Bedbug Scam: ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ

ಕಳೆದ ಕೆಲವು ದಿನಗಳಿಂದ ಫ್ರಾನ್ಸ್​​ನಲ್ಲಿ ತಿಗಣೆ ಕಾಟ ಹೆಚ್ಚಾಗುತ್ತಿದ್ದು, ಇದನ್ನೇ ಅಸ್ತ್ರವಾಗಿ ಪಡೆದುಕೊಂಡಿದ್ದ ಇಬ್ಬರು ವಂಚಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಗಣೆ ಕಾಟ ಒಂದೇ ದಿನದಲ್ಲಿ ಮಾಯಾವಾಗಿಬಿಡುತ್ತದೆ ಎಂದು ಲಸಿಕೆ ನೀಡಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ವಂಚಕರು.

Bedbug Scam: ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ
Follow us
|

Updated on:Dec 12, 2023 | 11:46 AM

ತಿಗಣೆ ನೋಡಲು ಚಿಕ್ಕದಾಗಿ ಕಂಡರೂ ಕೂಡ ಅದರ ಕಾಟ ಎಷ್ಟಿದೆ ಎಂದು ಅನುಭವಿಸಿದವರಿಗೇ ಗೊತ್ತು. ಎಷ್ಟೇ ಬೇಡವೆಂದರೂ, ಮನೆಗೆ ಎಡೆಬಿಡದೇ ಆಗಮಿಸುವ ಅತಿಥಿಗಳೆಂದರೆ ಅದು ತಿಗಣೆ. ಕಳೆದ ಕೆಲವು ದಿನಗಳಿಂದ ಫ್ರಾನ್ಸ್​​ನಲ್ಲಿ ತಿಗಣೆ ಕಾಟ ಹೆಚ್ಚಾಗುತ್ತಿದ್ದು, ಇದನ್ನೇ ಅಸ್ತ್ರವಾಗಿ ಮಾಡಿ ಜನರನ್ನು ವಂಚಿಸುತ್ತಿದ್ದ ವಂಚಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಗಣೆ ಕಚ್ಚದಂತೆ ನಿಮ್ಮನ್ನು ರಕ್ಷಿಸುವುದಾಗಿ ಲಸಿಕೆಯೊಂದನ್ನು ಜನರಿಗೆ ನೀಡಿ ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ವಂಚಕರು ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ವರದಿಗಳ ಪ್ರಕಾರ, ವಂಚಕರಿಬ್ಬರು ತಿಗಣೆ ಕಾಟದಿಂದ ಬಳಲುತ್ತಿರುವ ಮನೆಗಳಿಗೆ ಹೋಗಿ ಒಂದೇ ದಿನದಲ್ಲಿ ತಿಗಣೆಯನ್ನು ನಿಮ್ಮ ಮನೆಯಲ್ಲಿ ಓಡಿಸುವುದಾಗಿ ನಕಲಿ ನಿಯಂತ್ರಣ ಸೇವೆಗಳನ್ನು ನೀಡುತ್ತಿದ್ದರು. ಇದಲ್ಲದೇ ತಿಗಣೆ ಕಚ್ಚದಂತೆ ಲಸಿಕೆಯನ್ನು ನೀಡುವುದಾಗಿ ಜನರನ್ನು ನಂಬಿಸಿದ್ದರು.

ಇದನ್ನೂ ಓದಿ: ಜೇಬಿನಲ್ಲಿ ಲಕ್ಷ ಲಕ್ಷ ದುಡ್ಡಿಟ್ಟುಕೊಂಡಿದ್ದರೂ, ಹಸಿವಿನಿಂದ ಸಾವನ್ನಪಿದ್ದ ಭಿಕ್ಷುಕ

ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ  ಪ್ರತೀ ಮನೆಯಿಂದ 324 ಡಾಲರ್ ಅಂದರೆ ಭಾರತದ ಕರೆನ್ಸಿಯ ಪ್ರಕಾರ 27 ಸಾವಿರ ರೂಪಾಯಿಗಳನ್ನು ಪಡೆಯುತ್ತಿದ್ದರು ಎಂದು ಸಂತ್ರಸ್ತರ ದೂರಿನ ಆಧಾರದ ಮೇಲೆ ಕೇಸು ದಾಖಲಿಸಲಾಗಿತ್ತು. ಕೇಸಿನ ಆಧಾರ ಮೇಲೆ ವಂಚಕರನ್ನು ಪೊಲೀಸರು ಬಂಧಿಸಿದ್ದು,ಇಲ್ಲಿಯವೆರೆಗೆ 48ಕ್ಕಿಂತಲೂ ಹೆಚ್ಚಿನ ಮನೆಗಳಲ್ಲಿ ವಂಚಿಸಿರುವುದಾಗಿ ತಿಳಿದುಬಂದಿದೆ. ಫ್ರೆಂಚ್ ಸರ್ಕಾರವು ಮೇಲೆ ಈ ತಿಗಣೆ ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇದೀಗಾ ವಿವಾದಾತ್ಮಕ ರಾಜಕೀಯ ವಿಷಯವಾಗಿ ಮಾರ್ಪಟ್ಟಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:45 am, Tue, 12 December 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್