AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!
ಒಂಟೆ
TV9 Web
| Edited By: |

Updated on: Mar 29, 2022 | 8:37 AM

Share

ಇಸ್ಲಾಂ ಧರ್ಮದ ಪವಿತ್ರ ತಿಂಗಳಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬವು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಈದ್ ಹಬ್ಬಕ್ಕಾಗಿ ಒಂಟೆಗಳನ್ನು ಬಲಿ ಕೊಡುವುದು ನಮಗೆಲ್ಲ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಒಂಟೆ (Camel) ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಹೌದು ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿದೆ. ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟ ವ್ಯಕ್ತಿಯೊಬ್ಬರು ಮೈಕ್ರೊಫೋನ್ ಮೂಲಕ ಹರಾಜಿನಲ್ಲಿ ಬಿಡ್ಡಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಒಂಟೆಯ ಆರಂಭಿಕ ಬಿಡ್​ 5 ಮಿಲಿಯನ್ ಸೌದಿ ರಿಯಾಲ್‌ನಲ್ಲಿ ಇರಿಸಲಾಗಿತ್ತು ಅಂದರೆ ಸುಮಾರು 10.16 ಕೋಟಿ ರೂ.

ಆದಾಗ್ಯೂ, ಅವರ ಬಿಡ್​ನ್ನು 7 ಮಿಲಿಯನ್ ಸೌದಿ ರಿಯಾಲ್‌ಗಳಲ್ಲಿ ಅಂತಿಮಗೊಳಿಸಲಾಯಿತು. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಜನರು ಹರಾಜಿನಲ್ಲಿ ಭಾಗವಹಿಸುತ್ತಿರುವುದು ಕಂಡುಬಂದಿದೆ.

ಈ ಒಂಟೆಯ ವಿಶೇಷತೆ ಏನು?  

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

ಇದನ್ನೂ ಓದಿ:

Viral Video: ಗುರುತ್ವಾಕರ್ಷಣೆ ನಿಯಮವೇ ಇಲ್ಲ ಎಂದ ನೆಟ್ಟಿಗರು; 7 ಸೆಕೆಂಡ್​ನಲ್ಲಿ ಬೆಕ್ಕು ಏನು ಮಾಡಿತು ನೋಡಿ!

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು