜ ಪಾಟಿ ಬ್ಯಾಡಂತಾನ, ಏನ್ ಬರ್ಕಂಬರ್ಲಿ ನೋಟ್​ಬುಕ್ನ್ಯಾಗ. ಎಬಿಸಿಡಿ ಎಲ್ಲಾ ನನಗ ಬರಿಯಾಕ ಬರಂಗಿಲ್ಲ್ಯಪ್ಪಾ… ಈ ಮಧ್ಯಾಹ್ನದ ಹೊತ್ತಿನಲ್ಲಿ ತಂಪಾದ ಕಾರಂಜಿಯಂತೆ ನಿಮ್ಮನ್ನು ಮುದಗೊಳಿಸುತ್ತವೆ ಈ ಮಗುವಿನ ನೇರ ಮತ್ತು ಮುಗ್ಧ ಉತ್ತರಗಳು. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು (Government School Teacher) ಈ ಮಗುವಿಗೆ ಎಬಿಸಿಡಿ ಬರೆದುಕೊಂಡು ಬಾ ಎಂದು ಹೇಳಿದ್ದಾರೆ. ಅದಕ್ಕೆ ಅದು, ಶಿಕ್ಷಕರಿಗೇ ಪಾಟಿಸವಾಲು ಹಾಕುತ್ತ ಹೋಗುತ್ತದೆ. ಮುಂದಿನ ಸಂಭಾಷಣೆಯನ್ನು ನೀವೇ ಕೇಳಿಬಿಡಿ. ಬರೆದರೆ ಅದರ ಸೊಗಡು ಹಾರಿ ಹೋಗುತ್ತದೆ!

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Venkatesh H (@venkatesh.chandharika)

ಈತನಕ ಈ ವಿಡಿಯೋ ಅನ್ನು ಸುಮಾರು 55,000ಕ್ಕೂ ಹೆಚ್ಚು ಜನ ನೋಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. ಇದು ಪಕ್ಕಾ ಉತ್ತರ ಕರ್ನಾಟಕದ ರಾಯಚೂರ ತಳೀನಪಾ. ಇದು ನಮ್ಮ ಸರ್ಕಾರಿ ಶಾಲೆಯ ಚತುರ. ಎಷ್ಟು ಸಲ ಈ ವಿಡಿಯೋ ನೋಡಿದರೂ ಬೇಜಾರೇ ಆಗುತ್ತಿಲ್ಲ. ನನಗೂ ಲೇ ಅಂತೀಯಲ್ಲಪಾ ಎಂದು ನಗುವ ಸರ್​​. ಸರ್ ತಾಳ್ಮೆ ನಿಜಕ್ಕೂ ಗ್ರೇಟ್​ ಅಲ್ವಾ? ನನಗನಿಸಿದಂತೆ ಇಂಥ ಮಕ್ಕಳೇ ನಾಳೆ ಜಾಣರಾಗುವುದು… ಅಂತೆಲ್ಲ ಪ್ರತಿಕ್ರಿಯಿಸಿದೆ ನೆಟ್​ಮಂದಿ.

ಇದನ್ನೂ ಓದಿ : Viral Video: ಬುಲ್​ ಶಾರ್ಕ್​ ಅವನ ಕೈಕಚ್ಚಿದ್ದಲ್ಲದೆ ನೀರಿಗೂ ಎಳೆಯುತ್ತದೆ, ಮುಂದೆ?

ಹುಡುಗ ರಾಕ್​ ಮೇಷ್ಟ್ರು ಶಾಕ್​. ಮಸ್ತ್​ ಅದೀಲೇಪಾ ತಮ್ಮಾ, ಮಾಸ್ತರ್ ಮನೀಗ್ ಹೊಕ್ಕಾರ್​. ನೈಸ್​ ಆ್ಯಕ್ಸೆಂಟ್​ ಸ್ಮಾರ್ಟ್​ ಕಿಡ್. ಇದು ಪಕ್ಕಾ ನಮ್ಮ ಯಾದಗಿರಿ ಭಾಷೆನೇ. ವಂಡರ್​ಫುಲ್​ ಟೀಚರ್​… ಹೀಗೆ ಜನರೆಲ್ಲ ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ? ಎಂದು ಕೇಳಿದ್ದಾರೆ ಒಬ್ಬರು. ಇದು ಬಗ್ಗುವಿಕೆ ಅಲ್ಲದೆ ಇನ್ನೇನು? ಸಹಜವಾಗಿ ತನ್ನ ತಿಳಿವಿಗೆ ನಿಲುಕಿದ್ದನ್ನು ಪ್ರತ್ಯುತ್ತರಿಸುತ್ತಿದೆ.

ಇದನ್ನೂ ಓದಿ : Viral Video: ”ಪುಟ್ಟಿ, ನೀನು ಸ್ಪೈಡರ್​ಮ್ಯಾನ್​ನ​ ಮಗಳೇ? ವಂಡರ್ ವುಮನ್​ನ​ ಮಗಳೇ?”

ದಿನದ ಅನ್ನಕ್ಕಾಗಿ ಮನೆಮಂದಿಯೆಲ್ಲ ಮೈಮುರಿದು ದುಡಿಯಲೇಬೇಕಾದಂಥ ಅನಿವಾರ್ಯತೆ ಇದ್ದ ಕುಟುಂಬಗಳಲ್ಲಿರುವ ಮಕ್ಕಳಿಗೆ ಸರ್ಕಾರಿ ಶಾಲೆಗಳೇ ದೇಗುಲ, ಶಿಕ್ಷಕರುಗಳೇ ಎಲ್ಲ. ಇಂಥ ನಿಸ್ಪೃಹ ಮಕ್ಕಳಿಗೆ ಒಳ್ಳೆಯದಾಗಲಿ. ನಿಮ್ಮ ಮನೆಗಳಲ್ಲೂ, ನಿಮ್ಮೂರಿನಲ್ಲೂ ಇಂಥ ಮುಗ್ಧ ಮಕ್ಕಳು ನಿಮ್ಮನ್ನು ಸುತ್ತುವರೆದಿರುತ್ತವೆಯೇ? ಇದು ನಕ್ಕು ಸುಮ್ಮನಾಗುವ ವಿಷಯವಲ್ಲ. ಚಿಲುಮೆಯಂತೆ ಚಿಮ್ಮುವ ಈ ಮಕ್ಕಳಲ್ಲಿ ಪ್ರಚಂಡ ಶಕ್ತಿ ಇದೆ. ಪ್ರೀತಿಯಿಂದ ಶಿಸ್ತನ್ನು ಶಿಕ್ಷಣವನ್ನೂ ಧಾರೆಯೆರೆಯಬೇಕಷ್ಟೇ. ಮಕ್ಕಳೇ ನಾಡಿನ ಆಸ್ತಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:00 pm, Tue, 27 June 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ