AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀನಾ ಇಸೀ ಕಾ ನಾಮ್ ಹೈ; ಅಜ್ಜಿಯ ಡ್ಯಾನ್ಸ್​ ಮೂಡ್​ಗೆ ನೆಟ್ಟಿಗರೆಲ್ಲ ಫಿದಾ

Reunion : ಶಾಲಾ ವಾರ್ಷಿಕೋತ್ಸವದಲ್ಲಿ ನರ್ತಿಸಲು ಇವರಿಗೆ ಅವಕಾಶ ಸಿಕ್ಕಿರಲಿಲ್ಲವೇನೋ ಅದಕ್ಕೆ ಇಲ್ಲಿ ಹೀಗೆ ನರ್ತಿಸುತ್ತಿದ್ದಾರೆ ಎಂದು ನೆಟ್ಟಿಗರೊಬ್ಬರು ಹಗೂರವಾಗಿ ಮಾತನಾಡಿದ್ದಾರೆ.

Viral Video: ಜೀನಾ ಇಸೀ ಕಾ ನಾಮ್ ಹೈ; ಅಜ್ಜಿಯ ಡ್ಯಾನ್ಸ್​ ಮೂಡ್​ಗೆ ನೆಟ್ಟಿಗರೆಲ್ಲ ಫಿದಾ
ಶಾಲಾ ಸ್ನೇಹಿತರ ಪುನರ್ಮಿಲನ ಕಾರ್ಯಕ್ರಮದಲ್ಲಿ ಹಿರಿಯ ಮಹಿಳೆ ನರ್ತಿಸುತ್ತಿರುವುದು
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Jun 14, 2023 | 12:55 PM

Share

Dance : ಹೇಗೆ ನೋಡಬೇಕು, ಹೇಗೆ ನಡೆಯಬೇಕು, ಹೇಗೆ ಕುಳಿತುಕೊಳ್ಳಬೇಕು, ಹೇಗೆ ನಿಲ್ಲಬೇಕು, ಹೇಗೆ ಮಲಗಬೇಕು,  ಹೇಗೆ ಹೊರಳಬೇಕು, ಹೇಗೆ ಸೀನಬೇಕು, ಹೇಗೆ ಕೆಮ್ಮಬೇಕು, ಹೇಗೆ ಉಸಿರಾಡಬೇಕು, ಹೇಗೆ ಮಲಗಬೇಕು ಇನ್ನೂ ಏನೆಲ್ಲ ಬೇಕುಬೇಕುಗಳ ಅತೀ ಶಿಸ್ತಿನ ಚೌಕಟ್ಟಿನೊಳಗೆ ಮನುಷ್ಯ ಸಹಜತೆಯನ್ನೇ ಮರೆತುಬಿಡುತ್ತಾನೆ. ಯಾವಾಗ ಸಹಜತೆ ಮರೆಯಾಗುತ್ತದೆಯೋ ಅಲ್ಲಿ ಒತ್ತಡ ಶುರುವಾಗುತ್ತದೆ. ಅದು ಮನಸ್ಸು ಮತ್ತು ದೇಹದ ಮೇಲೆ ಪರಿಣಾಮ ಬೀರಲು ಹೆಚ್ಚು ಸಮಯ ತೆಗೆದುಕೊಳ್ಳಲಾರದು. ಆದರೂ ಮನುಷ್ಯ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಮೈಚಳಿ ಬಿಟ್ಟು ಬದುಕಬೇಕು ಎಂದೇ ಕನಸುತ್ತಿರುತ್ತಾನೆ. ಇದೀಗ ವೈರಲ್ ಆಗಿರುತವ ಈ ವಿಡಿಯೋ ಇದಕ್ಕೆ ಸಾಕ್ಷಿ.

1954ರಲ್ಲಿ ಶಾಲೆಕಟ್ಟಿಯಿಂದ ಹೊರದಾಟಿದ ವಿದ್ಯಾರ್ಥಿ ವಿದ್ಯಾರ್ಥಿನಿಯರೆಲ್ಲ ಇದೀಗ ಇಲ್ಲಿ ಒಟ್ಟಾಗಿದ್ದಾರೆ. ಇಲ್ಲಿ ಎಲ್ಲರೂ ಹಾಡಿನೊಳಗೆ ಭಾಗಿಯಾಗಿದ್ದಾರೆ. ಆದರೆ ಕೆಲವರಷ್ಟೇ ನೃತ್ಯ ಮಾಡುತ್ತಿದ್ದಾರೆ. ಈ ಎಲ್ಲರೊಳಗೂ ಅತ್ಯುತ್ಸಾಹದಿಂದ ಮಿಂಚುತ್ತಿರುವ ಅಜ್ಜಿಯೇ ಈ ವಿಡಿಯೋದ ಕೇಂದ್ರಬಿಂದು. ಆಕೆಯ ಉತ್ಸಾಹ ಎಂಥವರಲ್ಲಿಯೂ ಸಂಚಲನ ಮೂಡಿಸುವಂತಿದೆ. ಗೆಳೆತನದ ಈ ನಶೆ ಯಾವತ್ತೂ ಬೇರೆಯೇ! ಎಂದಿದ್ದಾರೆ ನೆಟ್ಟಿಗರು.

ಇದನ್ನೂ ಓದಿ : Viral: ಟೈ ಕಟ್ಟಿಕೊಳ್ಳುವುದು ಹೀಗೆ; ಸಂದರ್ಶನಕ್ಕೆ ಹೊರಟಿದ್ದ ಯುವಕನಿಗೆ ಅಜ್ಜನ ಪಾಠ

ಇನ್ನೇನು ಈ ವಿಡಿಯೋ ನೋಡಿದವರ ಸಂಖ್ಯೆ 4 ಲಕ್ಷಕ್ಕೆ ತಲುಪುತ್ತದೆ. ಇವರೆಲ್ಲ ಹೀಗೆ ನರ್ತಿಸುವುದನ್ನು ನೋಡುತ್ತಿದ್ದರೆ, ಬಹುಶಃ ಇವರಿಗೆ ಶಾಲೆಯ ವಾರ್ಷಿಕೋತ್ಸವದಲ್ಲಿ ನರ್ತಿಸಲು ಅವಕಾಶ ಸಿಕ್ಕಿಲ್ಲವೆಂದು ಕಾಣುತ್ತದೆ. ಹೀಗೆ ಇಡಿಯಾಗಿ ಬದುಕುವುದು ಕೂಡ ಒಂದು ಕಲೆ. ಸದ್ಯ! ಈ ಗುಂಪಿನಲ್ಲಿ ಮೋದಿ ಕಾಣುತ್ತಿಲ್ಲವಲ್ಲ ಎಂದು ಕಾಂಗ್ರೆಸ್ಸಿಗರು ತಕರಾರು ಎತ್ತಿಲ್ಲವೆನ್ನುವುದು ಖುಷಿ ತಂದಿದೆ. ಗುಜರಾತಿಗರು ಮಾತ್ರ ಹೀಗೆ ನರ್ತಿಸಲು ಸಾಧ್ಯ… ಅಂತೆಲ್ಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:49 pm, Wed, 14 June 23

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ