AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​

ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​
ಆಡಿ ಕಾರಿನಲ್ಲಿ ಟೀ ಸ್ಟಾಲ್Image Credit source: Instagram
ಅಕ್ಷತಾ ವರ್ಕಾಡಿ
|

Updated on:Apr 09, 2023 | 12:09 PM

Share

ಐಷಾರಾಮಿ ಕಾರುಗಳಲ್ಲಿ ಮುಂಚೂಣಿಯಲ್ಲಿರುವ ಆಡಿ ಕಾರು(Audi Car)  ಖರೀದಿಸುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಜೊತೆಗೆ ಆಡಿ ಕಾರು ಎಂದಾಕ್ಷಣ ನೆನಪಾಗುವುದೇ ಐಷಾರಾಮಿ ಜೀವನ. ಆದ್ರೆ ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಾರದ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್​ ಮಾಡಲಾದ ಈ ವಿಡಿಯೋ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋವನ್ನು ಆಶಿಶ್ತ್ರಿವೇದಿ 24 ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್​​ ಮಾಡಲಾಗಿದೆ. ಈ ವಿಡಿಯೋದಲ್ಲಿ ರಸ್ತೆಯ ಬದಿಯಲ್ಲಿ ಆಡಿ ಕಾರು ನಿಲ್ಲಿಸಲಾಗಿದೆ. ಕಾರಿನ ಡಿಕ್ಕಿಯನ್ನು ತೆರೆದು ಚಿಕ್ಕ ಸ್ಟಾಲ್​​ ರೀತಿಯಲ್ಲಿ ಟೀ ಮಾರುತ್ತಿರುವುದನ್ನು ಕಾಣಬಹುದು. ಕ್ಯಾಮರಾದಲ್ಲಿ ಸೆರೆಯಾಗಿರುವ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಕಾಮೆಂಟ್​​ ಮೂಲಕ ಚರ್ಚೆಗಿಳಿದ್ದಿದ್ದಾರೆ.

ಕಾರಿನ ಮಾಲೀಕರು ತಮ್ಮ ಹೊಸ ಮಾರ್ಕೆಟಿಂಗ್ ತಂತ್ರದ ಭಾಗವಾಗಿ ಆಡಿ ಕಾರನ್ನು ಬಳಸುತ್ತಿದ್ದಾರೆ ಎಂದು ಬಳಕೆದಾರರೊಬ್ಬರು ಕಾಮೆಂಟ್​​ ಮಾಡಿದರೆ, ಮತ್ತೊಬ್ಬರು ಆಡಿ ಕಾರಿನ ಮಾಲೀಕರಿಗೇಕೆ ಟೀ ಮಾರುವ ದುಸ್ಥಿತಿ ಬಂತು ಎಂದು ಬರೆದುಕೊಂಡಿದ್ದಾರೆ. ಐಷಾರಾಮಿ ಕಾರುಗಳಿಂದ ಚಹಾವನ್ನು ಮಾರಾಟ ಮಾಡುವುದು ವ್ಯಾಪಾರ ಮಾಲೀಕರ ವಿಶಿಷ್ಟ ಮಾರ್ಕೆಟಿಂಗ್ ತಂತ್ರವಾಗಿದೆ ಎಂದು ಮತ್ತೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ, ವ್ಯವಹಾರಕ್ಕೆ ಹೆಸರನ್ನು ನೀಡಿ ಅದನ್ನು ‘ಆಡಿ ಚಾಯ್‌ವಾಲಾ’ ಎಂದು ಕರೆದಿದ್ದಾರೆ. ಅನೇಕ ಬಳಕೆದಾರರು ವೀಡಿಯೊವನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿ ಆಡಿ ಖರೀದಿಸಿ ಈಗ ಕಾರಿನ ಮೇಲೆ ಇಎಂಐ ಪಾವತಿಸಲು ಮಾರಾಟ ಮಾಡುತ್ತಿದ್ದಾನೆ ಎಂದು ಕೆಲವು ಬಳಕೆದಾರರು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:09 pm, Sun, 9 April 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ