AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!
ಒಂಟೆ
TV9 Web
| Edited By: |

Updated on: Mar 29, 2022 | 8:37 AM

Share

ಇಸ್ಲಾಂ ಧರ್ಮದ ಪವಿತ್ರ ತಿಂಗಳಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬವು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಈದ್ ಹಬ್ಬಕ್ಕಾಗಿ ಒಂಟೆಗಳನ್ನು ಬಲಿ ಕೊಡುವುದು ನಮಗೆಲ್ಲ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಒಂಟೆ (Camel) ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಹೌದು ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿದೆ. ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟ ವ್ಯಕ್ತಿಯೊಬ್ಬರು ಮೈಕ್ರೊಫೋನ್ ಮೂಲಕ ಹರಾಜಿನಲ್ಲಿ ಬಿಡ್ಡಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಒಂಟೆಯ ಆರಂಭಿಕ ಬಿಡ್​ 5 ಮಿಲಿಯನ್ ಸೌದಿ ರಿಯಾಲ್‌ನಲ್ಲಿ ಇರಿಸಲಾಗಿತ್ತು ಅಂದರೆ ಸುಮಾರು 10.16 ಕೋಟಿ ರೂ.

ಆದಾಗ್ಯೂ, ಅವರ ಬಿಡ್​ನ್ನು 7 ಮಿಲಿಯನ್ ಸೌದಿ ರಿಯಾಲ್‌ಗಳಲ್ಲಿ ಅಂತಿಮಗೊಳಿಸಲಾಯಿತು. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಜನರು ಹರಾಜಿನಲ್ಲಿ ಭಾಗವಹಿಸುತ್ತಿರುವುದು ಕಂಡುಬಂದಿದೆ.

ಈ ಒಂಟೆಯ ವಿಶೇಷತೆ ಏನು?  

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

ಇದನ್ನೂ ಓದಿ:

Viral Video: ಗುರುತ್ವಾಕರ್ಷಣೆ ನಿಯಮವೇ ಇಲ್ಲ ಎಂದ ನೆಟ್ಟಿಗರು; 7 ಸೆಕೆಂಡ್​ನಲ್ಲಿ ಬೆಕ್ಕು ಏನು ಮಾಡಿತು ನೋಡಿ!

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!