AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಹಾಕಿದರೆ ಸಾಕು ಬದುಕಿರುವರೆಗೂ ಆ ಋಣವನ್ನು ತೀರಿಸುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನವು ತನ್ನ ಪ್ರೀತಿಯನ್ನು ಹೊರಹಾಕುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂಬೆಗಾಲಿಡುತ್ತಿರುವ ಮಗುವನ್ನು ಬೀಳದಂತೆ ನೋಡಿಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

ಸಾಯಿನಂದಾ
| Edited By: |

Updated on:Oct 19, 2024 | 6:36 PM

Share

ಶ್ವಾನಗಳ ನಿಶ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದಿದೆ. ಅದರಲ್ಲಿಯು ಈ ಶ್ವಾನಗಳು ಪುಟಾಣಿ ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿರುತ್ತದೆ. ಮುದ್ದು ಮುದ್ದಾದ ಕಂದಮ್ಮದೊಂದಿಗೆ ಆಡುವ ಹಾಗೂ ಅವುಗಳ ರಕ್ಷಣೆ ಮಾಡುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ತಮ್ಮ ಮನೆ ಮಕ್ಕಳು ಯಾವುದಾದ್ರೂ ಅಪಾಯಕ್ಕೆ ಸಿಲುಕಿಕೊಂಡ್ರೆಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಮುದ್ರ ತೀರದಲ್ಲಿ ಅಂಬೆಗಾಲು ಇಡುತ್ತಿರುವ ಕಂದಮ್ಮಗೆ ಆಸರೆಯಾಗಿ ಮನೆಯ ಶ್ವಾನ ನಿಂತಿದ್ದು, ಈ ದೃಶ್ಯವು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Miks reaction ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ, ಹಸುಗೂಸು ಮರಳಿನಲ್ಲಿ ಅಂಬೇಗಾಲು ಇಡುತ್ತಿರುವಾಗ ಬೀಳದಂತೆ ಶ್ವಾನವು ಆಸರೆಯಾಗಿ ನಿಲ್ಲುತ್ತಿದೆ. ಒಂದೊಂದು ಹೆಜ್ಜೆಯಿಟ್ಟು ಮುಂದೆ ಹೋಗುವ ಮಗುವಿನ ಸಹಾಯಕ್ಕೆ ನಾಯಿ ಬರುತ್ತಿದೆ. ಇತ್ತ ಶ್ವಾನವು ಸಹಾಯಕ್ಕೆ ಬರುತ್ತಿದ್ದಂತೆಯೇ ಮಗು ನಾಯಿಯ ಮೇಲೆ ಕೈಯಿಟ್ಟು ಸಮತೋಲನ ಪಡೆದು ಮುಂದೆ ನಡೆದಿದೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಹೀಗೆ ಮುಂದೆ ಮುಂದೆ ಹೋಗುತ್ತಿರುವ ಮಗುವು ಒಂದೊಮ್ಮೆ ಬೀಳಲು ಮುಂದಾದಾಗ ಶ್ವಾನವು ಓಡಿ ಹೋಗಿ ಮಗುವು ಬೀಳದಂತೆ ನೋಡಿಕೊಂಡಿದೆ. ಕಂದಮ್ಮವು ಬಹುದೂರ ನಡೆಯುವವರೆಗೂ ಪಕ್ಕದಲ್ಲಿಯೇ ಇದ್ದು ಆಸರೆಯಾಗಿರುವ ಈ ದೃಶ್ಯವು ನೆಟ್ಟಿಗರ ಕಣ್ಮನ ಸೆಳೆದಿದೆ. ಈ ವಿಡಿಯೋವು ಈಗಾಗಲೇ 2.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆಟ್ಟಿಗರೊಬ್ಬರು, ‘ಈ ನಾಯಿಯಿಂದ ನಾನು ಬಹಳಷ್ಟು ಕಲಿಯಬೇಕಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಅಮ್ಮನಾದ ನಾಯಿ’ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 19 October 24

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?