AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!

Miyazaki Mangoes : ಜಪಾನೀಸ್​ ಮಿಯಾಜಕಿ ಮಾವಿನ ಹಣ್ಣು ವಿಶ್ವದಲ್ಲಿಯೇ ಅತಿ ದುಬಾರಿ ಮಾವಿನ ಹಣ್ಣುಗಳಲ್ಲಿ ಒಂದಾಗಿದೆ. ಅಪರೂಪದಲ್ಲಿ ಅಪರೂಪವಾದ ಈ ಹಣ್ಣು ಕಳೆದ ವರ್ಷ ಪ್ರತಿ ಕೆಜಿಗೆ 2.7 ಲಕ್ಷ ರೂಪಾಯಿ ಇತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದೆ.

ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 18, 2021 | 11:43 AM

Share

ಒಂದು ಕೆಜಿ ಮಾವಿನ ಹಣ್ಣಿಗೆ ನೀವು ಎಷ್ಟು ರೂಪಾಯಿ ಕೊಟ್ಟೀರುತ್ತೀರಾ? ಹೆಚ್ಚೂ ಅಂದ್ರೂ 200-250 ರೂಪಾಯಿಯ ಒಳಗಿರಬಹುದು ಅಲ್ವೇ. ಆದರೆ ವಿಶ್ವದಲ್ಲೇ ಅತಿ ದುಬಾರಿ ರಸಭರಿತ ಮಾವಿ ಹಣ್ಣು ಯಾವುದು ಎಂದು ತಿಳಿದು ಕೊಳ್ಳಬೇಕು ಎಂಬ ಆಸೆ ಇದ್ದೇ ಇರುತ್ತದೆ ಅಲ್ವೇ? ಅಪರೂಪದಲ್ಲಿ ಅಪರೂಪ ಈ ಮಾವಿನ ಹಣ್ಣು.. ಅತಿ ದುಬಾರಿ ಬೆಲೆ.. ಜತೆಗೆ ಬಣ್ಣವೂ ವಿಭಿನ್ನ! ಹೀಗಿರುವಾಗ ಮಾವಿನ ಹಣ್ಣಿನ ಪ್ರಿಯರಿಗೆ ಕೊಳ್ಳುವ ಆಸೆ ಹುಟ್ಟಿರಬೇಕಲ್ವೇ? ಕೆಜಿ ಮಾವಿನ ಹಣ್ಣಿನ ಬೆಲೆ ಕೇಳಿ, ಆಮೇಲೆ ಯೋಚಿಸಬಹುದು ಖರೀದಿಸುವುದರ ಕುರಿತು..

ಅಪರೂಪದಲ್ಲಿ ಅಪರೂಪದ ಮಾವಿನ ಹಣ್ಣಿಗೆ ಪ್ರತಿ ಕೆಜಿಗೆ 2.7 ಲಕ್ಷ ರೂಪಾಯಿಯಂತೆ. ಆಶ್ಚರ್ಯವಾಗುತ್ತಿದ್ರೂ ನಂಬಲೇಬೇಕಾದ ಸತ್ಯ. ಹಣ್ಣನ್ನು ಬೆಳೆದ ದಂಪತಿ ಆಭರಣಗಳನ್ನು ರಕ್ಷಿಸಿದಷ್ಟೇ ಜಾಗರೂಕತೆಯಿಂದ ರಕ್ಷಿಸುತ್ತಿದ್ದಾರೆ.  ವಿಶ್ವದಲ್ಲಿಯೇ ಅತಿ ದುಬಾರಿ ಹಣ್ಣನ್ನು ಬೆಳೆದ ದಂಪತಿ ಯಾರು? ಎಂಬ ಕುತೂಹಲ ಕೆರಳಿರಬೇಕಲ್ಲವೇ..

ಈ ಹಣ್ಣು ಜಪಾನ್​ನಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ಇದರ ಹೆಸರು ಮಿಯಾಜಾಕಿ ಮಾವಿನ ಹಣ್ಣು. ಸಾಮಾನ್ಯವಾಗಿ ಮಾವಿನ ಹಣ್ಣುಗಳು ಹಳದಿ ಬಣ್ಣದಲ್ಲಿದ್ದರೆ ಈ ಅಪರೂಪದ ಮಾವಿನ ಹಣ್ಣು ಕಡುಗೆಂಪು ಬಣ್ಣದಲ್ಲಿದೆ. ಜಪಾನೀಸ್​ ಮಾವಿನ ತಳಿಯನ್ನು ಮಧ್ಯಪ್ರದೇಶದ ದಂಪತಿ ಬೆಳೆದಿದ್ದಾರೆ. ಬೆಳೆದ ಹಣ್ಣಿನ ಕಾವಲಿಗೆ 6 ನಾಯಿಗಳನ್ನು ಹಾಗೂ 4 ಜನ ಭದ್ರತಾ ಸಿಬ್ಬಂದಿಯನ್ನು ನೇಮಿಸಿಟ್ಟಿದ್ದಾರೆ.

ಮಧ್ಯಪ್ರದೇಶದ ದಂಪತಿ ಚೆನ್ನೈಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆ ಸಂದರ್ಭದಲ್ಲಿ ಓರ್ವ ವ್ಯಕ್ತಿ ಅವರಿಗಾಗಿ ಒಂದಿಷ್ಟು ಮಾವಿನ ಸಸಿಗಳನ್ನು ನೀಡಿದ್ದರು. ಇದನ್ನು ಮನೆಗೆ ತಂದ ದಂಪತಿ ತಮ್ಮ ತೋಟದಲ್ಲಿ ಸಸಿಯನ್ನು ಚೆನ್ನಾಗಿ ಬೆಳೆಸಿದ್ದಾರೆ. ಸಾಮಾನ್ಯವಾಗಿ ಮಾವಿನ ಹಣ್ಣು ಹಳದಿ ಬಣ್ಣದಲ್ಲಿ ಕಾಣ ಸಿಗುತ್ತದೆ. ಆದರೆ ಈ ಹಣ್ಣು ಕಡುಗೆಂಪು ಬಣ್ಣದಲ್ಲಿ ಕಂಡು ಆಶ್ಚರ್ಯವಾಗಿದೆ ಅವರಿಗೆ. ಈ ಕುರಿತಂತೆ ಅವರು ಸಂಶೋಧನೆಗೆ ಮುಂದಾಗಿದ್ದಾರೆ. ಹಣ್ಣಿನ ಕುರಿತಾಗಿ ತಿಳಿಯುತ್ತಿದ್ದಂತೆಯೇ ಅದರ ಮಹತ್ವ ತಿಳಿದ ದಂಪತಿ ಭಾರೀ ಸಂತೋಷಗೊಂಡಿದ್ದಾರೆ.

ಜಪಾನೀಸ್​ ಮಿಯಾಜಕಿ ಮಾವಿನ ಹಣ್ಣು ವಿಶ್ವದಲ್ಲಿಯೇ ಅತಿ ದುಬಾರಿ ಮಾವಿನ ಹಣ್ಣುಗಳಲ್ಲಿ ಒಂದಾಗಿದೆ. ಅಪರೂಪದಲ್ಲಿ ಅಪರೂಪವಾದ ಈ ಹಣ್ಣು ಕಳೆದ ವರ್ಷ ಪ್ರತಿ ಕೆಜಿಗೆ 2.7 ಲಕ್ಷ ರೂಪಾಯಿ ಇತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದೆ.

ಕಳೆದ ವರ್ಷ ಕಳ್ಳರು ದಂಪತಿ ತೋಟಕ್ಕೆ ನುಗ್ಗಿ ದುಬಾರಿ ಹಣ್ಣನ್ನು ಕದ್ದು ಹೋಗಿದ್ದಾರೆ. ಹಾಗಾಗಿ ಈ ವರ್ಷ ಮಾವಿನ ಹಣ್ಣನ್ನು ಕಳ್ಳರಿಂದ ಕಾಪಾಡಿಕೊಳ್ಳಲು 6 ನಾಯಿಗಳನ್ನು, 4 ಕಾವಲುಗಾರರನ್ನು ನಿಯೋಜಿಸಲಾಗಿದೆ. ಮತ್ತು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಫಸಲು ಬಿಡುವಂತೆ ತೋಟವನ್ನು ರಕ್ಷಿಸಿದ್ದಾರೆ. ಈ ಕುರಿತಂತೆ ಟೈಮ್ಸ್​ ಆಫ್​ ಇಂಡಿಯಾ ಸುದ್ದಿ ಮಾಧ್ಯಮ ವರದಿ ಮಾಡಿದೆ.

ಫೋಲಿಕ್​ ಆಮ್ಲ ಮತ್ತು ಉತ್ಕರ್ಷಣ ನಿರೋಧಕ ಅಂಶದಿಂದ ಸಮೃದ್ಧಿಯಾಗಿರುವ ವಿಶೇಷ ಹಣ್ಣು ಇದಾಗಿದೆ. ದೃಷ್ಟಿಹೀನತೆಯನ್ನು ಸುಧಾರಿಸುವ ಶಕ್ತಿ ಇದರಲ್ಲಿದೆ. ಈ ಅಪರೂಪದ ಹಣ್ಣನ್ನು ಜಪಾನಿನಲ್ಲಿ ಮೊದಲು ಬೆಳೆದವರು ಮಿಯಾಜಾಕಿ ನಗರದವರು.

ಇದನ್ನೂ ಓದಿ:

ಹಾವೇರಿ: ಹೊಟ್ಟೆ ಪಾಡಿಗೆ ಮಾವಿನ ಹಣ್ಣು ವ್ಯಾಪಾರ, ಉದ್ಯೋಗ ಖಾತ್ರಿಯತ್ತ ಮುಖ ಮಾಡಿದ ಅತಿಥಿ ಉಪನ್ಯಾಸಕರು

ಅತಿ ಹೆಚ್ಚು ತೂಕದ ಮಾವಿನ ಹಣ್ಣು ಬೆಳೆದು ವಿಶ್ವ ದಾಖಲೆಗೆ ಹೆಸರಾದ ಕೊಲಂಬಿಯಾ ರೈತರು

Published On - 11:34 am, Fri, 18 June 21

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ