AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಂಚಾರಿ ನಿಯಮ ಮುರಿದ ಜೋಡಿ; ವಿಡಿಯೋಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು

Traffic Police : 'ಸಂಚಾರ ನಿಯಮವನ್ನು ಉಲ್ಲಂಘಿಸಿದ ಈ ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸೆಂಟಿನೆಲ್​ ಅಪ್ಲಿಕೇಷನ್​ನಲ್ಲಿ ರಿಪೋರ್ಟ್ ಮಾಡಬೇಕೆಂಬ ವಿನಂತಿ' ಎಂದು ಈ ಟ್ವೀಟ್​ಗೆ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

Viral Video: ಸಂಚಾರಿ ನಿಯಮ ಮುರಿದ ಜೋಡಿ; ವಿಡಿಯೋಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು
ದೆಹಲಿಯಲ್ಲಿ ಸಂಚಾರಿ ನಿಯಮವನ್ನು ಪಾಲಿಸದ ಜೋಡಿ
ಶ್ರೀದೇವಿ ಕಳಸದ
|

Updated on:Jul 19, 2023 | 10:38 AM

Share

Delhi : ಸಾರ್ವಜನಿಕ ವಲಯಗಳಲ್ಲಿ ಯಾರೇ ಆಗಲಿ ಮನಬಂದಂತೆ ವರ್ತಿಸಿದರೆ ಅದಕ್ಕೆ ಪ್ರತಿಯಾಗಿ ದಂಡ ತೆರಬೇಕಾಗುತ್ತದೆ ಅಥವಾ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ನಾಗರಿಕ ಪ್ರಜ್ಞೆಯುಳ್ಳ ಎಲ್ಲರಿಗೂ ಇದು ತಿಳಿದಿರುವ ವಿಷಯ. ಆದರೆ ಕೆಲವರು ಬೇಕೆಂದೇ ನಿಯಮಗಳ ಉಲ್ಲಂಘನೆ ಮಾಡುತ್ತಿರುತ್ತಾರೆ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿರು ಈ ಜೋಡಿ ಇದಕ್ಕೆ ಉದಾಹರಣೆ. ಅವನು ಬೈಕ್​ ಓಡಿಸುತ್ತಿದ್ದಾನೆ. ಆಕೆ ಅವನನ್ನು ತಬ್ಬಿ ಕುಳಿತಿದ್ದಾಳೆ. ದೆಹಲಿಯ ಮಂಗೋಲ್ಪುರಿ (Mangolpuri) ಹೊರವರ್ತುಲ ರಸ್ತೆಯಲ್ಲಿ ಈ ವಿಡಿಯೋ ಸೆರೆಹಿಡಿಯಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ದೆಹಲಿ ಸಂಚಾರಿ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಗಾಝಿಯಾಬಾದ್​ನ ಪೊಲೀಸರು ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದಾರೆ.

@Buntea ಎಂಬ ಟ್ವಿಟರ್​ ಖಾತೆದಾರರು ಈಡಿಯಟ್ಸ್​ ಆಫ್​ ದೆಹಲಿ ಎಂಬ ಒಕ್ಕಣೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಬೈಕ್ ಓಡಿಸುತ್ತಿರುವವನು ಹೆಲ್ಮೆಟ್​ ಹಾಕಿಕೊಂಡಿದ್ಧಾನೆ ಆದರೆ ಆಕೆ ಹಾಕಿಕೊಂಡಿಲ್ಲ. ಎರಡು ದಿನಗಳ ಹಿಂದೆ ಮಾಡಿದ ಈ ಪೋಸ್ಟ್​ ಅನ್ನು 1 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ಧಾರೆ. ಸುಮಾರು 200 ಜನರು ರೀಟ್ವೀಟ್ ಮಾಡಿದ್ದಾರೆ. ಅನೇಕರು ಈ ವಿಡಿಯೋದಲ್ಲಿರುವ ಜೋಡಿಗೆ ಬೈದಿದ್ದಾರೆ.

ಇದನ್ನೂ ಓದಿ : Viral Video: ಟೊಮ್ಯಾಟೋ ಬೆಲೆ ದುಬಾರಿಯಾಗಲು ಕಾರಣರಾದವರ ವಿಡಿಯೋ ವೈರಲ್

ಈ ಟ್ವೀಟ್​ಗೆ ಪ್ರತಿಕ್ರಿಯಿಸಿದ ದೆಹಲಿ ಸಂಚಾರಿ ಪೊಲೀಸರು, ‘ಧನ್ಯವಾದಗಳು, ಸಂಚಾರ ನಿಯಮವನ್ನು ಉಲ್ಲಂಘಿಸಿದ ವಿಡಿಯೋವನ್ನು ಟ್ರಾಫಿಕ್​ ಪೊಲೀಸ್​ ಸೆಂಟಿನೆಲ್​ ಅಪ್ಲಿಕೇಷನ್​ನಲ್ಲಿ ರಿಪೋರ್ಟ್ ಮಾಡಬೇಕೆಂಬ ವಿನಂತಿ’ ಎಂದಿದ್ದಾರೆ. ಜೊತೆಗೆ ಈ ಆ್ಯಪ್​ನ ಲಿಂಕ್​ನ್ನೂ ಅವರು ಹಂಚಿಕೊಂಡಿದ್ದಾರೆ. ಸಿನೆಮಾಗಳನ್ನು ನೋಡಿಯೇ ಈ ಯುವಜನತೆ ಹೀಗೆ ವರ್ತಿಸುತ್ತಿದೆ ಎಂದಿದ್ದಾರೆ ಒಬ್ಬರು. ಇದು ತುಂಬಾ ಅಪಾಯಕಾರಿಯಾಗಿದೆ, ಇಂಥ ಹುಚ್ಚುಸಾಹಸಗಳು ಬೇಡ ಎಂದಿದ್ಧಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 10:24 am, Wed, 19 July 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ