AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​

ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

Audi Chaiwala: ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿ; ವಿಡಿಯೋ ವೈರಲ್​​
ಆಡಿ ಕಾರಿನಲ್ಲಿ ಟೀ ಸ್ಟಾಲ್Image Credit source: Instagram
ಅಕ್ಷತಾ ವರ್ಕಾಡಿ
|

Updated on:Apr 09, 2023 | 12:09 PM

Share

ಐಷಾರಾಮಿ ಕಾರುಗಳಲ್ಲಿ ಮುಂಚೂಣಿಯಲ್ಲಿರುವ ಆಡಿ ಕಾರು(Audi Car)  ಖರೀದಿಸುವುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಜೊತೆಗೆ ಆಡಿ ಕಾರು ಎಂದಾಕ್ಷಣ ನೆನಪಾಗುವುದೇ ಐಷಾರಾಮಿ ಜೀವನ. ಆದ್ರೆ ಇಲ್ಲೊಬ್ಬ ಆಡಿ ಕಾರನ್ನು ಬೀದಿ ಬದಿಯಲ್ಲಿ ಟೀ ಅಂಗಡಿಯನ್ನಾಗಿ ಮಾಡಿದ್ದಾನೆ. ಹೌದು ಆಡಿ ಕಾರಿನಲ್ಲಿ ಟೀ ಮಾರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಾರದ ಹಿಂದೆಯಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್​ ಮಾಡಲಾದ ಈ ವಿಡಿಯೋ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ.

ವಿಡಿಯೋವನ್ನು ಆಶಿಶ್ತ್ರಿವೇದಿ 24 ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್​​ ಮಾಡಲಾಗಿದೆ. ಈ ವಿಡಿಯೋದಲ್ಲಿ ರಸ್ತೆಯ ಬದಿಯಲ್ಲಿ ಆಡಿ ಕಾರು ನಿಲ್ಲಿಸಲಾಗಿದೆ. ಕಾರಿನ ಡಿಕ್ಕಿಯನ್ನು ತೆರೆದು ಚಿಕ್ಕ ಸ್ಟಾಲ್​​ ರೀತಿಯಲ್ಲಿ ಟೀ ಮಾರುತ್ತಿರುವುದನ್ನು ಕಾಣಬಹುದು. ಕ್ಯಾಮರಾದಲ್ಲಿ ಸೆರೆಯಾಗಿರುವ ಈ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸಾಕಷ್ಟು ಬಳಕೆದಾರರು ಕಾಮೆಂಟ್​​ ಮೂಲಕ ಚರ್ಚೆಗಿಳಿದ್ದಿದ್ದಾರೆ.

ಕಾರಿನ ಮಾಲೀಕರು ತಮ್ಮ ಹೊಸ ಮಾರ್ಕೆಟಿಂಗ್ ತಂತ್ರದ ಭಾಗವಾಗಿ ಆಡಿ ಕಾರನ್ನು ಬಳಸುತ್ತಿದ್ದಾರೆ ಎಂದು ಬಳಕೆದಾರರೊಬ್ಬರು ಕಾಮೆಂಟ್​​ ಮಾಡಿದರೆ, ಮತ್ತೊಬ್ಬರು ಆಡಿ ಕಾರಿನ ಮಾಲೀಕರಿಗೇಕೆ ಟೀ ಮಾರುವ ದುಸ್ಥಿತಿ ಬಂತು ಎಂದು ಬರೆದುಕೊಂಡಿದ್ದಾರೆ. ಐಷಾರಾಮಿ ಕಾರುಗಳಿಂದ ಚಹಾವನ್ನು ಮಾರಾಟ ಮಾಡುವುದು ವ್ಯಾಪಾರ ಮಾಲೀಕರ ವಿಶಿಷ್ಟ ಮಾರ್ಕೆಟಿಂಗ್ ತಂತ್ರವಾಗಿದೆ ಎಂದು ಮತ್ತೊಬ್ಬರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಇದು ಬೈಕಾ ಅಥವಾ ದೋಣಿಯೋ, ನದಿಯಲ್ಲಿ ಬೈಕ್​ ರೈಡ್​​​ ಮಾಡಿದ ವ್ಯಕ್ತಿ

ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ಒಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ, ವ್ಯವಹಾರಕ್ಕೆ ಹೆಸರನ್ನು ನೀಡಿ ಅದನ್ನು ‘ಆಡಿ ಚಾಯ್‌ವಾಲಾ’ ಎಂದು ಕರೆದಿದ್ದಾರೆ. ಅನೇಕ ಬಳಕೆದಾರರು ವೀಡಿಯೊವನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಆ ವ್ಯಕ್ತಿ ಆಡಿ ಖರೀದಿಸಿ ಈಗ ಕಾರಿನ ಮೇಲೆ ಇಎಂಐ ಪಾವತಿಸಲು ಮಾರಾಟ ಮಾಡುತ್ತಿದ್ದಾನೆ ಎಂದು ಕೆಲವು ಬಳಕೆದಾರರು ಹೇಳಿದ್ದಾರೆ.

ಮತ್ತಷ್ಟು ವೈರಲ್​​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:09 pm, Sun, 9 April 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!