Sign In

By signing in or creating an account, you agree with Associated Broadcasting Company's Terms & Conditions and Privacy Policy.

Overnight Millionaire : ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ತಾಯಿಯನ್ನು ಕಳೆದುಕೊಂಡಿದ್ದ 10 ವರ್ಷದ ಪುಟ್ಟ ಪೋರ. ತನ್ನ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ.

Overnight Millionaire : ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ
ಬಾಲಕ ಷಹಜೇಬ್‌Image Credit source: IANS
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Dec 17, 2022 | 12:46 PM

ಕೋವಿಡ್ 19(Covid-19) ಸಾಂಕ್ರಾಮಿಕ ರೋಗದಿಂದ ತಾಯಿಯನ್ನು ಕಳೆದುಕೊಂಡಿದ್ದ 10 ವರ್ಷದ ಪುಟ್ಟ ಪೋರ. ತನ್ನ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ. ಆದರೆ ಒಂದೇ ರಾತ್ರಿಯಲ್ಲಿ ಕೋಟಿ ಮೌಲ್ಯದ ಆಸ್ತಿಗೆ ಅಧಿಪತಿಯಾಗಿದ್ದಾನೆ. ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಇತನ ಹೆಸರು ಷಹಜೇಬ್‌. ಇತನ ತಾಯಿ ಇಮ್ರಾನಾ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಪಾಂಡೋಲಿ ಗ್ರಾಮದಲ್ಲಿ ವಾಸಿಸುತ್ತಿದ್ದರು. 2009ರಲ್ಲಿ ತನ್ನ ಗಂಡನ ಮರಣದ ನಂತರ ತನ್ನ ಅತ್ತೆ ಮನೆಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ನಂತರ ತನ್ನ ಮಗ ಷಹಜೇಬ್‌ನೊಂದಿಗೆ ತನ್ನ ತವರು ಮನೆಗೆ ಹೋಗಿದ್ದಳು. ಬಳಿಕ ತನ್ನ ಮಗನೊಂದಿಗೆ ಕಾಲಿಯಾರ್ ನಲ್ಲಿ ವಾಸಿಸುತ್ತಿದ್ದರು.

2019 ರ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತಾಯಿ ಮೃತ ಪಟ್ಟ ಕಾರಣ ಈ ಪುಟ್ಟ ಅನಾಥನಾಗಿದ್ದಾನೆ. ಆದ್ದರಿಂದ ಹೊಟ್ಟೆ ಹಸಿವಿಗೆ ಕಲಿಯಾರ್ ಬೀದಿಯಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ. ಆದರೆ ಈ ಮಗುವಿನ ಜೀವನದ ಹಾದಿಯೇ ಬದಲಾದ ಘಟನೆ ನಡೆದಿದೆ. ಒಂದು ಹೊತ್ತಿನ ಊಟಕ್ಕಾಗಿ ಪೇಚಾಡುತ್ತಿದ್ದ ಈತನ ಬಾಳಲ್ಲಿ ಈತನ ತಾತ ಬೆಳಕಾಗಿ ಬಂದಿದ್ದಾರೆ. ಹೌದು ಅವನ ಅಜ್ಜ ಸಾಯುವ ಮೊದಲು ತನ್ನ ಅರ್ಧದಷ್ಟು ಆಸ್ತಿಯನ್ನು ಈತನ ಹೆಸರಿಗೆ ಬರೆದಿಟ್ಟಿದ್ದಾರೆ.

ಇದನ್ನು ಓದಿ: ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!

ಈ ವಿಷಯ ತಿಳಿಯುತ್ತಿದ್ದಂತೆ ಆತನ ಸಂಬಂಧಿಗಳು ಆತನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹುಡುಕಿಕೊಟ್ಟವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಕಲಿಯಾರ್ ಬೀದಿಯಲ್ಲಿ ತಿರುಗಾಡುತ್ತಿರುವುದನ್ನು ಮೋಬಿನ್ ಎಂಬ ವ್ಯಕ್ತಿಯು ಗಮನಿಸಿದ್ದು ಅವರ ಸಂಬಂಧಿಕರಿಗೆ ಮಾಹಿತಿ ನೀಡಿ, ಗುರುವಾರ ಸಹರಾನ್‌ಪುರದ ಸಂಬಂಧಿಕರ ಬಳಿ ಬಿಟ್ಟು ಬಂದಿದ್ದಾರೆ. ಇದೀಗಾ ಈ ಘಟನೆ ಸಾಕಷ್ಟು ಸುದ್ದಿಯಾಗಿದೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:

Published On - 11:10 am, Sat, 17 December 22

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ