AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bedbug Scam: ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ

ಕಳೆದ ಕೆಲವು ದಿನಗಳಿಂದ ಫ್ರಾನ್ಸ್​​ನಲ್ಲಿ ತಿಗಣೆ ಕಾಟ ಹೆಚ್ಚಾಗುತ್ತಿದ್ದು, ಇದನ್ನೇ ಅಸ್ತ್ರವಾಗಿ ಪಡೆದುಕೊಂಡಿದ್ದ ಇಬ್ಬರು ವಂಚಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಗಣೆ ಕಾಟ ಒಂದೇ ದಿನದಲ್ಲಿ ಮಾಯಾವಾಗಿಬಿಡುತ್ತದೆ ಎಂದು ಲಸಿಕೆ ನೀಡಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ವಂಚಕರು.

Bedbug Scam: ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ
ಅಕ್ಷತಾ ವರ್ಕಾಡಿ
|

Updated on:Dec 12, 2023 | 11:46 AM

Share

ತಿಗಣೆ ನೋಡಲು ಚಿಕ್ಕದಾಗಿ ಕಂಡರೂ ಕೂಡ ಅದರ ಕಾಟ ಎಷ್ಟಿದೆ ಎಂದು ಅನುಭವಿಸಿದವರಿಗೇ ಗೊತ್ತು. ಎಷ್ಟೇ ಬೇಡವೆಂದರೂ, ಮನೆಗೆ ಎಡೆಬಿಡದೇ ಆಗಮಿಸುವ ಅತಿಥಿಗಳೆಂದರೆ ಅದು ತಿಗಣೆ. ಕಳೆದ ಕೆಲವು ದಿನಗಳಿಂದ ಫ್ರಾನ್ಸ್​​ನಲ್ಲಿ ತಿಗಣೆ ಕಾಟ ಹೆಚ್ಚಾಗುತ್ತಿದ್ದು, ಇದನ್ನೇ ಅಸ್ತ್ರವಾಗಿ ಮಾಡಿ ಜನರನ್ನು ವಂಚಿಸುತ್ತಿದ್ದ ವಂಚಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಗಣೆ ಕಚ್ಚದಂತೆ ನಿಮ್ಮನ್ನು ರಕ್ಷಿಸುವುದಾಗಿ ಲಸಿಕೆಯೊಂದನ್ನು ಜನರಿಗೆ ನೀಡಿ ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ವಂಚಕರು ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ವರದಿಗಳ ಪ್ರಕಾರ, ವಂಚಕರಿಬ್ಬರು ತಿಗಣೆ ಕಾಟದಿಂದ ಬಳಲುತ್ತಿರುವ ಮನೆಗಳಿಗೆ ಹೋಗಿ ಒಂದೇ ದಿನದಲ್ಲಿ ತಿಗಣೆಯನ್ನು ನಿಮ್ಮ ಮನೆಯಲ್ಲಿ ಓಡಿಸುವುದಾಗಿ ನಕಲಿ ನಿಯಂತ್ರಣ ಸೇವೆಗಳನ್ನು ನೀಡುತ್ತಿದ್ದರು. ಇದಲ್ಲದೇ ತಿಗಣೆ ಕಚ್ಚದಂತೆ ಲಸಿಕೆಯನ್ನು ನೀಡುವುದಾಗಿ ಜನರನ್ನು ನಂಬಿಸಿದ್ದರು.

ಇದನ್ನೂ ಓದಿ: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ

ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ  ಪ್ರತೀ ಮನೆಯಿಂದ 324 ಡಾಲರ್ ಅಂದರೆ ಭಾರತದ ಕರೆನ್ಸಿಯ ಪ್ರಕಾರ 27 ಸಾವಿರ ರೂಪಾಯಿಗಳನ್ನು ಪಡೆಯುತ್ತಿದ್ದರು ಎಂದು ಸಂತ್ರಸ್ತರ ದೂರಿನ ಆಧಾರದ ಮೇಲೆ ಕೇಸು ದಾಖಲಿಸಲಾಗಿತ್ತು. ಕೇಸಿನ ಆಧಾರ ಮೇಲೆ ವಂಚಕರನ್ನು ಪೊಲೀಸರು ಬಂಧಿಸಿದ್ದು,ಇಲ್ಲಿಯವೆರೆಗೆ 48ಕ್ಕಿಂತಲೂ ಹೆಚ್ಚಿನ ಮನೆಗಳಲ್ಲಿ ವಂಚಿಸಿರುವುದಾಗಿ ತಿಳಿದುಬಂದಿದೆ. ಫ್ರೆಂಚ್ ಸರ್ಕಾರವು ಮೇಲೆ ಈ ತಿಗಣೆ ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇದೀಗಾ ವಿವಾದಾತ್ಮಕ ರಾಜಕೀಯ ವಿಷಯವಾಗಿ ಮಾರ್ಪಟ್ಟಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:45 am, Tue, 12 December 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ