AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ದಿನನಿತ್ಯ ಪವರ್ ಕಟ್, ಸಿಟ್ಟಿಗೆದ್ದ ವ್ಯಕ್ತಿ ಮಸಾಲಾ ರುಬ್ಬಲು ಹೋಗುತ್ತಿರುವುದು ಎಲ್ಲಿ ಗೊತ್ತಾ?

ಪವರ್ ಕಟ್​ನಿಂದ ಕಂಗೆಟ್ಟ ವ್ಯಕ್ತಿಯೊಬ್ಬರು ಮಸಾಲಾ ರುಬ್ಬಲು ಮತ್ತು ಮೊಬೈಲ್ ಚಾರ್ಜ್ ಮಾಡಲು ಪ್ರತಿದಿನ ವಿದ್ಯುತ್ ಕಚೇರಿಗೆ ಹೋಗುತ್ತಾರೆ. ಶಿವಮೊಗ್ಗದ ಹನುಮಂತಪ್ಪ ಈ ರೀತಿಯಾಗಿ ಕಳೆದ 10 ತಿಂಗಳಿನಿಂದ ಮಾಡಲುತ್ತಲೆ ಬಂದಿದ್ದಾರೆ.

Trending: ದಿನನಿತ್ಯ ಪವರ್ ಕಟ್, ಸಿಟ್ಟಿಗೆದ್ದ ವ್ಯಕ್ತಿ ಮಸಾಲಾ ರುಬ್ಬಲು ಹೋಗುತ್ತಿರುವುದು ಎಲ್ಲಿ ಗೊತ್ತಾ?
ಎಂ.ಹನುಮಂತಪ್ಪ
TV9 Web
| Edited By: |

Updated on:Jun 06, 2022 | 10:41 PM

Share

ನಮ್ಮ ದೇಶದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ವಿದ್ಯುತ್ ಕಡಿತವು ಬಹಳ ಸಾಮಾನ್ಯವಾಗಿದೆ. ಇದರಿಂದಾಗಿ ಹಳ್ಳಿಗಳಲ್ಲಿ ಹಾಗೂ ಸಣ್ಣಪುಟ್ಟ ಪಟ್ಟಣಗಳಲ್ಲಿ ತೊಂದರೆಗಳಾಗುತ್ತವೆ. ಜನರ ನಿತ್ಯದ ಕೆಲಸಗಳು ನಿಂತುಹೋಗುತ್ತವೆ. ಇದಕ್ಕೆ ಪುಷ್ಠಿ ನೀಡುವಂತೆ ದೀರ್ಘಾವಧಿಯ ಪವರ್ ಕಟ್‌ನಿಂದ ಸಿಟ್ಟಿಗೆದ್ದ ವ್ಯಕ್ತಿಯೊಬ್ಬರು ಮಸಾಲಾ ರುಬ್ಬಲು ಮತ್ತು ಮೊಬೈಲ್ ಚಾರ್ಜ್ ಮಾಡಲು ಪ್ರತಿದಿನ ವಿದ್ಯುತ್ ಕಚೇರಿಗೆ ಹೋಗುತ್ತಾರೆ.

ಇದನ್ನೂ ಓದಿ: Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ನಿತ್ಯವು ಆಗುತ್ತಿದ್ದ ಪವರ್​ಕಟ್​ನಿಂದಾಗಿ ಸಿಟ್ಟಿಗೆದ್ದ ನಿವಾಸಿ ಎಂ.ಹನುಮಂತಪ್ಪ ಅವರು ವಿಶೇಷ ಪರಿಹಾರವೊಂದನ್ನು ಕಂಡುಕೊಂಡಿದ್ದಾರೆ. ನಿತ್ಯವೂ ಹತ್ತಿರದ ವಿದ್ಯುತ್ ಕಚೇರಿಗೆ ಹೋಗಿ ಮಸಾಲಾ ರುಬ್ಬುವುದು ಹಾಗೂ ತನ್ನ ಮೊಬೈಲ್ ಚಾರ್ಚ್​ ಮಾಡುತ್ತಿದ್ದಾರೆ. ಗಮನಿಸಬೇಕಾದ ವಿಷಯವೆಂದರೆ, ಹನುಮಂತಪ್ಪ ಅವರು ಈ ರೀತಿಯಾಗಿ ಕಳೆದ 10 ತಿಂಗಳಿನಿಂದ ಮಾಡಲುತ್ತಲೆ ಬಂದಿದ್ದಾರೆ.

ನ್ಯೂಸ್ 18 ವರದಿ ಪ್ರಕಾರ, ಹನುಮಂತಪ್ಪ ಅವರ ಕುಟುಂಬವು ದಿನಕ್ಕೆ ಕೇವಲ 3-4 ಗಂಟೆಗಳ ಕಾಲ ಮಾತ್ರ ವಿದ್ಯುತ್ ಪೂರೈಕೆಯನ್ನು ಪಡೆಯುತ್ತದೆ. ನೊಂದ ಹನುಮಂತಪ್ಪ ತನ್ನ ಮನೆಗೆ ಸರಿಯಾಗಿ ವಿದ್ಯುತ್ ಇಲ್ಲ ಎಂದು ಅನೇಕ ಬಾರಿ ದೂರು ಸಲ್ಲಿಸಿದ್ದಾರೆ. ಆದರೂ ಸಮಸ್ಯೆ ಬಗೆಹರಿದಿಲ್ಲ. ಇದೇ ವಿಚಾರವಾಗಿ ತೀವ್ರ ವಾಗ್ವಾದ ಕೂಡ ನಡೆದಿದೆ. ಈ ವೇಳೆ ಅಧಿಕಾರಿಯೊಬ್ಬರು ಹೇಳಿದಂತೆ ನಿತ್ಯವೂ ಮೊಬೈಲ್ ಚಾರ್ಚ್​ ಮಾಡಲು, ಮಸಾಲಾ ರುಬ್ಬಲು ಕಚೇರಿಗೆ ಹೋಗಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Viral video: ದನದ ಮುಂದೆ ಡಾನ್ಸ್ ಮಾಡಿದ ಯುವತಿ, ಹಾಯಲು ಹೋದ ದನ!

ಅಷ್ಟಕ್ಕೂ ಅಧಿಕಾರಿ ಹಾಗೆ ಹೇಳಿದ್ದೇಕೆ?

“ನಾವು ಮನೆಯಲ್ಲಿ ಅಡುಗೆ ಮಾಡಲು ಮಸಾಲಾವನ್ನು ಹೇಗೆ ಪುಡಿ ಮಾಡಬೇಕು ಎಂದು ನೀವು ಭಾವಿಸಿದ್ದೀರಿ? ನಾವು ನಮ್ಮ ಫೋನ್‌ಗಳನ್ನು ಹೇಗೆ ಚಾರ್ಜ್ ಮಾಡಬೇಕು? ಇದು ಮೂಲಭೂತ ಅವಶ್ಯಕತೆಯಾಗಿದೆ, ಇವುಗಳಿಗಾಗಿ ನಾನು ಪ್ರತಿದಿನ ನನ್ನ ನೆರೆಹೊರೆಯವರ ಮನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹನುಮಂತಪ್ಪ ಅಧಿಕಾರಿ ಬಳಿ ಹೇಳಿದ್ದಾರೆ. ಅದಕ್ಕೆ ಅಧಿಕಾರಿ, ‘’ಹಾಗಾದರೆ ಮೆಸ್ಕಾಂ ಕಚೇರಿಗೆ ಹೋಗಿ ಮಸಾಲಾ ರುಬ್ಬಿಕೊಳ್ಳಿ’’ ಎಂದಿದ್ದಾರೆ.

ಅಧಿಕಾರಿಯ ಮಾತನ್ನು ಗಂಭೀರವಾಗಿ ಪರಿಗಣಿಸಿದ ಹನುಮಂತಪ್ಪ, ಕೆಲವು ಸೆಲ್ ಫೋನ್ ಚಾರ್ಜರ್‌ಗಳು, ಗ್ರೈಂಡರ್ ಮತ್ತು ಜಾರ್‌ನೊಂದಿಗೆ ಮಂಗಳೂರು ವಿದ್ಯುತ್ ಇಲಾಖೆ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಕಛೇರಿಯಲ್ಲಿ ಮಸಾಲೆಗಳನ್ನು ರುಬ್ಬಿ, ತನ್ನ ಮೊಬೈಲ್​ ಅನ್ನು ಚಾರ್ಜ್ ಮಾಡುತ್ತಾರೆ. ಅಲ್ಲದೆ ಹಗಲು ಹೊತ್ತಿನಲ್ಲಿ ಕಚೇರಿಯಲ್ಲಿ ವಿದ್ಯುತ್‌ಗೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಮಾಡುತ್ತಾರೆ.

ಇದನ್ನೂ ಓದಿ: Viral Video: ಚೀನಾದಲ್ಲಿ ಮಕ್ಕಳಿಗೆ ಕ್ರೀಡಾ ತರಬೇತಿ ಹೇಗಿರುತ್ತದೆ ಗೊತ್ತಾ? ಇಲ್ಲಿ ನೋಡಿ

ಹನುಮಂತಪ್ಪ ಅವರು ತಮ್ಮ ಮನೆಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಮೆಸ್ಕಾಂ ಹಾಗೂ ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನ್ಯೂಸ್ 18 ಪ್ರಕಾರ, ಮಳೆಯಿಂದಾಗಿ ಐಪಿ ಸೆಟ್‌ಗಳನ್ನು ಚಾರ್ಜ್ ಮಾಡಲು ಸಾಧ್ಯವಿಲ್ಲ ಎಂದು ಮೆಸ್ಕಾಂ ಕಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ ತಿಂಗಳೊಳಗೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 pm, Mon, 6 June 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್