AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!
ಒಂಟೆ
TV9 Web
| Edited By: |

Updated on: Mar 29, 2022 | 8:37 AM

Share

ಇಸ್ಲಾಂ ಧರ್ಮದ ಪವಿತ್ರ ತಿಂಗಳಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬವು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಈದ್ ಹಬ್ಬಕ್ಕಾಗಿ ಒಂಟೆಗಳನ್ನು ಬಲಿ ಕೊಡುವುದು ನಮಗೆಲ್ಲ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಒಂಟೆ (Camel) ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಹೌದು ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿದೆ. ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟ ವ್ಯಕ್ತಿಯೊಬ್ಬರು ಮೈಕ್ರೊಫೋನ್ ಮೂಲಕ ಹರಾಜಿನಲ್ಲಿ ಬಿಡ್ಡಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಒಂಟೆಯ ಆರಂಭಿಕ ಬಿಡ್​ 5 ಮಿಲಿಯನ್ ಸೌದಿ ರಿಯಾಲ್‌ನಲ್ಲಿ ಇರಿಸಲಾಗಿತ್ತು ಅಂದರೆ ಸುಮಾರು 10.16 ಕೋಟಿ ರೂ.

ಆದಾಗ್ಯೂ, ಅವರ ಬಿಡ್​ನ್ನು 7 ಮಿಲಿಯನ್ ಸೌದಿ ರಿಯಾಲ್‌ಗಳಲ್ಲಿ ಅಂತಿಮಗೊಳಿಸಲಾಯಿತು. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಜನರು ಹರಾಜಿನಲ್ಲಿ ಭಾಗವಹಿಸುತ್ತಿರುವುದು ಕಂಡುಬಂದಿದೆ.

ಈ ಒಂಟೆಯ ವಿಶೇಷತೆ ಏನು?  

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

ಇದನ್ನೂ ಓದಿ:

Viral Video: ಗುರುತ್ವಾಕರ್ಷಣೆ ನಿಯಮವೇ ಇಲ್ಲ ಎಂದ ನೆಟ್ಟಿಗರು; 7 ಸೆಕೆಂಡ್​ನಲ್ಲಿ ಬೆಕ್ಕು ಏನು ಮಾಡಿತು ನೋಡಿ!

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ