AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಂಬೆಗಾಲು ಇಡುತ್ತಿರುವ ಕಂದಮ್ಮನಿಗೆ ಆಸರೆಯಾದ ಶ್ವಾನ, ವಿಡಿಯೋ ವೈರಲ್

ನಿಯತ್ತು, ನಿಷ್ಠೆ, ನಿಸ್ವಾರ್ಥ ಪ್ರೀತಿಗೆ ಇನ್ನೊಂದು ಹೆಸರೇ ಈ ಶ್ವಾನ. ಒಂದು ಹೊತ್ತು ಹಾಕಿದರೆ ಸಾಕು ಬದುಕಿರುವರೆಗೂ ಆ ಋಣವನ್ನು ತೀರಿಸುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನವು ತನ್ನ ಪ್ರೀತಿಯನ್ನು ಹೊರಹಾಕುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಂಬೆಗಾಲಿಡುತ್ತಿರುವ ಮಗುವನ್ನು ಬೀಳದಂತೆ ನೋಡಿಕೊಂಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on:Oct 19, 2024 | 6:36 PM

Share

ಶ್ವಾನಗಳ ನಿಶ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದಿದೆ. ಅದರಲ್ಲಿಯು ಈ ಶ್ವಾನಗಳು ಪುಟಾಣಿ ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿರುತ್ತದೆ. ಮುದ್ದು ಮುದ್ದಾದ ಕಂದಮ್ಮದೊಂದಿಗೆ ಆಡುವ ಹಾಗೂ ಅವುಗಳ ರಕ್ಷಣೆ ಮಾಡುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವೈರಲ್ ಆಗುತ್ತಿರುತ್ತದೆ. ತಮ್ಮ ಮನೆ ಮಕ್ಕಳು ಯಾವುದಾದ್ರೂ ಅಪಾಯಕ್ಕೆ ಸಿಲುಕಿಕೊಂಡ್ರೆಲುಕಿಕೊಂಡ್ರೆ ರಕ್ಷಿಸುವುದರಲ್ಲಿ ಈ ಶ್ವಾನಗಳು ಎತ್ತಿದ ಕೈ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸಮುದ್ರ ತೀರದಲ್ಲಿ ಅಂಬೆಗಾಲು ಇಡುತ್ತಿರುವ ಕಂದಮ್ಮಗೆ ಆಸರೆಯಾಗಿ ಮನೆಯ ಶ್ವಾನ ನಿಂತಿದ್ದು, ಈ ದೃಶ್ಯವು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

Miks reaction ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ, ಹಸುಗೂಸು ಮರಳಿನಲ್ಲಿ ಅಂಬೇಗಾಲು ಇಡುತ್ತಿರುವಾಗ ಬೀಳದಂತೆ ಶ್ವಾನವು ಆಸರೆಯಾಗಿ ನಿಲ್ಲುತ್ತಿದೆ. ಒಂದೊಂದು ಹೆಜ್ಜೆಯಿಟ್ಟು ಮುಂದೆ ಹೋಗುವ ಮಗುವಿನ ಸಹಾಯಕ್ಕೆ ನಾಯಿ ಬರುತ್ತಿದೆ. ಇತ್ತ ಶ್ವಾನವು ಸಹಾಯಕ್ಕೆ ಬರುತ್ತಿದ್ದಂತೆಯೇ ಮಗು ನಾಯಿಯ ಮೇಲೆ ಕೈಯಿಟ್ಟು ಸಮತೋಲನ ಪಡೆದು ಮುಂದೆ ನಡೆದಿದೆ.

ಇದನ್ನೂ ಓದಿ: ಇದು ಕೋಟಿ ಕೋಟಿ ಬೆಲೆ ಬಾಳುವ ವಿಶ್ವದ ಅತ್ಯಂತ ದುಬಾರಿ ನೇಲ್ ಪಾಲಿಶ್​; ಏನಿದರ ವಿಶೇಷತೆ

ಹೀಗೆ ಮುಂದೆ ಮುಂದೆ ಹೋಗುತ್ತಿರುವ ಮಗುವು ಒಂದೊಮ್ಮೆ ಬೀಳಲು ಮುಂದಾದಾಗ ಶ್ವಾನವು ಓಡಿ ಹೋಗಿ ಮಗುವು ಬೀಳದಂತೆ ನೋಡಿಕೊಂಡಿದೆ. ಕಂದಮ್ಮವು ಬಹುದೂರ ನಡೆಯುವವರೆಗೂ ಪಕ್ಕದಲ್ಲಿಯೇ ಇದ್ದು ಆಸರೆಯಾಗಿರುವ ಈ ದೃಶ್ಯವು ನೆಟ್ಟಿಗರ ಕಣ್ಮನ ಸೆಳೆದಿದೆ. ಈ ವಿಡಿಯೋವು ಈಗಾಗಲೇ 2.4 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ನೆಟ್ಟಿಗರೊಬ್ಬರು, ‘ಈ ನಾಯಿಯಿಂದ ನಾನು ಬಹಳಷ್ಟು ಕಲಿಯಬೇಕಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಅಮ್ಮನಾದ ನಾಯಿ’ ಎಂದು ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 19 October 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?