AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡ್ಯಾನ್ಸ್; 20 ಸಾವಿರ ರೂ. ಫೈನ್​ ಹಾಕಿದ ಗಾಜಿಯಾಬಾದ್ ಪೊಲೀಸ್

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ.

ಚಲಿಸುತ್ತಿರುವ ಕಾರಿನ ಮೇಲೇರಿ ಯುವಕರಿಬ್ಬರ ಡ್ಯಾನ್ಸ್; 20 ಸಾವಿರ ರೂ. ಫೈನ್​ ಹಾಕಿದ ಗಾಜಿಯಾಬಾದ್ ಪೊಲೀಸ್
ಡ್ಯಾನ್ಸ್ ಮಾಡುತ್ತಿರುವ ಯುವಕರು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 02, 2022 | 3:17 PM

Share

ಹೊಸದಿಲ್ಲಿ : ಯುವಕರ ಗುಂಪೊಂದು ವಾಹನದ ಮೇಲೇರಿ ಡ್ಯಾನ್ಸ್ (Dance) ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ನಂತರ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಕಾರಿನ ಮಾಲೀಕರೊಬ್ಬರಿಗೆ 20,000 ರೂ ದಂಡ ವಿಧಿಸಿದ್ದಾರೆ. ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಇಬ್ಬರು ಯುವಕರು ಕುಡಿದವರಾಗಿ ಕಂಡಿದ್ದ, ಕಾರಿನ ಮೇಲೇರಿ ನೃತ್ಯ ಮಾಡುವುದನ್ನು ಕಾಣಬಹುದು. ಇಬ್ಬರು ಯುವಕರು ಕಾರಿನ ಮೇಲಿದ್ದು, ಇನ್ನಿಬ್ಬರು ವಿಡಿಯೋ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ. ಈ ಮಧ್ಯೆ ಘಾಜಿಯಾಬಾದ್‌ನಲ್ಲಿ, ಹುಡುಗರ ಗುಂಪು, ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ತಮ್ಮ ಕಾರಿನ ಟಾಪ್​ ಮೇಲೇರಿ ಡ್ಯಾನ್ಸ್ ಮಾಡಿತ್ತಿದ್ದಾರೆ. ಗಾಜಿಯಾಬಾದ್ ಪೊಲೀಸರು ಇವರನ್ನು ಶ್ರೀಘ್ರದಲ್ಲೇ ಲಾಕಪ್​ನಲ್ಲಿ ಹಾಕಿ ತಮ್ಮ ಟ್ಯೂನ್​ಗೆ ಡ್ಯಾನ್ಸ್ ಮಾಡುತ್ತಾರೆಂದು ಭಾವಿಸುತ್ತೇವೆ ಎಂದು ಟ್ವಿಟರ್ ಬಳಕೆದಾರ ಪ್ರಶಾಂತ್ ಕುಮಾರ್ ಘಟನೆಯ ವಿಡಿಯೋವನ್ನು ಪೋಸ್ಟ್ ಮಾಡುವಾಗ ಬರೆದುಕೊಂಡಿದ್ದಾರೆ. ಅವರು ಟ್ವೀಟ್‌ನಲ್ಲಿ ಗಾಜಿಯಾಬಾದ್ ಪೊಲೀಸರನ್ನು ಟ್ಯಾಗ್ ಕೂಡ ಮಾಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರಿಗೆ 20,000 ರೂ. ದಂಡ ವಿಧಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಬಂದ ದೂರಿನನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ವಾಹನ ಮಾಲೀಕರ ವಿರುದ್ಧ ಒಟ್ಟು 20,000 ರೂ.ಗಳ ಚಲನ್​ನ್ನು ಹಾಕಲಾಗಿದೆ ಎಂದು ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

Viral Video: ಮತ್ತೊಂದು ಹಾವನ್ನು ಜೀವಂತವಾಗಿ ತಿಂದು ತೇಗಿದ ಕಿಂಗ್ ಕೋಬ್ರಾ; ಇಲ್ಲಿದೆ ವೈರಲ್ ವಿಡಿಯೋ

Viral Video: ಕೋತಿ ಮತ್ತು ಕುರಿಮರಿ ನಡುವೆ ಅವಿನಾಭಾವ ಸಂಬಂಧ; ನೆಟ್ಟಿಗರ ಹೃದಯ ಸ್ಪರ್ಶಿಸಿದ ಮುದ್ದಾದ ಜೋಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?