AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೈವರ್​​ ಇಲ್ಲದೇ ಕಾರು ಓಡಿಸಬಹುದು, ಮಹೀಂದ್ರಾ XUV700 ನ ವೀಡಿಯೊ ವೈರಲ್

ಮಹೀಂದ್ರಾ XUV700, "Autopilot mode" ಅಂದರೆ ಡೈವರ್​​ ಇಲ್ಲದೇ ಗಾಡಿ ಚಲಾಯಿಸುವ ಹೊಸ ಫೀಚರ್​​​​ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ಇದೀಗಾಗಲೇ ಇನ್ಸ್ಟಾಗ್ರಾಮ್​​​ನಲ್ಲಿ 5 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.

ಡೈವರ್​​ ಇಲ್ಲದೇ ಕಾರು ಓಡಿಸಬಹುದು, ಮಹೀಂದ್ರಾ XUV700 ನ  ವೀಡಿಯೊ ವೈರಲ್
ಮಹೀಂದ್ರಾ XUV700Image Credit source: Instagram
Follow us
ಅಕ್ಷತಾ ವರ್ಕಾಡಿ
|

Updated on:Mar 16, 2023 | 3:32 PM

ಮಹೀಂದ್ರಾ XUV700, “Autopilot mode” ಅಂದರೆ ಡೈವರ್​​ ಇಲ್ಲದೇ ಗಾಡಿ ಚಲಾಯಿಸುವ ಹೊಸ ಫೀಚರ್​​​​ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಡಿಯೋ ಇದೀಗಾಗಲೇ ಇನ್ಸ್ಟಾಗ್ರಾಮ್​​​ನಲ್ಲಿ 5 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ವಿಡಿಯೋದಲ್ಲಿ ಮಹೀಂದ್ರಾ XUV700 ಕಾರಿನಲ್ಲಿ ಚಾಲಕನ ಸೀಟನ್ನು ಖಾಲಿ ಬಿಟ್ಟಿದ್ದು, ಪಕ್ಕದ ಸೀಟಿನಲ್ಲಿ ಪ್ರಯಾಣಿಕ ಆರಾಮವಾಗಿ ವಿಶ್ರಾಂತಿಸುತ್ತಿರುವುದನ್ನು ಕಾಣಬಹುದು. ಇದು ವಿಡಿಯೋ ಸಾಕಷ್ಟು ವೈರಲ್​​ ಆಗುತ್ತಿದ್ದಂತೆ, ಸಾಕಷ್ಟು ಟೀಕೆಗೆ ಕಾರಣವಾಗಿದೆ. ಕಾರನ್ನು ಯಾರು ಚಲಾಯಿಸುತ್ತಿದ್ದಾರೆ, ದೆವ್ವದ ಕಾಟವೋ? ಎಂದು ಬಳಕೆದಾರೊಬ್ಬರು ಕಾಮೆಂಟ್​​ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

View this post on Instagram

A post shared by Suraj Surwase (@thar__2332)

ತಿರುವಿನ ಹೆದ್ದಾರಿಯಲ್ಲೂ ಯಾವುದೇ ವ್ಯಕ್ತಿಯ ಸಹಾಯವಿಲ್ಲದೇ Autopilot modenನಲ್ಲಿ ಕಾರು ಚಲಿಸುವುದನ್ನು ಕಾಣಬಹುದು. ADAS(Advanced Driver Assistance System) ತಂತ್ರಜ್ಞಾನವನ್ನು ಬಳಸಲಾಗಿದೆ. ಈ ವಿಡಿಯೋ ಪ್ರಶಂಸೆಯನ್ನು ಪಡೆಯುವುದಕ್ಕಿಂತ ಸಾಕಷ್ಟು ಟೀಕೆಗೆ ಕಾರಣವಾಗಿದೆ.  ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಕಾರಿನ ಶೋರೂಮ್​ನಿಂದ ಬಿಳಿ ಬಣ್ಣದ ಮಹೀಂದ್ರಾ XUV700 ಹೊರ ಬರುವುದನ್ನು ಕಾಣಬಹುದು. ಡೈವರ್​​ ಸೀಟ್​​ ಖಾಲಿಯಾಗಿದ್ದು, ತಿರುವಿನ ಹೆದ್ದಾರಿಯಲ್ಲಿ 90 kmph ವೇಗದಲ್ಲಿ ಕಾರು ಚಲಿಸುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು

ಜೊತೆಗೆ ವಿಡಿಯೋದಲ್ಲಿ “ಆಟೋಪೈಲಟ್ ಮೋಡ್” ಎಂದು ಕ್ಯಾಪ್ಷನ್​​ ಬರೆದಿರುವುದನ್ನು ಕಾಣಬಹುದು. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ 5 ಮಿಲಿಯನ್​​​ಗಿಂತಲೂ ಹೆಚ್ಚಿನ ವೀಕ್ಷಣೆ ಗಳಿಸಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು, “ಇಂತಹ ವೀಡಿಯೊಗಳು ಮಾರಣಾಂತಿಕ ಅಪಘಾತಕ್ಕೆ ಕಾರಣವಾಗುತ್ತವೆ” ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬ ಬಳಕೆದಾರ, ” ನೀವು ಸಂಪೂರ್ಣವಾಗಿ ಅದರ ಮೇಲೆ ಅವಲಂಬಿತರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಈ ಕಾರನ್ನು ಯಾರು ಓಡಿಸುತ್ತಿದ್ದಾರೆ? ದೆವ್ವ ಇದೆಯೇ? ಎಂದು ಹಾಸ್ಯಸ್ಪದ ಕಾಮೆಂಟ್​​ ಕೂಡ ಕಾಣಬಹುದು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:08 am, Thu, 16 March 23

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ