AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನನಗೆ ಯಾರು ಶತ್ರುಗಳಿಲ್ಲ, ಇರೋರೆಲ್ಲಾ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು

ಸಾಮಾನ್ಯವಾಗಿ ಈ ಆಟೋ, ಬೈಕ್ ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ಕಂಡಾಗ ತುಟಿಯಂಚಿನಲ್ಲಿ ನಗು ಮೂಡುತ್ತದೆ. ಕೆಲವು ಸಾಲುಗಳು ಜೀವನಕ್ಕೆ ಪಾಠವಾಗುತ್ತದೆ. ಇದೀಗ ಇಂತಹದ್ದೇ ಆಟೋ ಹಿಂಬದಿ ಬರೆದ ಸಾಲುಗಳು ವೈರಲ್ ಆಗಿದ್ದು, ಆಟೋ ಚಾಲಕ ತನ ಬೆನ್ನ ಹಿಂದೆ ಮಾತಾಡುವವರಿಗೆ ಟಾಂಗ್ ಕೊಟ್ಟಂತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ನನಗೆ ಯಾರು ಶತ್ರುಗಳಿಲ್ಲ, ಇರೋರೆಲ್ಲಾ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು
ವೈರಲ್‌ ಪೋಸ್ಟ್‌ Image Credit source: Reddit
ಸಾಯಿನಂದಾ
|

Updated on:Feb 03, 2026 | 6:00 PM

Share

ನೀವು ಆಟೋ, ಬೈಕ್ ಅಥವಾ ಕಾರಿನ ಹಿಂಭಾಗದಲ್ಲಿ ಕೆಲ ತಮಾಷೆಭರಿತ ಅಥವಾ ಅರ್ಥಪೂರ್ಣ ಸಾಲುಗಳನ್ನು ನೋಡಿರಬಹುದು. ಕೆಲವರು ತಮ್ಮ ವಾಹನದ ಹಿಂಭಾಗದಲ್ಲಿ ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ಹೆಸರು ಹೀಗೆ ಕೆಲ ಸಾಲುಗಳನ್ನು ಬರೆದಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ (Auto driver) ತನ್ನ ಆಟೋದ ಹಿಂಬದಿಯಲ್ಲಿ ಬರೆದ ಸಾಲುಗಳಲ್ಲಿ ಶಕುನಿಗಳನ್ನು ನೆನಪಿಸಿಕೊಂಡಿದ್ದಾನೆ. ನನಗೆ ಯಾರು ಶತ್ರುಗಳು ಇಲ್ಲ, ಇರೋದೆಲ್ಲ ಶಕುನಿಗಳೆ ಎಂದು ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ.

ಆರ್‌/ ಬೆಂಗಳೂರು (r/Bengaluru) ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಆಟೋ ಹಿಂಬದಿ ಬರೆದ ಬರಹವನ್ನು ಹಂಚಿಕೊಳ್ಳಲಾಗಿದೆ. ಈ ಆಟೋದ ಹಿಂಬದಿ, ‘ನನಗೆ ಯಾರು ಶತ್ರುಗಳು ಇಲ್ಲ, ಇರೋರೆಲ್ಲಾ ಶಕುನಿಗಳೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ಪೋಸ್ಟ್ ಇಲ್ಲಿದೆ

Reddit Post

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಓಡಿಸಿ ತಿಂಗಳಿಗೆ 45 ಸಾವಿರ ರೂ ಸಂಪಾದಿಸುವ ಮಹಿಳೆ

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಎಂತಹ ಅದ್ಭುತ ಮಾತು ಎಂದಿದ್ದಾರೆ. ಮತ್ತೊಬ್ಬರು ವಾವ್ ಅದ್ಭುತ ಬ್ರದರ್ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಸತ್ಯವಾದ ಮಾತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Tue, 3 February 26

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!