AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!
ಒಂಟೆ
TV9 Web
| Edited By: |

Updated on: Mar 29, 2022 | 8:37 AM

Share

ಇಸ್ಲಾಂ ಧರ್ಮದ ಪವಿತ್ರ ತಿಂಗಳಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬವು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಈದ್ ಹಬ್ಬಕ್ಕಾಗಿ ಒಂಟೆಗಳನ್ನು ಬಲಿ ಕೊಡುವುದು ನಮಗೆಲ್ಲ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಒಂಟೆ (Camel) ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಹೌದು ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿದೆ. ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟ ವ್ಯಕ್ತಿಯೊಬ್ಬರು ಮೈಕ್ರೊಫೋನ್ ಮೂಲಕ ಹರಾಜಿನಲ್ಲಿ ಬಿಡ್ಡಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಒಂಟೆಯ ಆರಂಭಿಕ ಬಿಡ್​ 5 ಮಿಲಿಯನ್ ಸೌದಿ ರಿಯಾಲ್‌ನಲ್ಲಿ ಇರಿಸಲಾಗಿತ್ತು ಅಂದರೆ ಸುಮಾರು 10.16 ಕೋಟಿ ರೂ.

ಆದಾಗ್ಯೂ, ಅವರ ಬಿಡ್​ನ್ನು 7 ಮಿಲಿಯನ್ ಸೌದಿ ರಿಯಾಲ್‌ಗಳಲ್ಲಿ ಅಂತಿಮಗೊಳಿಸಲಾಯಿತು. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಜನರು ಹರಾಜಿನಲ್ಲಿ ಭಾಗವಹಿಸುತ್ತಿರುವುದು ಕಂಡುಬಂದಿದೆ.

ಈ ಒಂಟೆಯ ವಿಶೇಷತೆ ಏನು?  

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

ಇದನ್ನೂ ಓದಿ:

Viral Video: ಗುರುತ್ವಾಕರ್ಷಣೆ ನಿಯಮವೇ ಇಲ್ಲ ಎಂದ ನೆಟ್ಟಿಗರು; 7 ಸೆಕೆಂಡ್​ನಲ್ಲಿ ಬೆಕ್ಕು ಏನು ಮಾಡಿತು ನೋಡಿ!

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?