Viral Video: ಜೀನಾ ಇಸೀ ಕಾ ನಾಮ್ ಹೈ; ಅಜ್ಜಿಯ ಡ್ಯಾನ್ಸ್​ ಮೂಡ್​ಗೆ ನೆಟ್ಟಿಗರೆಲ್ಲ ಫಿದಾ

Reunion : ಶಾಲಾ ವಾರ್ಷಿಕೋತ್ಸವದಲ್ಲಿ ನರ್ತಿಸಲು ಇವರಿಗೆ ಅವಕಾಶ ಸಿಕ್ಕಿರಲಿಲ್ಲವೇನೋ ಅದಕ್ಕೆ ಇಲ್ಲಿ ಹೀಗೆ ನರ್ತಿಸುತ್ತಿದ್ದಾರೆ ಎಂದು ನೆಟ್ಟಿಗರೊಬ್ಬರು ಹಗೂರವಾಗಿ ಮಾತನಾಡಿದ್ದಾರೆ.

Viral Video: ಜೀನಾ ಇಸೀ ಕಾ ನಾಮ್ ಹೈ; ಅಜ್ಜಿಯ ಡ್ಯಾನ್ಸ್​ ಮೂಡ್​ಗೆ ನೆಟ್ಟಿಗರೆಲ್ಲ ಫಿದಾ
ಶಾಲಾ ಸ್ನೇಹಿತರ ಪುನರ್ಮಿಲನ ಕಾರ್ಯಕ್ರಮದಲ್ಲಿ ಹಿರಿಯ ಮಹಿಳೆ ನರ್ತಿಸುತ್ತಿರುವುದು
Follow us
|

Updated on:Jun 14, 2023 | 12:55 PM

Dance : ಹೇಗೆ ನೋಡಬೇಕು, ಹೇಗೆ ನಡೆಯಬೇಕು, ಹೇಗೆ ಕುಳಿತುಕೊಳ್ಳಬೇಕು, ಹೇಗೆ ನಿಲ್ಲಬೇಕು, ಹೇಗೆ ಮಲಗಬೇಕು,  ಹೇಗೆ ಹೊರಳಬೇಕು, ಹೇಗೆ ಸೀನಬೇಕು, ಹೇಗೆ ಕೆಮ್ಮಬೇಕು, ಹೇಗೆ ಉಸಿರಾಡಬೇಕು, ಹೇಗೆ ಮಲಗಬೇಕು ಇನ್ನೂ ಏನೆಲ್ಲ ಬೇಕುಬೇಕುಗಳ ಅತೀ ಶಿಸ್ತಿನ ಚೌಕಟ್ಟಿನೊಳಗೆ ಮನುಷ್ಯ ಸಹಜತೆಯನ್ನೇ ಮರೆತುಬಿಡುತ್ತಾನೆ. ಯಾವಾಗ ಸಹಜತೆ ಮರೆಯಾಗುತ್ತದೆಯೋ ಅಲ್ಲಿ ಒತ್ತಡ ಶುರುವಾಗುತ್ತದೆ. ಅದು ಮನಸ್ಸು ಮತ್ತು ದೇಹದ ಮೇಲೆ ಪರಿಣಾಮ ಬೀರಲು ಹೆಚ್ಚು ಸಮಯ ತೆಗೆದುಕೊಳ್ಳಲಾರದು. ಆದರೂ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಮೈಚಳಿ ಬಿಟ್ಟು ಬದುಕಬೇಕು ಎಂದೇ ಕನಸುತ್ತಿರುತ್ತಾನೆ. ಇದೀಗ ವೈರಲ್ ಆಗಿರುತವ ಈ ವಿಡಿಯೋ ಇದಕ್ಕೆ ಸಾಕ್ಷಿ.

1954ರಲ್ಲಿ ಶಾಲೆಕಟ್ಟಿಯಿಂದ ಹೊರದಾಟಿದ ವಿದ್ಯಾರ್ಥಿ ವಿದ್ಯಾರ್ಥಿನಿಯರೆಲ್ಲ ಇದೀಗ ಇಲ್ಲಿ ಒಟ್ಟಾಗಿದ್ದಾರೆ. ಇಲ್ಲಿ ಎಲ್ಲರೂ ಹಾಡಿನೊಳಗೆ ಭಾಗಿಯಾಗಿದ್ದಾರೆ. ಆದರೆ ಕೆಲವರಷ್ಟೇ ನೃತ್ಯ ಮಾಡುತ್ತಿದ್ದಾರೆ. ಈ ಎಲ್ಲರೊಳಗೂ ಅತ್ಯುತ್ಸಾಹದಿಂದ ಮಿಂಚುತ್ತಿರುವ ಅಜ್ಜಿಯೇ ಈ ವಿಡಿಯೋದ ಕೇಂದ್ರಬಿಂದು. ಆಕೆಯ ಉತ್ಸಾಹ ಎಂಥವರಲ್ಲಿಯೂ ಸಂಚಲನ ಮೂಡಿಸುವಂತಿದೆ. ಗೆಳೆತನದ ಈ ನಶೆ ಯಾವತ್ತೂ ಬೇರೆಯೇ! ಎಂದಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : Viral: ಟೈ ಕಟ್ಟಿಕೊಳ್ಳುವುದು ಹೀಗೆ; ಸಂದರ್ಶನಕ್ಕೆ ಹೊರಟಿದ್ದ ಯುವಕನಿಗೆ ಅಜ್ಜನ ಪಾಠ

ಇನ್ನೇನು ಈ ವಿಡಿಯೋ ನೋಡಿದವರ ಸಂಖ್ಯೆ 4 ಲಕ್ಷಕ್ಕೆ ತಲುಪುತ್ತದೆ. ಇವರೆಲ್ಲ ಹೀಗೆ ನರ್ತಿಸುವುದನ್ನು ನೋಡುತ್ತಿದ್ದರೆ, ಬಹುಶಃ ಇವರಿಗೆ ಶಾಲೆಯ ವಾರ್ಷಿಕೋತ್ಸವದಲ್ಲಿ ನರ್ತಿಸಲು ಅವಕಾಶ ಸಿಕ್ಕಿಲ್ಲವೆಂದು ಕಾಣುತ್ತದೆ. ಹೀಗೆ ಇಡಿಯಾಗಿ ಬದುಕುವುದು ಕೂಡ ಒಂದು ಕಲೆ. ಸದ್ಯ! ಈ ಗುಂಪಿನಲ್ಲಿ ಮೋದಿ ಕಾಣುತ್ತಿಲ್ಲವಲ್ಲ ಎಂದು ಕಾಂಗ್ರೆಸ್ಸಿಗರು ತಕರಾರು ಎತ್ತಿಲ್ಲವೆನ್ನುವುದು ಖುಷಿ ತಂದಿದೆ. ಗುಜರಾತಿಗರು ಮಾತ್ರ ಹೀಗೆ ನರ್ತಿಸಲು ಸಾಧ್ಯ… ಅಂತೆಲ್ಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:49 pm, Wed, 14 June 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು