AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಬೆಂಕಿ

ತುಳುನಾಡಿನಲ್ಲಿ ದೈವಾರಾಧನೆ ಬಹಳ ವಿಶೇಷವಾದದ್ದು. ದೈವಗಳನ್ನು ನಂಬಿದರೆ ಯಾವತ್ತೂ ನಮ್ಮ ಕೈ ಬಿಡಲ್ಲ ಎನ್ನುವುದು ಇಲ್ಲಿನ ಜನರ ನಂಬಿಕೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ದೈವದ ಶಕ್ತಿಯೇನೆಂಬುದು ಮತ್ತೆ ಸಾಭೀತಾಗಿದೆ. ಹೌದು, ಪುತ್ತೂರಿನ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಮನೆ ಹೊತ್ತಿ ಉರಿದಿದೆ. ಆದರೆ ಪವಾಡವೆಂಬಂತೆ ಕಲ್ಲುರ್ಟಿ ದೈವದ ಪೀಠವು ಕಿಂಚಿತ್ತೂ ಹಾನಿಗೊಂಡಿಲ್ಲ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ತುಳುನಾಡಿನ ದೈವದ ಶಕ್ತಿ ಕಂಡು ಬೆರಗಾಗಿದ್ದಾರೆ.

Video : ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಬೆಂಕಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on:Jun 29, 2024 | 4:12 PM

Share

ದೈವಾರಾಧನೆ ತುಳುನಾಡಿನ ಕಲೆ ಸಂಸ್ಕೃತಿ, ಬದುಕಿನ ಭಾಗವಾಗಿರದೇ ನಂಬಿಕೆ ಹಾಗೂ ಶಕ್ತಿಯ ಮೂಲವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಲ್ಲಿ ದೇವರಿಗೆ ಎಷ್ಟು ಪ್ರಾಮುಖ್ಯತೆವಿದೆಯೋ ಅಷ್ಟೇ ಪ್ರಾಮುಖ್ಯತೆ ದೈವಗಳಿಗಿದೆ. ಕಷ್ಟದ ಕಾಲದಲ್ಲಿ ನಂಬಿದ ದೈವ ಕೈ ಬಿಡಲ್ಲ ಎಂದು ನಂಬಿಕೊಂಡು ಬಂದಿರುವ ಇಲ್ಲಿನ ಜನರ ನಂಬಿಕೆಯು ಹುಸಿಯಾಗಿಲ್ಲ.ದೈವ- ದೇವರ ಮೇಲಿನ ನಂಬಿಕೆಯೇ ಮರೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ಅಗೋಚರ ಶಕ್ತಿಯೂ ತನ್ನ ಇರುವಿಕೆಯನ್ನು ತೋರಿಸಿಕೊಟ್ಟಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪುತ್ತೂರಿನ ಜಿಡೆಕಲ್ಲು ಕಾಲೇಜು ಬಳಿ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿ, ಮನೆ ಸುಟ್ಟು ಕರಕಲಾಗಿದ್ದರೂ ಕಲ್ಲುರ್ಟಿ ದೈವದ ಪೀಠಕ್ಕೆ ಮಾತ್ರ ಏನು ಆಗದೇ ಇರುವುದು ನಿಜಕ್ಕೂ ಅಚ್ಚರಿ.

ಹೌದು ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪುತ್ತೂರಿನ ಜಿಡೆಕಲ್ಲು ಸರ್ಕಾರಿ ಕಾಲೇಜಿನ ಸಮೀಪದ ಮನೆಯೊಂದರಲ್ಲಿ ಮನೆಯ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಮನೆಗೆ ಬೆಂಕಿ ತಗುಲಿತ್ತು. ಆ ತಕ್ಷಣವೇ ಕಾಲೇಜಿನ ವಿದ್ಯಾರ್ಥಿಗಳಾದ ಎಡ್ವರ್ಡ್, ವಿಖ್ಯಾತ್ ಮತ್ತು ಪ್ರೀತೇಶ್ ಸೇರಿ ಸ್ಥಳೀಯರಾದ ಅಶೋಕ್ ಅವರ ಸಹಾಯದಿಂದ ಮನೆಯೊಳಗೆ ಧಾವಿಸಿ ನೀರು ಹಾಕಿ ಬೆಂಕಿ ನಂದಿಸಿದ್ದರು. ಆ ಬಳಿಕ ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು

ಇದನ್ನೂ ಓದಿ: ತುಳುವರಿಗೊಂದು ಸಂತಸದ ಸುದ್ದಿ; ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮನೆಯು ಸಂಪೂರ್ಣ ಸುಟ್ಟು ಹೋಗಿದ್ದರೂ, ಕಲ್ಲುರ್ಟಿ ದೈವದ ಮಂಚಕ್ಕೆ ಕಿಂಚಿತ್ತೂ ಬೆಂಕಿಯೂ ತಗಲಿಲ್ಲ. ಇದೀಗ ಮತ್ತೊಮ್ಮೆ ತುಳುನಾಡಿನ ದೈವ ಕಲ್ಲುರ್ಟಿ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದು, ದೈವದ ಶಕ್ತಿಗೆ ತಲೆ ಬಾಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:14 am, Sat, 29 June 24