Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿದ್ಯುತ್‌ ಸ್ಪರ್ಶಿಸಿ ತಾಯಿ ಹಸು ಸಾವು, ಅಮ್ಮನ ಸಮಾಧಿ ಮುಂದೆ ಕರುವಿನ ಮೂಕ ರೋದನೆ

ಮನಕಲಕುವ ಘಟನೆಯ ವಿಡಿಯೋ ದೃಶ್ಯಾವಳಿಯೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟ ತಾಯಿ ಹಸುವನ್ನು ಮನೆಯವರು ಮಣ್ಣು ಮಾಡಿದ್ದು, ಆದರೆ ನನಗೆ ಅಮ್ಮ ಬೇಕೇ ಬೇಕೆಂದು ಕರುವೊಂದು ತಾಯಿ ಸಮಾಧಿ ಬಳಿ ಓಡಿ ಬಂದು ಹೂತಿದ್ದ ಮಣ್ಣನ್ನು ಕಾಲಿನಿಂದ ಕೆರೆದು ಅಮ್ಮಾ ಎದ್ದೇಳಮ್ಮಾ..... ಎಂದು ಗೋಳಾಡಿದೆ. ಕರುವಿನ ಈ ಮೂಕ ಯಾತನೆ ಕರುಳು ಹಿಂಡುವಂತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 19, 2024 | 11:50 AM

ಮನುಷ್ಯರು ಮಾತ್ರವಲ್ಲ ಪ್ರಾಣಿಗಳಿಗೂ ರಕ್ತ ಸಂಬಂಧ, ಪ್ರೀತಿ, ಮಮತೆ, ಭಾವನೆಗಳು ಇರುವುತ್ತವೆ ಎಂಬುದಕ್ಕೆ ಸಾಕ್ಷಿ ಎಂಬಂತಿರುವ ಮನಕಲಕುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿದ್ಯುತ್‌ ಸ್ಪರ್ಶದಿಂದ ಹಸುನೀಗಿದ ತಾಯಿ ಹಸುವನ್ನು ಮನೆಯವರು ಮಣ್ಣು ಮಾಡಿರುತ್ತಾರೆ. ಆದರೆ ನನಗೆ ನನ್ನಮ್ಮಾ ಬೇಕೇ ಬೇಕು ಎಂದು ಸಮಾಧಿ ಬಳಿ ಓಡುತ್ತಾ ಬಂದ ಕರು ಹೂತಿದ್ದ ಮಣ್ಣನ್ನು ಕಾಲಿನಿಂದ ಕೆರೆದು ಅಮ್ಮಾ ಎದ್ದೇಳಮ್ಮಾ….. ಎಂದು ಗೋಳಾಡಿದೆ. ಹೆತ್ತ ತಾಯಿಯನ್ನು ಕಳೆದುಕೊಂಡ ಕರುವಿನ ಈ ಯಾತನೆ ಕರುಳು ಹಿಂಡುವಂತಿದೆ.

ಈ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಇಲ್ಲಿನ ಹೂಟಗಳ್ಳಿಯ ಎಸ್‌ಆರ್‌ಎಸ್‌ ಬಡಾವಣೆಯಲ್ಲಿ ಮಂಗಳವಾರದಂದು (ಜುಲೈ 16) 1.20 ಲಕ್ಷ ಬೆಲೆಬಾಳುವ ಗರ್ಭಿಣಿ ಹಸುವೊಂದು ರಸ್ತೆ ಬದಿಯಲ್ಲಿದ್ದ ಬೋರ್‌ವೇಲ್‌ ವಿದ್ಯುತ್‌ ಸಂಪರ್ಕ ಕಲ್ಪಿಸುವ ಸ್ವಿಚ್‌ಬಾಕ್ಸ್‌ ಸ್ಪರ್ಶಿಸಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದೆ. ತಾಯಿ ಹಸುವು ಒದ್ದಾಡಿ ಪ್ರಾಣ ಬಿಟ್ಟಿದ್ದನ್ನು ಕಣ್ಣಾರೆ ಕಂಡ ಕರುವಿನ ರೋಧನೆ ಕರುಳು ಹಿಂಡುವಂತಿದೆ.

ಇದನ್ನೂ ಓದಿ: ಪಿಟ್‌ಬುಲ್‌ ಶ್ವಾನಗಳ ದಾಳಿ; ಪ್ರಾಣ ಉಳಿಸಿಕೊಳ್ಳಲು ಕಾರಿನ ಮೇಲತ್ತಿ ಕುಳಿತ ಡೆಲಿವರಿ ಬಾಯ್‌

ಹೌದು ಸಾವನ್ನಪ್ಪಿದ ಹಸುವನ್ನು ಮನೆಯವರು ಮಣ್ಣು ಮಾಡಿದ್ದು, ಆ ಸಂದರ್ಭದಲ್ಲಿ ತಾಯಿ ಸಮಾಧಿ ಬಳಿಗೆ ಓಡುತ್ತಾ ಬಂದ ಕರು ಅಮ್ಮಾ ಎದ್ದೇಳಮ್ಮಾ…. ಅಮ್ಮಾ ಎಲ್ಲಿದ್ದೀಯಾ ಬೇಗ ಬಾರಮ್ಮಾ… ಎಂದು ಕಾಲಿನಿಂದ ಸಮಾಧಿಯ ಮಣ್ಣನ್ನು ಅಗೆದು, ತಾಯಿಗಾಗಿ ಈ ಮುಗ್ಧ ಜೀವ ಗೋಳಾಡಿದೆ. ಈ ಮನಕಲಕುವ ವಿಡಿಯೋ ದೃಶ್ಯಾವಳಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ತಾಯಿಯನ್ನು ಕಳೆದುಕೊಂಡ ಮೂಕ ಜೀವಿಯ ಯಾತನೆ ಕರುಳು ಹಿಂಡುವಂತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ಹನಿ ಟ್ರ್ಯಾಪ್ ಪ್ರಕರಣ ವೈಯಕ್ತಿಕವಾದದ್ದು, ಕಾಮೆಂಟ್ ಮಾಡಲಾರೆ: ರಾಜು ಕಾಗೆ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಕೆ ಶಿವಕುಮಾರ್
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ಏನು ಮಾಡಿದರೂ ನಡೆಯುತ್ತೆ ಎಂಬ ದುರಹಂಕಾರ ಸರ್ಕಾರಕ್ಕೆ: ನಾಗರಿಕರು
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ಮತ್ತು ಹಣೆಗೆ ಗನ್ ಇಟ್ಟು ಬೆದರಿಕೆ: ವರ್ಷಾ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಭಾರಿ ಅವ್ಯವಹಾರ ಆರೋಪ
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?
ಶ್ವೇತಭವನ ಆವರಣಕ್ಕೆ ನುಸುಳಿದ ಮಗು, ಭದ್ರತಾ ಸಿಬ್ಬಂದಿ ಮಾಡಿದ್ದೇನು?