AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಹಾಕಿದರೆ ಸಾಕು ಬದುಕಿರುವರೆಗೂ ಆ ಋಣವನ್ನು ತೀರಿಸುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನವು ತನ್ನ ಪ್ರೀತಿಯನ್ನು ಹೊರಹಾಕುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂಬೆಗಾಲಿಡುತ್ತಿರುವ ಮಗುವನ್ನು ಬೀಳದಂತೆ ನೋಡಿಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on:Oct 19, 2024 | 6:36 PM

ಶ್ವಾನಗಳ ನಿಶ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದಿದೆ. ಅದರಲ್ಲಿಯು ಈ ಶ್ವಾನಗಳು ಪುಟಾಣಿ ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿರುತ್ತದೆ. ಮುದ್ದು ಮುದ್ದಾದ ಕಂದಮ್ಮದೊಂದಿಗೆ ಆಡುವ ಹಾಗೂ ಅವುಗಳ ರಕ್ಷಣೆ ಮಾಡುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ತಮ್ಮ ಮನೆ ಮಕ್ಕಳು ಯಾವುದಾದ್ರೂ ಅಪಾಯಕ್ಕೆ ಸಿಲುಕಿಕೊಂಡ್ರೆಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಮುದ್ರ ತೀರದಲ್ಲಿ ಅಂಬೆಗಾಲು ಇಡುತ್ತಿರುವ ಕಂದಮ್ಮಗೆ ಆಸರೆಯಾಗಿ ಮನೆಯ ಶ್ವಾನ ನಿಂತಿದ್ದು, ಈ ದೃಶ್ಯವು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Miks reaction ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ, ಹಸುಗೂಸು ಮರಳಿನಲ್ಲಿ ಅಂಬೇಗಾಲು ಇಡುತ್ತಿರುವಾಗ ಬೀಳದಂತೆ ಶ್ವಾನವು ಆಸರೆಯಾಗಿ ನಿಲ್ಲುತ್ತಿದೆ. ಒಂದೊಂದು ಹೆಜ್ಜೆಯಿಟ್ಟು ಮುಂದೆ ಹೋಗುವ ಮಗುವಿನ ಸಹಾಯಕ್ಕೆ ನಾಯಿ ಬರುತ್ತಿದೆ. ಇತ್ತ ಶ್ವಾನವು ಸಹಾಯಕ್ಕೆ ಬರುತ್ತಿದ್ದಂತೆಯೇ ಮಗು ನಾಯಿಯ ಮೇಲೆ ಕೈಯಿಟ್ಟು ಸಮತೋಲನ ಪಡೆದು ಮುಂದೆ ನಡೆದಿದೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಹೀಗೆ ಮುಂದೆ ಮುಂದೆ ಹೋಗುತ್ತಿರುವ ಮಗುವು ಒಂದೊಮ್ಮೆ ಬೀಳಲು ಮುಂದಾದಾಗ ಶ್ವಾನವು ಓಡಿ ಹೋಗಿ ಮಗುವು ಬೀಳದಂತೆ ನೋಡಿಕೊಂಡಿದೆ. ಕಂದಮ್ಮವು ಬಹುದೂರ ನಡೆಯುವವರೆಗೂ ಪಕ್ಕದಲ್ಲಿಯೇ ಇದ್ದು ಆಸರೆಯಾಗಿರುವ ಈ ದೃಶ್ಯವು ನೆಟ್ಟಿಗರ ಕಣ್ಮನ ಸೆಳೆದಿದೆ. ಈ ವಿಡಿಯೋವು ಈಗಾಗಲೇ 2.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆಟ್ಟಿಗರೊಬ್ಬರು, ‘ಈ ನಾಯಿಯಿಂದ ನಾನು ಬಹಳಷ್ಟು ಕಲಿಯಬೇಕಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಅಮ್ಮನಾದ ನಾಯಿ’ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 19 October 24

ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?