Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಹಾಕಿದರೆ ಸಾಕು ಬದುಕಿರುವರೆಗೂ ಆ ಋಣವನ್ನು ತೀರಿಸುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನವು ತನ್ನ ಪ್ರೀತಿಯನ್ನು ಹೊರಹಾಕುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂಬೆಗಾಲಿಡುತ್ತಿರುವ ಮಗುವನ್ನು ಬೀಳದಂತೆ ನೋಡಿಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

Follow us
| Updated By: ಅಕ್ಷತಾ ವರ್ಕಾಡಿ

Updated on:Oct 19, 2024 | 6:36 PM

ಶ್ವಾನಗಳ ನಿಶ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದಿದೆ. ಅದರಲ್ಲಿಯು ಈ ಶ್ವಾನಗಳು ಪುಟಾಣಿ ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿರುತ್ತದೆ. ಮುದ್ದು ಮುದ್ದಾದ ಕಂದಮ್ಮದೊಂದಿಗೆ ಆಡುವ ಹಾಗೂ ಅವುಗಳ ರಕ್ಷಣೆ ಮಾಡುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ತಮ್ಮ ಮನೆ ಮಕ್ಕಳು ಯಾವುದಾದ್ರೂ ಅಪಾಯಕ್ಕೆ ಸಿಲುಕಿಕೊಂಡ್ರೆಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಮುದ್ರ ತೀರದಲ್ಲಿ ಅಂಬೆಗಾಲು ಇಡುತ್ತಿರುವ ಕಂದಮ್ಮಗೆ ಆಸರೆಯಾಗಿ ಮನೆಯ ಶ್ವಾನ ನಿಂತಿದ್ದು, ಈ ದೃಶ್ಯವು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Miks reaction ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ, ಹಸುಗೂಸು ಮರಳಿನಲ್ಲಿ ಅಂಬೇಗಾಲು ಇಡುತ್ತಿರುವಾಗ ಬೀಳದಂತೆ ಶ್ವಾನವು ಆಸರೆಯಾಗಿ ನಿಲ್ಲುತ್ತಿದೆ. ಒಂದೊಂದು ಹೆಜ್ಜೆಯಿಟ್ಟು ಮುಂದೆ ಹೋಗುವ ಮಗುವಿನ ಸಹಾಯಕ್ಕೆ ನಾಯಿ ಬರುತ್ತಿದೆ. ಇತ್ತ ಶ್ವಾನವು ಸಹಾಯಕ್ಕೆ ಬರುತ್ತಿದ್ದಂತೆಯೇ ಮಗು ನಾಯಿಯ ಮೇಲೆ ಕೈಯಿಟ್ಟು ಸಮತೋಲನ ಪಡೆದು ಮುಂದೆ ನಡೆದಿದೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಹೀಗೆ ಮುಂದೆ ಮುಂದೆ ಹೋಗುತ್ತಿರುವ ಮಗುವು ಒಂದೊಮ್ಮೆ ಬೀಳಲು ಮುಂದಾದಾಗ ಶ್ವಾನವು ಓಡಿ ಹೋಗಿ ಮಗುವು ಬೀಳದಂತೆ ನೋಡಿಕೊಂಡಿದೆ. ಕಂದಮ್ಮವು ಬಹುದೂರ ನಡೆಯುವವರೆಗೂ ಪಕ್ಕದಲ್ಲಿಯೇ ಇದ್ದು ಆಸರೆಯಾಗಿರುವ ಈ ದೃಶ್ಯವು ನೆಟ್ಟಿಗರ ಕಣ್ಮನ ಸೆಳೆದಿದೆ. ಈ ವಿಡಿಯೋವು ಈಗಾಗಲೇ 2.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆಟ್ಟಿಗರೊಬ್ಬರು, ‘ಈ ನಾಯಿಯಿಂದ ನಾನು ಬಹಳಷ್ಟು ಕಲಿಯಬೇಕಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಅಮ್ಮನಾದ ನಾಯಿ’ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 19 October 24

ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್