Overnight Millionaire : ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ತಾಯಿಯನ್ನು ಕಳೆದುಕೊಂಡಿದ್ದ 10 ವರ್ಷದ ಪುಟ್ಟ ಪೋರ. ತನ್ನ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ.

Overnight Millionaire : ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ
ಬಾಲಕ ಷಹಜೇಬ್‌Image Credit source: IANS
Follow us
| Updated By: ಅಕ್ಷತಾ ವರ್ಕಾಡಿ

Updated on:Dec 17, 2022 | 12:46 PM

ಕೋವಿಡ್ 19(Covid-19) ಸಾಂಕ್ರಾಮಿಕ ರೋಗದಿಂದ ತಾಯಿಯನ್ನು ಕಳೆದುಕೊಂಡಿದ್ದ 10 ವರ್ಷದ ಪುಟ್ಟ ಪೋರ. ತನ್ನ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ. ಆದರೆ ಒಂದೇ ರಾತ್ರಿಯಲ್ಲಿ ಕೋಟಿ ಮೌಲ್ಯದ ಆಸ್ತಿಗೆ ಅಧಿಪತಿಯಾಗಿದ್ದಾನೆ. ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಇತನ ಹೆಸರು ಷಹಜೇಬ್‌. ಇತನ ತಾಯಿ ಇಮ್ರಾನಾ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಪಾಂಡೋಲಿ ಗ್ರಾಮದಲ್ಲಿ ವಾಸಿಸುತ್ತಿದ್ದರು. 2009ರಲ್ಲಿ ತನ್ನ ಗಂಡನ ಮರಣದ ನಂತರ ತನ್ನ ಅತ್ತೆ ಮನೆಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ನಂತರ ತನ್ನ ಮಗ ಷಹಜೇಬ್‌ನೊಂದಿಗೆ ತನ್ನ ತವರು ಮನೆಗೆ ಹೋಗಿದ್ದಳು. ಬಳಿಕ ತನ್ನ ಮಗನೊಂದಿಗೆ ಕಾಲಿಯಾರ್ ನಲ್ಲಿ ವಾಸಿಸುತ್ತಿದ್ದರು.

2019 ರ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತಾಯಿ ಮೃತ ಪಟ್ಟ ಕಾರಣ ಈ ಪುಟ್ಟ ಅನಾಥನಾಗಿದ್ದಾನೆ. ಆದ್ದರಿಂದ ಹೊಟ್ಟೆ ಹಸಿವಿಗೆ ಕಲಿಯಾರ್ ಬೀದಿಯಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ. ಆದರೆ ಈ ಮಗುವಿನ ಜೀವನದ ಹಾದಿಯೇ ಬದಲಾದ ಘಟನೆ ನಡೆದಿದೆ. ಒಂದು ಹೊತ್ತಿನ ಊಟಕ್ಕಾಗಿ ಪೇಚಾಡುತ್ತಿದ್ದ ಈತನ ಬಾಳಲ್ಲಿ ಈತನ ತಾತ ಬೆಳಕಾಗಿ ಬಂದಿದ್ದಾರೆ. ಹೌದು ಅವನ ಅಜ್ಜ ಸಾಯುವ ಮೊದಲು ತನ್ನ ಅರ್ಧದಷ್ಟು ಆಸ್ತಿಯನ್ನು ಈತನ ಹೆಸರಿಗೆ ಬರೆದಿಟ್ಟಿದ್ದಾರೆ.

ಇದನ್ನು ಓದಿ: ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!

ಈ ವಿಷಯ ತಿಳಿಯುತ್ತಿದ್ದಂತೆ ಆತನ ಸಂಬಂಧಿಗಳು ಆತನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹುಡುಕಿಕೊಟ್ಟವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಕಲಿಯಾರ್ ಬೀದಿಯಲ್ಲಿ ತಿರುಗಾಡುತ್ತಿರುವುದನ್ನು ಮೋಬಿನ್ ಎಂಬ ವ್ಯಕ್ತಿಯು ಗಮನಿಸಿದ್ದು ಅವರ ಸಂಬಂಧಿಕರಿಗೆ ಮಾಹಿತಿ ನೀಡಿ, ಗುರುವಾರ ಸಹರಾನ್‌ಪುರದ ಸಂಬಂಧಿಕರ ಬಳಿ ಬಿಟ್ಟು ಬಂದಿದ್ದಾರೆ. ಇದೀಗಾ ಈ ಘಟನೆ ಸಾಕಷ್ಟು ಸುದ್ದಿಯಾಗಿದೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:

Published On - 11:10 am, Sat, 17 December 22

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್