AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಹಾಕಿದರೆ ಸಾಕು ಬದುಕಿರುವರೆಗೂ ಆ ಋಣವನ್ನು ತೀರಿಸುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನವು ತನ್ನ ಪ್ರೀತಿಯನ್ನು ಹೊರಹಾಕುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂಬೆಗಾಲಿಡುತ್ತಿರುವ ಮಗುವನ್ನು ಬೀಳದಂತೆ ನೋಡಿಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

ಸಾಯಿನಂದಾ
| Edited By: |

Updated on:Oct 19, 2024 | 6:36 PM

Share

ಶ್ವಾನಗಳ ನಿಶ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದಿದೆ. ಅದರಲ್ಲಿಯು ಈ ಶ್ವಾನಗಳು ಪುಟಾಣಿ ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿರುತ್ತದೆ. ಮುದ್ದು ಮುದ್ದಾದ ಕಂದಮ್ಮದೊಂದಿಗೆ ಆಡುವ ಹಾಗೂ ಅವುಗಳ ರಕ್ಷಣೆ ಮಾಡುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ತಮ್ಮ ಮನೆ ಮಕ್ಕಳು ಯಾವುದಾದ್ರೂ ಅಪಾಯಕ್ಕೆ ಸಿಲುಕಿಕೊಂಡ್ರೆಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಮುದ್ರ ತೀರದಲ್ಲಿ ಅಂಬೆಗಾಲು ಇಡುತ್ತಿರುವ ಕಂದಮ್ಮಗೆ ಆಸರೆಯಾಗಿ ಮನೆಯ ಶ್ವಾನ ನಿಂತಿದ್ದು, ಈ ದೃಶ್ಯವು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Miks reaction ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ, ಹಸುಗೂಸು ಮರಳಿನಲ್ಲಿ ಅಂಬೇಗಾಲು ಇಡುತ್ತಿರುವಾಗ ಬೀಳದಂತೆ ಶ್ವಾನವು ಆಸರೆಯಾಗಿ ನಿಲ್ಲುತ್ತಿದೆ. ಒಂದೊಂದು ಹೆಜ್ಜೆಯಿಟ್ಟು ಮುಂದೆ ಹೋಗುವ ಮಗುವಿನ ಸಹಾಯಕ್ಕೆ ನಾಯಿ ಬರುತ್ತಿದೆ. ಇತ್ತ ಶ್ವಾನವು ಸಹಾಯಕ್ಕೆ ಬರುತ್ತಿದ್ದಂತೆಯೇ ಮಗು ನಾಯಿಯ ಮೇಲೆ ಕೈಯಿಟ್ಟು ಸಮತೋಲನ ಪಡೆದು ಮುಂದೆ ನಡೆದಿದೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಹೀಗೆ ಮುಂದೆ ಮುಂದೆ ಹೋಗುತ್ತಿರುವ ಮಗುವು ಒಂದೊಮ್ಮೆ ಬೀಳಲು ಮುಂದಾದಾಗ ಶ್ವಾನವು ಓಡಿ ಹೋಗಿ ಮಗುವು ಬೀಳದಂತೆ ನೋಡಿಕೊಂಡಿದೆ. ಕಂದಮ್ಮವು ಬಹುದೂರ ನಡೆಯುವವರೆಗೂ ಪಕ್ಕದಲ್ಲಿಯೇ ಇದ್ದು ಆಸರೆಯಾಗಿರುವ ಈ ದೃಶ್ಯವು ನೆಟ್ಟಿಗರ ಕಣ್ಮನ ಸೆಳೆದಿದೆ. ಈ ವಿಡಿಯೋವು ಈಗಾಗಲೇ 2.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆಟ್ಟಿಗರೊಬ್ಬರು, ‘ಈ ನಾಯಿಯಿಂದ ನಾನು ಬಹಳಷ್ಟು ಕಲಿಯಬೇಕಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಅಮ್ಮನಾದ ನಾಯಿ’ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 19 October 24

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು