Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​

ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​
ಆಡಿ ಕಾರಿನಲ್ಲಿ ಟೀ ಸ್ಟಾಲ್Image Credit source: Instagram
Follow us
|

Updated on:Apr 09, 2023 | 12:09 PM

ಐಷಾರಾಮಿ ಕಾರುಗಳಲ್ಲಿ ಮುಂಚೂಣಿಯಲ್ಲಿರುವ ಆಡಿ ಕಾರು(Audi Car)  ಖರೀದಿಸುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಜೊತೆಗೆ ಆಡಿ ಕಾರು ಎಂದಾಕ್ಷಣ ನೆನಪಾಗುವುದೇ ಐಷಾರಾಮಿ ಜೀವನ. ಆದ್ರೆ ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಾರದ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್​ ಮಾಡಲಾದ ಈ ವಿಡಿಯೋ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋವನ್ನು ಆಶಿಶ್ತ್ರಿವೇದಿ 24 ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್​​ ಮಾಡಲಾಗಿದೆ. ಈ ವಿಡಿಯೋದಲ್ಲಿ ರಸ್ತೆಯ ಬದಿಯಲ್ಲಿ ಆಡಿ ಕಾರು ನಿಲ್ಲಿಸಲಾಗಿದೆ. ಕಾರಿನ ಡಿಕ್ಕಿಯನ್ನು ತೆರೆದು ಚಿಕ್ಕ ಸ್ಟಾಲ್​​ ರೀತಿಯಲ್ಲಿ ಟೀ ಮಾರುತ್ತಿರುವುದನ್ನು ಕಾಣಬಹುದು. ಕ್ಯಾಮರಾದಲ್ಲಿ ಸೆರೆಯಾಗಿರುವ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಕಾಮೆಂಟ್​​ ಮೂಲಕ ಚರ್ಚೆಗಿಳಿದ್ದಿದ್ದಾರೆ.

ಕಾರಿನ ಮಾಲೀಕರು ತಮ್ಮ ಹೊಸ ಮಾರ್ಕೆಟಿಂಗ್ ತಂತ್ರದ ಭಾಗವಾಗಿ ಆಡಿ ಕಾರನ್ನು ಬಳಸುತ್ತಿದ್ದಾರೆ ಎಂದು ಬಳಕೆದಾರರೊಬ್ಬರು ಕಾಮೆಂಟ್​​ ಮಾಡಿದರೆ, ಮತ್ತೊಬ್ಬರು ಆಡಿ ಕಾರಿನ ಮಾಲೀಕರಿಗೇಕೆ ಟೀ ಮಾರುವ ದುಸ್ಥಿತಿ ಬಂತು ಎಂದು ಬರೆದುಕೊಂಡಿದ್ದಾರೆ. ಐಷಾರಾಮಿ ಕಾರುಗಳಿಂದ ಚಹಾವನ್ನು ಮಾರಾಟ ಮಾಡುವುದು ವ್ಯಾಪಾರ ಮಾಲೀಕರ ವಿಶಿಷ್ಟ ಮಾರ್ಕೆಟಿಂಗ್ ತಂತ್ರವಾಗಿದೆ ಎಂದು ಮತ್ತೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ, ವ್ಯವಹಾರಕ್ಕೆ ಹೆಸರನ್ನು ನೀಡಿ ಅದನ್ನು ‘ಆಡಿ ಚಾಯ್‌ವಾಲಾ’ ಎಂದು ಕರೆದಿದ್ದಾರೆ. ಅನೇಕ ಬಳಕೆದಾರರು ವೀಡಿಯೊವನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿ ಆಡಿ ಖರೀದಿಸಿ ಈಗ ಕಾರಿನ ಮೇಲೆ ಇಎಂಐ ಪಾವತಿಸಲು ಮಾರಾಟ ಮಾಡುತ್ತಿದ್ದಾನೆ ಎಂದು ಕೆಲವು ಬಳಕೆದಾರರು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:09 pm, Sun, 9 April 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ