AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ.

Viral Video: ವಿಶ್ವದ ಅತ್ಯಂತ ದುಬಾರಿ ಒಂಟೆ; ಬೆಲೆ ಕೇಳಿದ್ರೆ ನಿಜಕ್ಕೂ ದಂಗ್ ಆಗ್ತೀರಾ..!
ಒಂಟೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 29, 2022 | 8:37 AM

Share

ಇಸ್ಲಾಂ ಧರ್ಮದ ಪವಿತ್ರ ತಿಂಗಳಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್ ಹಬ್ಬವು ಬರುತ್ತಿದೆ. ಸೌದಿ ಅರೇಬಿಯಾದಲ್ಲಿ ಈದ್ ಹಬ್ಬಕ್ಕಾಗಿ ಒಂಟೆಗಳನ್ನು ಬಲಿ ಕೊಡುವುದು ನಮಗೆಲ್ಲ ಗೊತ್ತೇ ಇದೆ. ಈ ಕಾರಣಕ್ಕಾಗಿಯೇ ದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ದುಬಾರಿ ಒಂಟೆ (Camel) ಖರೀದಿ ಮಾಡಿದ್ದಾರೆ. ಈ ಒಂಟೆಯೂ 7 ಮಿಲಿಯನ್ ಅಂದರೆ ಸುಮಾರು 14.23 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಹೌದು ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಸೌದಿ ಅರೇಬಿಯಾದಲ್ಲಿ ಈ ಒಂಟೆಗಾಗಿ ಸಾರ್ವಜನಿಕ ಹರಾಜು ಆಯೋಜಿಸಲಾಗಿದೆ. ಹರಾಜಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟ ವ್ಯಕ್ತಿಯೊಬ್ಬರು ಮೈಕ್ರೊಫೋನ್ ಮೂಲಕ ಹರಾಜಿನಲ್ಲಿ ಬಿಡ್ಡಿಂಗ್ ಮಾಡುತ್ತಿರುವುದನ್ನು ಕಾಣಬಹುದು. ಒಂಟೆಯ ಆರಂಭಿಕ ಬಿಡ್​ 5 ಮಿಲಿಯನ್ ಸೌದಿ ರಿಯಾಲ್‌ನಲ್ಲಿ ಇರಿಸಲಾಗಿತ್ತು ಅಂದರೆ ಸುಮಾರು 10.16 ಕೋಟಿ ರೂ.

ಆದಾಗ್ಯೂ, ಅವರ ಬಿಡ್​ನ್ನು 7 ಮಿಲಿಯನ್ ಸೌದಿ ರಿಯಾಲ್‌ಗಳಲ್ಲಿ ಅಂತಿಮಗೊಳಿಸಲಾಯಿತು. ಇಷ್ಟು ಹೆಚ್ಚು ಬಿಡ್ ಮಾಡಿ ಒಂಟೆ ಖರೀದಿಸಿದವರ ಗುರುತು ಬಹಿರಂಗವಾಗಿಲ್ಲ. ವಿಡಿಯೋದಲ್ಲಿ, ಒಂಟೆಯನ್ನು ಚೌಕಾಕಾರದ ಕಬ್ಬಿಣದ ಮಧ್ಯೆ ಇರಿಸಿರುವುದನ್ನು ನೀವು ನೋಡಬಹುದು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಜನರು ಹರಾಜಿನಲ್ಲಿ ಭಾಗವಹಿಸುತ್ತಿರುವುದು ಕಂಡುಬಂದಿದೆ.

ಈ ಒಂಟೆಯ ವಿಶೇಷತೆ ಏನು?  

ಸೌದಿ ಅರೇಬಿಯಾದಲ್ಲಿ ಇಷ್ಟು ದುಬಾರಿ ಬೆಲೆಗೆ ಹರಾಜಾದ ಒಂಟೆ ವಿಶ್ವದ ಅಪರೂಪದ ಒಂಟೆಗಳಲ್ಲಿ ಒಂದಾಗಿದೆ. ಈ ಒಂಟೆ ತನ್ನ ವಿಶೇಷ ಸೌಂದರ್ಯ ಮತ್ತು ಅನನ್ಯತೆಗೆ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಜಗತ್ತಿನಲ್ಲಿ ಈ ಜಾತಿಯ ಒಂಟೆಗಳು ಬಹಳ ಕಡಿಮೆ. ಸೌದಿ ಅರೇಬಿಯಾದಲ್ಲಿ ಜಗತ್ತಿನ ಅತಿ ದೊಡ್ಡ ಒಂಟೆ ಮೇಳವೂ ನಡೆಯುತ್ತದೆ.

ಇದನ್ನೂ ಓದಿ:

Viral Video: ಗುರುತ್ವಾಕರ್ಷಣೆ ನಿಯಮವೇ ಇಲ್ಲ ಎಂದ ನೆಟ್ಟಿಗರು; 7 ಸೆಕೆಂಡ್​ನಲ್ಲಿ ಬೆಕ್ಕು ಏನು ಮಾಡಿತು ನೋಡಿ!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?