AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಮೀನುಗಾರಿಕೆ ವೇಳೆ ಮೀನುಗಾರನ ಬಾಯಿಯೊಳಗೆ ನುಗ್ಗಿದ ಮೀನು! ಮುಂದೇನಾಯ್ತು ಗೊತ್ತಾ?

ನೀರಿನ ಮೇಲ್ಮೈ ಅಡಿಯಲ್ಲಿ ಹಾರ್ಪೂನ್‌ನೊಂದಿಗೆ ಸ್ಪೈಕ್-ಫಿಶಿಂಗ್ ಮಾಡುತ್ತಿದ್ದಾಗ ಮೀನುಗಾರನ ಬಾಯಿಯೊಳಗೆ ಮೀನು ನುಗ್ಗಿದ ಘಟನೆಯೊಂದು ಥೈಲ್ಯಾಂಡ್​ನಲ್ಲಿ ನಡೆದಿದೆ. ಸದ್ಯ ವೈದ್ಯರು ಯಶಸ್ವಿ ಚಿಕಿತ್ಸೆ ನಡೆಸಿ ಮೀನನ್ನು ಹೊರ ತೆಗೆದಿದ್ದಾರೆ.

Trending: ಮೀನುಗಾರಿಕೆ ವೇಳೆ ಮೀನುಗಾರನ ಬಾಯಿಯೊಳಗೆ ನುಗ್ಗಿದ ಮೀನು! ಮುಂದೇನಾಯ್ತು ಗೊತ್ತಾ?
ವೈರಲ್ ಆಗುತ್ತಿರುವ ಗಂಟಲಿನ ಎಕ್ಸ್​ರೇ ಮತ್ತು ಮೀನು
TV9 Web
| Edited By: |

Updated on:Jun 03, 2022 | 3:55 PM

Share

ಮೀನುಗಾರನೊಬ್ಬ ನೀರಿನ ಮೇಲ್ಮೈ ಅಡಿಯಲ್ಲಿ ಹಾರ್ಪೂನ್‌ (harpoon)ನೊಂದಿಗೆ ಸ್ಪೈಕ್-ಫಿಶಿಂಗ್ (spike-fishing) ಮಾಡುತ್ತಿದ್ದಾಗ ಆತನ ಬಾಯಿಯೊಳಗೆ ಮೀನು ನುಗ್ಗಿದ ಘಟನೆಯೊಂದು ಥೈಲ್ಯಾಂಡ್​ (Thailand)ನಲ್ಲಿ ನಡೆದಿದೆ. ಮೊನಚಾದ ಅನಾಬಾಸ್ ಮೀನು ಮೀನುಗಾರನ ಸ್ಪೈಕ್‌ಗೆ ಸಿಲುಕಿಕೊಳ್ಳದೆ ನೇರವಾಗಿ ಆತನ ಬಾಯಿಯೊಳಗೆ ನುಗ್ಗಿ ಗಂಟಲು ಮತ್ತು ಮೂಗಿನ ಕುಹರದ ನಡುವೆ ಸಿಲುಕಿಕೊಂಡಿದೆ. ಪರಿಣಾಮವಾಗಿ ಮೀನುಗಾರನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಅದರಂತೆ ಆತನನ್ನು ಫಠಾಲುಂಗ್ ಪ್ರಾಂತೀಯ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: Trending: ಹಣ್ಣು ಕೀಳುವುದು ಇನ್ನಷ್ಟು ಸುಲಭ, ಹೇಗೆ ಗೊತ್ತಾ? ಉದ್ಯಮಿ ಆನಂದ್ ಮಹೀಂದ್ರಾ ಹಂಚಿಕೊಂಡ ವಿಡಿಯೋ ನೋಡಿ

ಉಸಿರಾಡಲು ಸಾಧ್ಯವಾಗದ ಹಿನ್ನೆಲೆ ವೈದ್ಯರು ತ್ವರಿತ ಸ್ಕ್ಯಾನ್​ಗಳನ್ನು ಮಾಡಿದರು. ಈ ವೇಳೆ ಮೀನು ಗಂಟಲು ಮತ್ತು ಮೂಗಿನ ಕುಹರದ ನಡುವೆ ಸಿಲುಕಿಕೊಂಡಿರುವುದು ಪತ್ತೆಯಾಗಿದೆ. ಮೀನನ್ನು ಅವನ ದೇಹದಿಂದ ಹೊರತೆಗೆಯಲು ಇಬ್ಬರು ವೈದ್ಯರು ಮೂವರು ನರ್ಸ್​ಗಳ ಸಹಾಯದೊಂದಿಗೆ ಶಸ್ತ್ರಚಿಕಿತ್ಸೆ ಆರಂಭಿಸಿದರು. ಅದರಂತೆ ಒಂದು ಗಂಟೆಗಳ ಕಾಲ ಸತತ ಪ್ರಯತ್ನ ನಡೆಸಿದ ವೈದ್ಯರು ಬಾಯಿ ಮೂಲಕ ಮೀನನ್ನು ಎಳೆದು ತೆಗೆದರು ಎಂದು ವರದಿಯಾಗಿದೆ.

ಗಂಟಲಿನಿಂದ ಮೀನನ್ನು ಹೊರತೆಗೆಯಲಾಗಿದ್ದು, ಅದೃಷ್ಟವಶಾತ್ ಮೀನುಗಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅವರು ಈಗ ಸಹಜ ಸ್ಥಿತಿಗೆ ಮರಳಿದ್ದಾರೆ. ಸದ್ಯ ಅವರ ಗಂಟಲಿನ ಸ್ಕ್ಯಾನ್ ಮಾಡಿದ ಫೋಟೋಗಳು ಮತ್ತು ಅವರ ಗಂಟಲಿನಿಂದ ತೆಗೆದ ಮೀನಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: Trending News: ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಮಾಡಿದ್ದ ವಿಶ್ವದ ಅತಿ ದೊಡ್ಡ ವಿಸ್ಕಿ ಬಾಟಲ್ ಮಾರಾಟ! ಎಷ್ಟಕ್ಕೆ ಗೊತ್ತಾ?

ಆಸ್ಪತ್ರೆಯ ಅಧಿಕಾರಿ ಸೆರ್ಮಶ್ರೀ ಪಥೊಂಪನಿಚ್ರತ್ ಹೇಳುವಂತೆ, “ನಮ್ಮ ವೈದ್ಯರು ನಮ್ಮ ರೋಗಿಯ ಅಂಗಗಳಿಗೆ ಹಾನಿಯಾಗದಂತೆ ನೀಡಿಕೊಂಡರು. ಅವರು ಮೀನನನ್ನು ಯಶಸ್ವಿಯಾಗಿ ಹೊರತೆಗೆದಿದ್ದು, ರೋಗಿಗೆ ಯಾವುದೇ ತೊಂದರೆಯಾಗಿಲ್ಲ. ಇಂಥ ಘಟನೆ ಸಂಭವಿಸುವ ಸಾಧ್ಯತೆಗಳು ತುಂಬಾ ಕಡಿಮೆ. ನಾನು ಈ ರೀತಿಯ ಪ್ರಕರಣವನ್ನು ಹಿಂದೆಂದೂ ನೋಡಿಲ್ಲ”ಎಂದು ಹೇಳಿದರು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Fri, 3 June 22

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ