AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಸನಾತನ ಧರ್ಮದ ಸೌಂದರ್ಯ; ಮನೆಯ ಪುಟ್ಟ ಲಕ್ಷ್ಮಿಯ ಪಾದ ತೊಳೆದು ಸಂಭ್ರಮಿಸಿದ ಮನೆ ಮಂದಿ

ಹೆಣ್ಣು ಮಗು ಜನಿಸಿದರೆ ಮನೆಗೆ ಲಕ್ಷ್ಮೀ ಬಂದಂತೆ ಎಂದೇಳುತ್ತಾರೆ. ಹೀಗಾಗಿ ಮನೆಯಲ್ಲಿ ಹೆಣ್ಣು ಮಗು ಹುಟ್ಟಿದರೆ ಸಂಭ್ರಮಿಸುವ ಕುಟುಂಬವನ್ನು ನೀವು ನೋಡಿರುತ್ತೀರಿ. ಈ ವಿಡಿಯೋದಲ್ಲಿ ಮನೆಯ ಸದಸ್ಯರೆಲ್ಲರೂ ಪುಟ್ಟ ಹುಡುಗಿಯ ಪಾದ ತೊಳೆದು, ಆ ನೀರನ್ನು ಅಮೃತವೆಂಬಂತೆ ಸ್ವೀಕರಿಸಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದುಕೊಂಡಿದೆ.

Video: ಇದು ಸನಾತನ ಧರ್ಮದ ಸೌಂದರ್ಯ; ಮನೆಯ ಪುಟ್ಟ ಲಕ್ಷ್ಮಿಯ ಪಾದ ತೊಳೆದು ಸಂಭ್ರಮಿಸಿದ ಮನೆ ಮಂದಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Nov 05, 2025 | 3:04 PM

Share

ಹೆಣ್ಣೆಂದರೆ (female) ಶಕ್ತಿ, ನಮ್ಮ ಸನಾತನ ಧರ್ಮದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ. ನಮ್ಮ ಈ ಸಂಸ್ಕೃತಿಯಲ್ಲಿ ಹೆಣ್ಣನ್ನು ಪೂಜಿಸುವುದಲ್ಲದೇ ಸೃಷ್ಟಿ ಹಾಗೂ ಪ್ರೀತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೆಣ್ಣು ಮಗಳನ್ನು ದೇವತೆಯಂತೆ ಪೂಜಿಸುವ ಹೃದಯಸ್ಪರ್ಶಿ ವಿಡಿಯೋ ಇದಾಗಿದೆ. ಮನೆಯ ಸದಸ್ಯರೆಲ್ಲರೂ ಮನೆಯ ಪುಟಾಣಿಯ (little girl) ಪಾದ ತೊಳೆದು, ನೀರನ್ನು ಪ್ರಸಾದವೆಂದು ಸ್ವೀಕರಿಸಿದ್ದಾರೆ. ಈ ವಿಡಿಯೋ ನೋಡಿದ ಬಳಕೆದಾರರು ಹೆಣ್ಣಿಗೆ ನೀಡಲಾದ ಸ್ಥಾನಮಾನವವೇ ಖುಷಿ ತರುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ.

ಈ ಕುಟುಂಬ ಹೆಣ್ಣಿಗೆ ನೀಡುವ ಗೌರವ ನೋಡಿ

@Dharma0292 ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹೆಣ್ಣು ಮಗುವೊಂದು ಮನೆಯ ಜಗಲಿಯ ಮೇಲೆ ಕಾಲು ಚಾಚಿ ಕುಳಿತಿಕೊಂಡಿದ್ದಾಳೆ. ಈ ವೇಳೆಯಲ್ಲಿ ಮನೆಯ ಸದಸ್ಯರೆಲ್ಲರೂ ಒಬ್ಬೊಬ್ಬರಾಗಿ ಬಂದು ಮನೆಯ ಹೆಣ್ಣು ಮಗುವಿನ ಪಾದ ತೊಳೆದು, ನೀರನ್ನು ತಲೆಯ ಮೇಲೆ ಹಚ್ಚಿ, ಪ್ರಸಾದವೆಂದು ಸ್ವೀಕರಿಸುತ್ತಿರುವುದನ್ನು ಕಾಣಬಹುದು. ಈ ಪುಟ್ಟ ಹುಡುಗಿಯೂ ಎಲ್ಲರನ್ನು ಕಣ್ಣು ಬಾಯಿ ಬಿಟ್ಟು ನೋಡಿ, ಮುದ್ದಾಗಿ ನಗುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ: ಗ್ಲಾಸ್‌ನಲ್ಲಿದ್ದ ನೀರು ಚೆಲ್ಲದೇ ಕಿತ್ತಳೆ ಹಣ್ಣು ಹೊರತೆಗೆದ ಬಾಲಕಿ, ಈಕೆ ಬಳಸಿದ ಟ್ರಿಕ್ಸ್ ನೋಡಿ

ನವೆಂಬರ್ 3 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಇಪ್ಪತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಇದು ಭಾರತದ ನಿಜವಾದ ಗುರುತು, ಮಹಿಳೆಯರಿಗೆ ವಿಶಿಷ್ಟ ಸ್ಥಾನಮಾನ ನೀಡಲಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಹೆಣ್ಣು ಮಕ್ಕಳನ್ನು ಪೂಜಿಸುವ ದೇಶದಲ್ಲಿ ಪ್ರತಿದಿನವು ನವರಾತ್ರಿಯೇ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರ ಸನಾತನ ಧರ್ಮ ಸಂಸ್ಕೃತಿಗೆ ಜಯ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ