AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್ ವಿಡಿಯೋ; ಈ ನಾಯಿಗೆ ನಮ್ಮಂತೆ ಕೈಗಳಿದ್ದಿದ್ದರೆ ಇಷ್ಟೊತ್ತಿಗೆ…

Kitten : ಯಾರದು ನೀರಲ್ಲಿ ಈ ಪುಟ್ಟ ಬೆಕ್ಕನ್ನು ಹೀಗೆ ಬಿಟ್ಟುಹೋಗಿರುವುದು? ಎಂದು ನೆಟ್ಟಿಗರು ಕೋಪಗೊಂಡಿದ್ದಾರೆ. ಈ ನಾಯಿಯೋ ಒಂದೇ ಸಮನೇ ಅದನ್ನು ನೀರಿನಿಂದೆತ್ತಲು ನೋಡುತ್ತಿದೆ. ಮತ್ತೆ ಮತ್ತೆ ನೋಡಬೇಕೆನ್ನಿಸುವ ಈ ವಿಡಿಯೋ.

ವೈರಲ್ ವಿಡಿಯೋ; ಈ ನಾಯಿಗೆ ನಮ್ಮಂತೆ ಕೈಗಳಿದ್ದಿದ್ದರೆ ಇಷ್ಟೊತ್ತಿಗೆ...
ಬಾ ಬೆಕ್ಕುಕೂಸೆ ನನ್ನ ಬಳಿ...
TV9 Web
| Updated By: ಶ್ರೀದೇವಿ ಕಳಸದ|

Updated on:May 13, 2023 | 3:23 PM

Share

Viral Video : ನಾಯಿ ಬೆಕ್ಕು ಆಜನ್ಮ ವೈರಿಗಳು ಎನ್ನುವುದನ್ನು ಹೇಗೆ ನಂಬುವುದು ಈ ವಿಡಿಯೋ ನೋಡಿದ ಮೇಲೆ? ಈ ಪುಟ್ಟ ಬೆಕ್ಕು ಅದು ಹೇಗೆ ಇಲ್ಲಿ ನೀರಿನಲ್ಲಿ ಕುಳಿತಿದೆಯೋ ಗೊತ್ತಿಲ್ಲ. ಈ ಮನೆಯ ನಾಯಿ ಅದನ್ನು ಮೈದಡವುತ್ತ ಮಾತನಾಡಿಸುತ್ತಿದೆ. ಆ ಸಿಂಕ್​ನಿಂದ ಅದನ್ನು ಹೊರತೆಗೆಯಲು ಪ್ರಯತ್ನಿಸುತ್ತಿದೆ. ಎಂಥ ಆಪ್ತವಾಗಿದೆಯಲ್ಲ ಈ ವಿಡಿಯೋ. ನೆಟ್ಟಿಗರಲ್ಲಿ ಕೆಲವರು ಮೂಕವಿಸ್ಮಿತರಾಗಿದ್ದಾರೆ ಇನ್ನೂ ಕೆಲವರು ಕುಪಿತಗೊಂಡಿದ್ದಾರೆ.

ಆಯಾ ಪ್ರಾಣಿಗಳ ನಡುವೆ ವೈರತ್ವ ಇದ್ದರೂ ಒಬ್ಬಂಟಿಯಾಗಿರುವ ಮರಿಗಳನ್ನು ನೋಡಿದಾಗ ಅದು ಹೇಗೋ ವಾತ್ಸಲ್ಯ ಉಕ್ಕಿ ಬಂದುಬಿಡುತ್ತದೆ. ಆಗ ತಮ್ಮದೇ ಮರಿ ಎಂಬಂತೆ ಪ್ರೀತಿಸುತ್ತ ಪೋಷಿಸಲು ಶುರು ಮಾಡುತ್ತವೆ. ಮೇಲಿನ ವಿಡಿಯೋ ಇದಕ್ಕೆ ಸಾಕ್ಷಿ. ಈ ವಿಡಿಯೋ ಅನ್ನು ಸುಮಾರು 30,000 ಜನರು ವೀಕ್ಷಿಸಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ಧಾರೆ.

ಇದನ್ನೂ ಓದಿ : ಮೇಆಂವೂ? ಲಗೇಜಿನೊಳಗೆ ಬೆಕ್ಕು; ನ್ಯೂಯಾರ್ಕ್​ ಏರ್​ಪೋರ್ಟ್​ನಲ್ಲಿ ನಡೆದ ಅಚ್ಚರಿಯ ಘಟನೆ

ಎಷ್ಟೊಂದು ಮೆಲ್ಲನೇ ಅದರ ನೆತ್ತಿಯನ್ನು ಮುಟ್ಟುತ್ತಿದೆ ನೋಡಿ ಆ ನಾಯಿ ಎಂದಿದ್ದಾರೆ ಒಬ್ಬರು. ಛೆ! ಈ ಪುಟಾಣಿಯನ್ನು ನೀರಿನಲ್ಲಿ ಹಾಕಿದ್ದು ಯಾರು? ಎಂದು ಕೇಳಿದ್ದಾರೆ ಇನ್ನೊಬ್ಬರು. ಎಂಥ ಕ್ರೂರಿಗಳು ಈ ಮನೆಯ ಜನರು, ಅದನ್ನು ಹೀಗೆ ನೀರಿನಲ್ಲಿ ಹಾಕಿದ್ದಾರಲ್ಲ ಎಂದು ಇನ್ನೂ ಒಬ್ಬರು ಕೋಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರಾಶಿ ಪೆಂಗ್ವಿನ್​​ಗಳ ಮಧ್ಯೆ ಮೂರು ಬೆಕ್ಕುಗಳು ಅಡಗಿವೆ, ನೀವು ಹುಡುಕೇ ಹುಡುಕುತ್ತೀರಿ

ಹೊಸ ಮನೆಗೆ ಹೊಂದಿಕೊಳ್ಳುವಲ್ಲಿ ಮರಿ ಕಷ್ಟಪಡುತ್ತಿರಬಹುದು, ತನ್ನ ತಾಯಿಯನ್ನು ಹುಡುಕಿಕೊಂಡು ಹೋಗುವಾಗ ಹೀಗೆ ಸಿಂಕಿನೊಳಗೆ ಇಳಿದಿರಬಹುದು ಎಂದು ಸದ್ಯಕ್ಕೆ ಸಮಾಧಾನ ಮಾಡಿಕೊಳ್ಳೋಣವೇ. ನೀವೇನಂತೀರಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:22 pm, Sat, 13 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!