Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್: ಇಲ್ಲಿದೆ ವೈರಲ್ ವಿಡಿಯೋ ​

ಈ ವಿಲಕ್ಷಣ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ. ರೇವಂತ್ ರೆಡ್ಡಿ ಅವರು ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್: ಇಲ್ಲಿದೆ ವೈರಲ್ ವಿಡಿಯೋ ​
ಕುಡಿದ ಮತ್ತಿನಲ್ಲಿ ಪೊಲೀಸ್​ ವಾಹನವೇರಿ ಕುಡುಕನ ಜಾಲಿ ರೈಡ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 15, 2022 | 11:16 AM

ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಪಾನಮತ್ತ ವ್ಯಕ್ತಿಯೊಬ್ಬ ಪೊಲೀಸ್ ವಾಹನದ ಮೇಲೆ ಹತ್ತಿಕೊಂಡು ಜಾಲಿ ರೈಡ್​​​  ಹೋದ ವಿಲಕ್ಷಣ ಘಟನೆ ನಡೆದಿದ್ದು, ಸದ್ಯ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪಾನಮತ್ತ ವ್ಯಕ್ತಿ ಚಲಿಸುತ್ತಿರುವ ಪೊಲೀಸ್ ಕಾರಿನ ಮೇಲೆ ಶರ್ಟ್ ಇಲ್ಲದೆ ಕುಳಿತುಕೊಂಡು ಉತ್ಸಾಹದಲ್ಲಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ. ಇಂಡಿಯಾ. ಕಾಮ್ ಪ್ರಕಾರ ಹೈದರಾಬಾದ್‌ನ ಆಸಿಫ್ ನಗರ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಗಲಾಟೆಯನ್ನು ಸೃಷ್ಟಿಸಿದ ವ್ಯಕ್ತಿಯನ್ನು ಅಜಯ್ ಸಿಂಗ್ (28) ಎಂದು ಗುರುತಿಸಲಾಗಿದೆ. ಈತ ಕುಡಿದ ಮತ್ತಿನಲ್ಲಿ ಪೊಲೀಸ್ ಗಸ್ತು ಕಾರಿನ ವಿಂಡ್‌ಶೀಲ್ಡ್ ಮತ್ತು ಹಿಂಬದಿಯ ಮಿರರ್​ನ್ನು ಒಡೆದು ಹಾಕಿದ್ದಾನೆ.

ಈ ವಿಲಕ್ಷಣ ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎ. ರೇವಂತ್ ರೆಡ್ಡಿ ಅವರು ಟ್ವಿಟರ್‌ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಮದ್ಯವು ಅತ್ಯಾಚಾರ ಮತ್ತು ಕೊಲೆಗೆ ಮಾತ್ರವಲ್ಲದೆ ಪೊಲೀಸ್ ವಾಹನಗಳ ಮೇಲೆ ದಾಳಿಗೂ ಕಾರಣವಾಯಿತು ಎಂದು ಅವರು ಬರೆದುಕೊಂಡಿದ್ದಾರೆ. ಸೋಮವಾರ ರಾತ್ರಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಗಲಾಟೆ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರನ್ನು ಸ್ವೀಕರಿಸಿದ ನಂತರ, ಪೊಲೀಸ್ ಗಸ್ತು ವಾಹನವು ಆ ಪ್ರದೇಶವನ್ನು ತಲುಪಿದ್ದು, ಟ್ರಾಫಿಕ್​ನಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ ವಾಹನದ ಮೇಲೆ ಸಿಂಗ್ ಆಶ್ಚರ್ಯಚಕಿತವಾಗಿ ಹತ್ತಿದ್ದಾನೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಸತತ 3ನೇ ದಿನ ಇಡಿ ವಿಚಾರಣೆ ಎದುರಿಸಲಿರುವ ರಾಹುಲ್ ಗಾಂಧಿ

ಈ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, ಆತ ಕುಡಿದು ಜಗಳ ಮಾಡಿ,  ತೊಂದರೆ ಸೃಷ್ಟಿಸಿ ಜನರಿಗೆ ಬೆದರಿಕೆ ಹಾಕುತ್ತಿದ್ದ. ನಮ್ಮ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದರು. ಅವನು ಮೊದಲು ಹೊರಟುಹೋಗಿದ್ದು, ಇದ್ದಕ್ಕಿದ್ದಂತೆ ಕೊಡಲಿಯಂತಹ ಆಯುಧದೊಂದಿಗೆ ಹಿಂತಿರುಗಿ ಚಲಿಸುತ್ತಿದ್ದ ಗಸ್ತು ಕಾರಿನ ಮೇಲೆ ಹಾರಿದ್ದಾನೆ. ಇದೆಲ್ಲವೂ ಎಷ್ಟು ವೇಗವಾಗಿ ನಡೆಯಿತು ಎಂದರೆ ನಮ್ಮ ಅಧಿಕಾರಿಗಳೂ ಆಶ್ಚರ್ಯಚಕಿತರಾದರು. ಬಹಳ ಕಷ್ಟಪಟ್ಟು ಆತನನ್ನು ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:15 am, Wed, 15 June 22

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ