AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Overnight Millionaire : ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ತಾಯಿಯನ್ನು ಕಳೆದುಕೊಂಡಿದ್ದ 10 ವರ್ಷದ ಪುಟ್ಟ ಪೋರ. ತನ್ನ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ.

Overnight Millionaire : ಭಿಕ್ಷೆ ಬೇಡುತ್ತಿದ್ದ ಪುಟ್ಟ ಹುಡುಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ
ಬಾಲಕ ಷಹಜೇಬ್‌Image Credit source: IANS
TV9 Web
| Edited By: |

Updated on:Dec 17, 2022 | 12:46 PM

Share

ಕೋವಿಡ್ 19(Covid-19) ಸಾಂಕ್ರಾಮಿಕ ರೋಗದಿಂದ ತಾಯಿಯನ್ನು ಕಳೆದುಕೊಂಡಿದ್ದ 10 ವರ್ಷದ ಪುಟ್ಟ ಪೋರ. ತನ್ನ ಒಂದು ಹೊತ್ತಿನ ಊಟಕ್ಕಾಗಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ. ಆದರೆ ಒಂದೇ ರಾತ್ರಿಯಲ್ಲಿ ಕೋಟಿ ಮೌಲ್ಯದ ಆಸ್ತಿಗೆ ಅಧಿಪತಿಯಾಗಿದ್ದಾನೆ. ಈ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಇತನ ಹೆಸರು ಷಹಜೇಬ್‌. ಇತನ ತಾಯಿ ಇಮ್ರಾನಾ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಪಾಂಡೋಲಿ ಗ್ರಾಮದಲ್ಲಿ ವಾಸಿಸುತ್ತಿದ್ದರು. 2009ರಲ್ಲಿ ತನ್ನ ಗಂಡನ ಮರಣದ ನಂತರ ತನ್ನ ಅತ್ತೆ ಮನೆಯಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ನಂತರ ತನ್ನ ಮಗ ಷಹಜೇಬ್‌ನೊಂದಿಗೆ ತನ್ನ ತವರು ಮನೆಗೆ ಹೋಗಿದ್ದಳು. ಬಳಿಕ ತನ್ನ ಮಗನೊಂದಿಗೆ ಕಾಲಿಯಾರ್ ನಲ್ಲಿ ವಾಸಿಸುತ್ತಿದ್ದರು.

2019 ರ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ತಾಯಿ ಮೃತ ಪಟ್ಟ ಕಾರಣ ಈ ಪುಟ್ಟ ಅನಾಥನಾಗಿದ್ದಾನೆ. ಆದ್ದರಿಂದ ಹೊಟ್ಟೆ ಹಸಿವಿಗೆ ಕಲಿಯಾರ್ ಬೀದಿಯಲ್ಲಿ ಭಿಕ್ಷಾಟಣೆಯಲ್ಲಿ ತೊಡಗಿಸಿಕೊಂಡಿದ್ದ. ಆದರೆ ಈ ಮಗುವಿನ ಜೀವನದ ಹಾದಿಯೇ ಬದಲಾದ ಘಟನೆ ನಡೆದಿದೆ. ಒಂದು ಹೊತ್ತಿನ ಊಟಕ್ಕಾಗಿ ಪೇಚಾಡುತ್ತಿದ್ದ ಈತನ ಬಾಳಲ್ಲಿ ಈತನ ತಾತ ಬೆಳಕಾಗಿ ಬಂದಿದ್ದಾರೆ. ಹೌದು ಅವನ ಅಜ್ಜ ಸಾಯುವ ಮೊದಲು ತನ್ನ ಅರ್ಧದಷ್ಟು ಆಸ್ತಿಯನ್ನು ಈತನ ಹೆಸರಿಗೆ ಬರೆದಿಟ್ಟಿದ್ದಾರೆ.

ಇದನ್ನು ಓದಿ: ಚಲಿಸುತ್ತಿದ್ದ ಟ್ರಕ್ಕೊಂದರಿಂದ ನೇತಾಡುತ್ತಿದ್ದ ಹಗ್ಗ ಬೈಕ್ ಸವಾರನ ಕುತ್ತಿಗೆಗೆ ಸುತ್ತಿಕೊಂಡು ನೆಲಕ್ಕೆ ಬೀಳಿಸಿದರೂ ಸವಾರ ಅಪಾಯದಿಂದ ಪಾರು!

ಈ ವಿಷಯ ತಿಳಿಯುತ್ತಿದ್ದಂತೆ ಆತನ ಸಂಬಂಧಿಗಳು ಆತನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಜೊತೆಗೆ ಹುಡುಕಿಕೊಟ್ಟವರಿಗೆ ಬಹುಮಾನವನ್ನು ಘೋಷಿಸಿದ್ದಾರೆ. ಕಲಿಯಾರ್ ಬೀದಿಯಲ್ಲಿ ತಿರುಗಾಡುತ್ತಿರುವುದನ್ನು ಮೋಬಿನ್ ಎಂಬ ವ್ಯಕ್ತಿಯು ಗಮನಿಸಿದ್ದು ಅವರ ಸಂಬಂಧಿಕರಿಗೆ ಮಾಹಿತಿ ನೀಡಿ, ಗುರುವಾರ ಸಹರಾನ್‌ಪುರದ ಸಂಬಂಧಿಕರ ಬಳಿ ಬಿಟ್ಟು ಬಂದಿದ್ದಾರೆ. ಇದೀಗಾ ಈ ಘಟನೆ ಸಾಕಷ್ಟು ಸುದ್ದಿಯಾಗಿದೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:

Published On - 11:10 am, Sat, 17 December 22

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ